ETV Bharat / state

ಚುನಾವಣೆ ಪ್ರಚಾರ ವಾಹನಕ್ಕೆ ಸ್ಮಶಾನದಲ್ಲಿ ಪೂಜೆ ನೆರವೇರಿಸಲಾಗುವುದು: ಸತೀಶ್ ಜಾರಕಿಹೊಳಿ

author img

By

Published : Apr 2, 2023, 3:36 PM IST

Updated : Apr 2, 2023, 6:52 PM IST

ಚುನಾವಣಾ ಪ್ರಚಾರಕ್ಕೆ ವಿಶೇಷ ವಾಹನವನ್ನು ತರಲಾಗಿದ್ದು, ಸ್ಮಶಾನದಲ್ಲಿ ವಾಹನ ಪೂಜೆ ಸಲ್ಲಿಸಿ ಚುನಾವಣೆ ಕಣಕ್ಕೆ ಇಳಿಯಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಹೇಳಿದರು.

election-campaign-vehicle-to-be-worshiped-at-graveyard-satish-jarakiholi
ಚುನಾವಣೆ ಪ್ರಚಾರ ವಾಹನಕ್ಕೆ ಸ್ಮಶಾನದಲ್ಲಿ ಪೂಜೆ ನೆರವೇರಿಸಲಾಗುವುದು: ಸತೀಶ್ ಜಾರಕಿಹೊಳಿ

ಸತೀಶ್ ಜಾರಕಿಹೊಳಿ

ಬೆಳಗಾವಿ: ಈ ಬಾರಿ ವಿಧಾನಸಭೆ ಚುನಾವಣೆ ಹಿನ್ನೆಲೆ ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳಲಾಗಿದೆ. ಪ್ರಚಾರಕ್ಕೆ ವಿಶೇಷ ವಾಹನವನ್ನು ತಯಾರಿಸಲಾಗಿದ್ದು, ನಾಲ್ಕು ಐದು ದಿನದಲ್ಲಿ ಸ್ಮಶಾನದಲ್ಲಿ ವಾಹನ ಪೂಜೆ ಸಲ್ಲಿಸಿ ಚುನಾವಣಾ ಕಣಕ್ಕೆ ಇಳಿಯಲಾಗುವುದು ಮತ್ತು ರಾಹು ಕಾಲದಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಅವರಿಂದು ಬೆಳಗಾವಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘‘ನಾವು ಹೆಚ್ಚು ಮೌಢ್ಯಕ್ಕೆ ಒತ್ತು ನೀಡುವುದಿಲ್ಲ. ಬಸವ ತತ್ವ, ಅಂಬೇಡ್ಕರ್, ಬುದ್ಧನ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮೌಢ್ಯಕ್ಕೆ ಸೆಡ್ಡು ಹೊಡೆದು ಹಲವು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ಅದರಂತೆ ನಾಳೆ ಕೂಡ ಚುನಾವಣಾ ಪ್ರಚಾರದ ವಾಹನಕ್ಕೆ ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ರಾಹು ಕಾಲದಲ್ಲಿ ನಾಮಪತ್ರ ಸಲ್ಲಿಸಲಾಗುವುದೆಂದು’’ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ ಜಿಲ್ಲೆಯಲ್ಲಿ ‌10 ಅಧಿಕ ಸ್ಥಾನ ಗೆಲ್ಲುತ್ತೇವೆ, 12 ಸ್ಥಾನ ಗೆಲ್ಲಬೇಕು ಎಂಬ ಟಾರ್ಗೆಟ್ ಇದೆ. ಕೆಲವು ಕಡೆ ಬಂಡಾಯ ಅಭ್ಯರ್ಥಿಗಳು ಸ್ಪರ್ಧೆ ಮಾಡಿಯೇ ಮಾಡ್ತಾರೆ, ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ನಾವು ಏನೂ ಮಾಡಲು ಸಾಧ್ಯವಿಲ್ಲ, ಅವರೊಂದಿಗೆ ಸಂಧಾನ ಮಾಡುವ ಕಾರ್ಯ ರಾಜ್ಯಮಟ್ಟದಲ್ಲಿ ನಡೆಯುತ್ತಿದೆ. ರಾಯಬಾಗ, ಸವದತ್ತಿ, ಕಿತ್ತೂರು, ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಗೊಂದಲ ಇದ್ದು, ಇಂದು ಸಂಧಾನ ಮಾಡ್ತಿದೀವಿ ಎಂದು ಹೇಳಿದರು.

