ETV Bharat / state

ನೆರೆ ಸಂತ್ರಸ್ತ ರೈತರಿಗೆ ಶೀಘ್ರ ಪರಿಹಾರ ನೀಡುವಂತೆ ಒತ್ತಾಯ: ರೈತಸಂಘ ಪ್ರತಿಭಟನೆ

author img

By

Published : Aug 26, 2019, 7:58 PM IST

ನೆರೆ ಸಂತ್ರಸ್ತ ರೈತರಿಗೆ ಶೀಘ್ರ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ

ನೆರೆ ಸಂತ್ರಸ್ತರಿಗೆ ಹಾಗೂ ಬೆಳೆ ಹಾನಿಗೊಳಗಾದ ರೈತರಿಗೆ ಶೀಘ್ರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರೈತಸಂಘ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದೆ.

ಬೆಳಗಾವಿ/ಚಿಕ್ಕೋಡಿ: ನೆರೆ ಸಂತ್ರಸ್ತರಿಗೆ ಹಾಗೂ ಬೆಳೆ ಹಾನಿಗೊಳಗಾದ ರೈತರಿಗೆ ಶೀಘ್ರ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚಂದ್ರಶೇಖರ ಕೋಡಿಹಳ್ಳಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.

ರಾಜ್ಯದ ಜಲಾಶಯಗಳ ನಿರ್ವಹಣೆಯ ಹೊಣೆ ಹೊತ್ತ ಸಿಬ್ಬಂದಿ ಹಾಗೂ ಮಹಾರಾಷ್ಟ್ರದ ಬೇಜವಾಬ್ದಾರಿ ನಿರ್ವಹಣೆಯಿಂದ ಅನೇಕ ಗ್ರಾಮಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗುವ ಸಂದರ್ಭ ಉಂಟಾಗಿದೆ. ಇದರಿಂದ ಜನ ಜೀವನದ ಅಪಾರ ಹಾನಿಯ ಉಂಟಾಗಿದೆ. ನಷ್ಟದ ಹೊಣೆಯನ್ನು ಮಹಾರಾಷ್ಟ ಹೊತ್ತು ಶೀಘ್ರವೇ ಪರಿಹಾರ ನೀಡಬೇಕು. ಕೇಂದ್ರ ಇದರಲ್ಲಿ ಮಧ್ಯ ಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದ್ರು.

ನೆರೆ ಸಂತ್ರಸ್ತ ರೈತರಿಗೆ ಶೀಘ್ರ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ

ಸೂಕ್ತ ಪರಿಹಾರ ಒದಗಿಸಿ ಎಂದು ರೈತರಿಂದ ತಹಶೀಲ್ದಾರರಿಗೆ ಮನವಿ:

ನೆರೆ ಸಂತ್ರಸ್ತರು ಸುಮಾರು 10 ಗ್ರಾಮಗಳಿಂದ ಕಾಗವಾಡ ಚಲೋ ಕಾರ್ಯಕ್ರಮ ಮಾಡಿ ನೆರೆ ಹಾವಳಿಯಿಂದ ಹಾಳಾದ ಕಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಿ ಎಂದು ಚಿಕ್ಕೋಡಿಯಲ್ಲಿ ಕಾಗವಾಡ ತಹಶೀಲ್ದಾರ ಪ್ರಮೀಳಾ ದೇಶಪಾಂಡೆ ಅವರಿಗೆ ಮನವಿ‌ ಸಲ್ಲಿಸಿದರು. ಸರ್ಕಾರ ಪ್ರತಿ ಪಂಡಿತರ ಕುಟುಂಬಕ್ಕೆ 1 ಲಕ್ಷ ಪರಿಹಾರ ಸಹಾಯ ಧನ ನೀಡಬೇಕು, ಹಾಳಾದ ಮನೆಗಳನ್ನ ಪುನರ್ ನಿರ್ಮಾಣ ಮಾಡಬೇಕು , ಸಂಪೂರ್ಣ ಬೆಳೆ ನಾಶವಾಗಿದ್ದು, ಪ್ರತಿ ಎಕರೆಗೆ 1 ಲಕ್ಷ ಸಹಾಯಧನ ಮತ್ತು ಮಕ್ಕಳ ಶಿಕ್ಷಣ ಸಂಪೂರ್ಣ ಉಚಿತ ಮಾಡಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.

Intro:ನೆರೆ ಸಂತ್ರಸ್ತ ರೈತರಿಗೆ ಶೀಘ್ರ ಪರಿಹಾರ ನೀಡುವಂತೆ ಒತ್ತಾಯಿಸಿ ರೈತಸಂಘ ಪ್ರತಿಭಟನೆ

ಬೆಳಗಾವಿ : ನೆರೆ ಸಂತ್ರಸ್ತರಿಗೆ ಹಾಗೂ ಬೆಳೆ ಹಾನಿಗೊಳಗಾದ ರೈತರಿಗೆ ಶೀಘ್ರ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚಂದ್ರಶೇಖರ ಕೋಡಿಹಳ್ಳಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಸೋಮವಾರ ಮನವಿ ಸಲ್ಲಿಸಿದರು.


Body:ಧರ್ಮಿವೀರ ಸಂಭಾಜಿ ಚೌಕದಲ್ಲಿ ರೈತರು ಜಮಾಗೊಂಡು ಸಂಭಾಜಿ ಮಹಾರಾಜ ಮೂರ್ತಿಗೆ ಮಾರ್ಲಾಪಣೆ ಮಾಡುವ ಮೂಲಕ ಪಾದ ಯಾತ್ರೆಯ ಮೂಲಕ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ಆಗಮಿಸಿ ಮನವಿ ಸಲ್ಲಿಸಿದರು. ಇದೇ ವೇಳೆ ಮಹಾರಾಷ್ಟ್ರ
ಹಾಗೂ ರಾಜ್ಯ ಸರಕಾರ ಜನಪ್ರತಿನಿಧಿಗಳು, ಅಧಿಕಾರಿಗಳು ವಿರುದ್ಧ ದಿಕ್ಕಾರ ಕೂಗಿದರು.

Conclusion:ರಾಜ್ಯದ ಜಲಾಶಯಗಳ ನಿರ್ವಹಣೆಯ ಹೊಣೆ ಹೊತ್ತ ಸಿಬ್ಬಂದಿ ಹಾಗೂ ಮಹಾರಾಷ್ಟ್ರದ ಬೇಜವಾಬ್ದಾರಿ ನಿರ್ವಹಣೆಯಿಂದ ಅನೇಕ ಗ್ರಾಮಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗುವ ಸಂದರ್ಭ ಉಂಟಾಗಿದೆ. ಇದರಿಂದ ಜನ ಜೀವನದ ಅಪಾರ ಹಾನಿಯ ಉಂಟಾಗಿದೆ. ನಷ್ಟದ ಹೊಣೆಯನ್ನು ಮಹಾರಾಷ್ಟ ಹೊತ್ತು ಶೀಘ್ರವೇ ಪರಿಹಾರ ನೀಡಬೇಕು. ಕೇಂದ್ರ ಇದರಲ್ಲಿ ಮಧ್ಯ ಪ್ರವೇಶ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪ ಪಡೆಯಲಿದೆ ಎಂದರು.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.