ETV Bharat / state

ಬೆಳಗಾವಿ ಪಾಲಿಕೆ ಚುನಾವಣೆ: ಬಂಡಾಯ ಅಭ್ಯರ್ಥಿಗಳನ್ನ ಉಚ್ಛಾಟಿಸಿದ ಬಿಜೆಪಿ - ಕಾಂಗ್ರೆಸ್

author img

By

Published : Aug 31, 2021, 5:41 PM IST

ಪಕ್ಷದ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದವರಿಗೆ ರಾಷ್ಟ್ರೀಯ ಪಕ್ಷಗಳು ಶಾಕ್ ನೀಡಿವೆ. ಬಿಜೆಪಿ 7 ಹಾಗೂ ಕಾಂಗ್ರೆಸ್ ಇಬ್ಬರು ರೆಬಲ್ ಅಭ್ಯರ್ಥಿಗಳನ್ನು ಉಚ್ಛಾಟಿಸಿ ಆದೇಶ ಹೊರಡಿಸಿವೆ.

ಬೆಳಗಾವಿ ಪಾಲಿಕೆ ಚುನಾವಣೆ
ಬೆಳಗಾವಿ ಪಾಲಿಕೆ ಚುನಾವಣೆ

ಬೆಳಗಾವಿ : ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಆದೇಶ ಉಲ್ಲಂಘಿಸಿ ಮಹಾನಗರ ‌ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಂಡಾಯ ಅಭ್ಯರ್ಥಿಗಳನ್ನ ಉಭಯ ಪಕ್ಷಗಳು ಉಚ್ಛಾಟಿಸಿವೆ.

ಬಂಡಾಯ ಅಭ್ಯರ್ಥಿಗಳನ್ನ ಉಚ್ಛಾಟಿಸಿದ ಬಿಜೆಪಿ- ಕಾಂಗ್ರೆಸ್
ಬಂಡಾಯ ಅಭ್ಯರ್ಥಿಗಳನ್ನ ಉಚ್ಛಾಟಿಸಿದ ಬಿಜೆಪಿ- ಕಾಂಗ್ರೆಸ್

ಪಕ್ಷದ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದವರಿಗೆ ರಾಷ್ಟ್ರೀಯ ಪಕ್ಷಗಳು ಶಾಕ್ ನೀಡಿವೆ. ಬಿಜೆಪಿ 7 ಹಾಗೂ ಕಾಂಗ್ರೆಸ್ ಇಬ್ಬರು ರೆಬಲ್ ಅಭ್ಯರ್ಥಿಗಳನ್ನು ಉಚ್ಛಾಟಿಸಿ ಆದೇಶ ಹೊರಡಿಸಿವೆ.

ಬಂಡಾಯ ಅಭ್ಯರ್ಥಿಗಳನ್ನ ಉಚ್ಛಾಟಿಸಿದ ಬಿಜೆಪಿ- ಕಾಂಗ್ರೆಸ್
ಬಂಡಾಯ ಅಭ್ಯರ್ಥಿಗಳನ್ನ ಉಚ್ಛಾಟಿಸಿದ ಬಿಜೆಪಿ- ಕಾಂಗ್ರೆಸ್

ಬಿಜೆಪಿಯಿಂದ ದೀಪಕ್ ಜಮಖಂಡಿ, ಶಿವಾನಂದ ಮುಗಳಿಹಾಳ, ಗಣೇಶ್ ನಂದಗಡಕರ, ಸಂಜಯ್ ಸವ್ವಾಶೇರಿ, ಆರತಿ ಪಾಟೋಳೆ, ಶಿವಾನಂದ ಮುರಗೋಡ, ಜ್ಯೋತಿ ಭಾವಿಕಟ್ಟಿ ಉಚ್ಛಾಟನೆ ಮಾಡಿ ಬಿಜೆಪಿ ಬೆಳಗಾವಿ ನಗರ ಅಧ್ಯಕ್ಷ ಶಶಿಕಾಂತ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಬಂಡಾಯ ಅಭ್ಯರ್ಥಿಗಳನ್ನ ಉಚ್ಛಾಟಿಸಿದ ಬಿಜೆಪಿ- ಕಾಂಗ್ರೆಸ್
ಬಂಡಾಯ ಅಭ್ಯರ್ಥಿಗಳನ್ನ ಉಚ್ಛಾಟಿಸಿದ ಬಿಜೆಪಿ- ಕಾಂಗ್ರೆಸ್

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳಾದ ಜಯಶ್ರೀ ಮಾಳಗಿ, ಜಯರಾಜ್ ಹಲಗೇಕರ ಉಚ್ಛಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ದೃವನಾರಾಯಣ ಆದೇಶ ಹೊರಡಿಸಿದ್ದಾರೆ. ಮತದಾನಕ್ಕೆ ಮೂರು ದಿನ ಬಾಕಿ ಇರುವಾಗಲೇ ಬಂಡಾಯ ಅಭ್ಯರ್ಥಿಗಳ ವಿರುದ್ಧ ರಾಷ್ಟ್ರೀಯ ಪಕ್ಷಗಳು ಶಿಸ್ತು ಕ್ರಮ ಜರುಗಿಸಿವೆ.

ಇದನ್ನೂ ಓದಿ : ಬೆಳಗಾವಿ ಪಾಲಿಕೆ ಚುನಾವಣೆ: 58 ವಾರ್ಡ್​​ಗಳಿಗೆ ಬರೋಬ್ಬರಿ 519 ನಾಮಪತ್ರ ಸಲ್ಲಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.