ETV Bharat / state

ಅಥಣಿ ಹೆಸ್ಕಾಂ ನೌಕರನ ಆತ್ಮಹತ್ಯೆ ಕೇಸ್​.. ಡೆತ್​ ನೋಟ್​ನಿಂದ ಪ್ರಕರಣಕ್ಕೆ ಟ್ವಿಸ್ಟ್​

author img

By

Published : Sep 13, 2022, 10:55 AM IST

hescom-employ-commit-suicide
ಅಥಣಿ ಹೆಸ್ಕಾಂ ನೌಕರನ ಆತ್ಮಹತ್ಯೆ

ಹೆಸ್ಕಾಂನಲ್ಲಿ ಗುತ್ತಿಗೆ ನೌಕರ ಮಂಜುನಾಥ ಮುತ್ತಗಿ ಎಂಬವರು ಅಥಣಿಯ ವಿದ್ಯುತ್ ವಿತರಣಾ ಕೇಂದ್ರ ಆವರಣದ ವಿದ್ಯುತ್ ಕಂಬಗಳನ್ನು ನೆಡುವ ಟ್ರ್ಯಾಕ್ಟರ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿರುವ ಡೆತ್​ನೋಟ್​ ಪತ್ತೆಯಾಗಿದ್ದು, ಪ್ರಕರಣಕ್ಕೆ ತಿರುವು ಸಿಕ್ಕಿದೆ.

ಅಥಣಿ(ಬೆಳಗಾವಿ): ಸೋಮವಾರ ಅಥಣಿ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಓರ್ವ ಕಾರ್ಮಿಕ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇದೀಗ ಹೊಸತಿರುವು ಪಡೆದುಕೊಂಡಿದೆ. 'ಮೇಲಾಧಿಕಾರಿ, ಓರ್ವ ಲೈನ್​ಮ್ಯಾನ್​ನಿಂದ ಕಿರುಕುಳ ಹಾಗೂ ಭೇದಭಾವದಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ' ಎಂದು ಡೆತ್ ನೋಟ್​ನಲ್ಲಿ ಮೃತ ಮಂಜುನಾಥ್ ಮುತ್ತಗಿ ಉಲ್ಲೇಖ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

death note
ಡೆತ್​ ನೋಟ್

ಘಟನೆ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಆತ್ಮಹತ್ಯೆ ಮಾಡಿಕೊಂಡಿರುವ ಮಂಜುನಾಥ ಮುತ್ತಗಿ ಪತ್ನಿ ಲಕ್ಷ್ಮೀ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, 'ನನ್ನ ಪತಿಯ ಸಾವಿಗೆ ಅಥಣಿ ಹೆಸ್ಕಾಂ ಅಧಿಕಾರಿ ನಜೀರ್ ಡಲಾಯತ್, ಲೈನ್‍ಮ್ಯಾನ್ ಬಸವರಾಜ ಕುಂಬಾರ' ಕಾರಣ ಎಂದು ಆರೋಪಿಸಿದ್ದಾರೆ.

ನನ್ನ ಪತಿಗೆ ಭೇದಭಾವ, ಮಾನಸಿಕ ಹಿಂಸೆ ಮತ್ತು ಕಿರುಕುಳ ನೀಡುತ್ತಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಲಕ್ಷ್ಮೀ ಉಲ್ಲೇಖಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಅಥಣಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : ಬೆಳಗಾವಿ: ಹೆಸ್ಕಾಂ ಆವರಣದಲ್ಲಿ ನೇಣಿಗೆ ಶರಣಾದ ನೌಕರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.