ETV Bharat / state

ವರುಣಾರ್ಭಟಕ್ಕೆ ಬೆಳಗಾವಿಯ ನಾಲ್ಕು ಸೇತುವೆಗಳು ಜಲಾವೃತ - ಸಂಚಾರ ಸ್ಥಗಿತ!

author img

By

Published : Jul 16, 2022, 12:18 PM IST

Updated : Jul 16, 2022, 12:46 PM IST

Four bridges of Belagavi are flooded due to rain
ವರುಣಾರ್ಭಟಕ್ಕೆ ಬೆಳಗಾವಿಯ ನಾಲ್ಕು ಸೇತುವೆಗಳು ಜಲಾವೃತ

ಭಾರಿ ಮಳೆ ಹಿನ್ನೆಲೆ ಅವರಾದಿ - ಮಹಾಲಿಂಗಾಪುರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ, ಸುಣಧೋಳ -ಮೂಡಲಗಿಗೆ ಸಂಪರ್ಕ ಕಲ್ಪಿಸುವ ಸೇತುವೆ, ವಡೇರಹಟ್ಟಿ- ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ಸೇತುವೆ ಹಾಗೂ ಮೂಡಲಗಿ - ಭೈರನಹಟ್ಟಿಗೆ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತವಾಗಿವೆ.

ಬೆಳಗಾವಿ: ಪಶ್ಚಿಮಘಟ್ಟ ಮತ್ತು ಜಿಲ್ಲಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಮೂಡಲಗಿ ತಾಲೂಕಿನ ನಾಲ್ಕು ಸೇತುವೆಗಳು ಜಲಾವೃತವಾಗಿದೆ. ಕೆಲ ಬೈಕ್ ಸವಾರರು ಅಪಾಯ ಲೆಕ್ಕಿಸದೇ ಜಲಾವೃತವಾದ ಸೇತುವೆ ಮೇಲೆಯೇ ಸಂಚರಿಸಿದ್ದಾರೆ.

ಸೇತುವೆಗಳು ಜಲಾವೃತ !

ಪ್ರಮುಖವಾಗಿ ಅವರಾದಿ - ಮಹಾಲಿಂಗಾಪುರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ, ಸುಣಧೋಳ -ಮೂಡಲಗಿಗೆ ಸಂಪರ್ಕ ಕಲ್ಪಿಸುವ ಸೇತುವೆ, ವಡೇರಹಟ್ಟಿ-ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ಸೇತುವೆ ಹಾಗೂ ಮೂಡಲಗಿ-ಭೈರನಹಟ್ಟಿಗೆ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತವಾಗಿವೆ. ಪರಿಣಾಮ ಈ ಗ್ರಾಮಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಚಾರ ಸ್ಥಗಿತವಾಗಿದೆ.

ಸದ್ಯ ಬಳ್ಳಾರಿ ನಾಲಾ, ಮಾರ್ಕಂಡೇಯ, ಹಿರಣ್ಯಕೇಶಿ ನದಿಗಳಿಂದ ಘಟಪ್ರಭಾ ನದಿಗೆ 14,227 ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಿದೆ. ಹೀಗಾಗಿ ಮೂಡಲಗಿ - ಗೋಕಾಕ ತಾಲೂಕಿನ ಭಾಗದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಘಟಪಭ್ರಾ ನದಿಯಿಂದ ಮುಳುಗಡೆಯಾಗಿರುವ ಸುಣಧೋಳಿ-ಮೂಡಲಗಿ ಸೇತುವೆ ಮೇಲೆ ಬೈಕ್ ಸವಾರರು ಸಂಚಾರ ನಡೆಸಿದ್ದಾರೆ. ಸ್ವಲ್ಪ ಆಯ ತಪ್ಪಿಬಿದ್ದರೂ ನದಿ ಪಾಲಾಗುವ ಆತಂಕ ಎದುರಾಗಿದೆ‌. ಜಿಲ್ಲಾಡಳಿತ ಈಗಲೇ ಕ್ರಮ ಕೈಗೊಳ್ಳದಿದ್ದರೆ ಅಪಾಯ ಕಟ್ಟಿಟ್ಟಬುತ್ತಿ ಎನ್ನುತ್ತಾರೆ ಗ್ರಾಮಸ್ಥರು.

ಇದನ್ನೂ ಓದಿ: ಅಪಾಯದ‌ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಜಲಪಾತಗಳು: ವಿಭೂತಿ, ನಾಗರಮಡಿ, ಗೋಲಾರಿ ಫಾಲ್ಸ್​ಗೆ ಪ್ರವಾಸಿಗರ ನಿಷೇಧ

Last Updated :Jul 16, 2022, 12:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.