ಬಿಜೆಪಿ ಎಂಎಲ್‌ಸಿ ಕಾಂಗ್ರೆಸ್ ಹೋಗ್ತಾರೆ ಎಂಬ ಊಹಾಪೋಹ ವಿಚಾರ- ಜಾರಕಿಹೊಳಿ: ಬಿಜೆಪಿ ವಿಧಾನ ಪರಿಷತ್​ ಸದಸ್ಯ ಲಕ್ಷ್ಮಣ ಸವದಿಯವರು ಜಿಲ್ಲಾ, ರಾಜ್ಯ ಕಾಂಗ್ರೆಸ್ ನಾಯಕರಿಗೆ ಎಲ್ಲಿಯೂ ಅಪ್ರೋಚ್ ಆಗಿಲ್ಲಾ, ನಮ್ಮಲ್ಲಿ 10 ಜನ ಆಕಾಂಕ್ಷಿಗಳು ಸಮರ್ಥ ಇದ್ದಾರೆ ಎಂದ ಸತೀಶ್ ಜಾರಕಿಹೊಳಿ ಹೇಳಿದರು.

ಕಾಗವಾಡ್ ಶಾಸಕ ಶ್ರೀಮಂತ್ ಪಾಟೀಲ್ ಹೆಸರು ಹೇಳಿ ಹಲವರು ಹಣ ತೆಗೆದುಕೊಳ್ಳುತ್ತಾರೆ- ಸತೀಶ್​ ಜಾರಕಿಹೊಳಿ: ಶಾಸಕರ ಹೆಸರು ಹೇಳಿ ಹಲವಾರು ಜನರು ಹಣವನ್ನು ತೆಗೆದುಕೊಳ್ಳುತ್ತಾರೆ, ನಾನು ಕೂಡ ಆ ದೃಶ್ಯಗಳನ್ನು ನೋಡಿದ್ದೇನೆ. ಇದರ ಬಗ್ಗೆ ಸಂಪೂರ್ಣ ತನಿಖೆ ಆಗಬೇಕೆಂದು ಸತೀಶ್ ಜಾರಕಿಹೊಳಿ​ ಒತ್ತಾಯಿಸಿದರು.

ಇದನ್ನೂ ಓದಿ : ಕಾರವಾರ: ಬಿಜೆಪಿ ಸೇರಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ; ಪೊಲೀಸರಿಗೆ ದೂರು

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಿವಲಿಂಗೇಗೌಡ : ಹಾಸನ ಜಿಲ್ಲೆಯ ಅರಸಿಕೇರಿ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸ್ವ ಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ಉಲ್ಲೇಖಿಸಿದ್ದು, ಈ ಮೂಲಕ ತಾವು ಕಾಂಗ್ರೆಸ್​ಗೆ ಹೋಗುವ ಬಗ್ಗೆ ಮತ್ತಷ್ಟು ಖಚಿತಪಡಿಸಿದರು.‌ ಅರಸಿಕೇರಿಯಿಂದ ಅಂದಾಜು 300 ಕ್ಕೂ ಅಧಿಕ ಬೆಂಬಲಿಗರೊಂದಿಗೆ ಶಿರಸಿಯ ವಿಧಾನಸಭಾಧ್ಯಕ್ಷರ ಕಚೇರಿಗೆ ಆಗಮಿಸಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ತಮ್ಮ ರಾಜೀನಾಮೆ ಪತ್ರ ನೀಡಿದರು. ಇದರಿಂದಾಗಿ ಎ.ಟಿ. ರಾಮಸ್ವಾಮಿ ನಂತರ ಜೆಡಿಎಸ್​ನ ಎರಡನೇ ವಿಕೆಟ್ ಪತನವಾಗಿದೆ.

ಇದನ್ನೂ ಓದಿ : ಶಿಕಾರಿಪುರದಿಂದಲೇ ವಿಜಯೇಂದ್ರ ಕಣಕ್ಕೆ: ಸಿದ್ದರಾಮಯ್ಯ ವಿರುದ್ಧದ ಸ್ಪರ್ಧೆ ವದಂತಿಗೆ ತೆರೆ ಎಳೆದ ಬಿಎಸ್​ವೈ

Last Updated :Apr 2, 2023, 6:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.