ETV Bharat / state

ಕೃಷ್ಣಾ ನದಿಗೆ ಲಕ್ಷ ಕ್ಯೂಸೆಕ್​ ನೀರು ಒಳಹರಿವು.. ನದಿ ತೀರದ ಜನರು ಎಚ್ಚರಿಕೆಯಿಂದ ಇರಲು ಡಿಸಿ ಸೂಚನೆ

author img

By

Published : Jul 23, 2023, 8:26 PM IST

Updated : Jul 23, 2023, 8:43 PM IST

District Collector Nitesh Patil spoke to reporters.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸುದ್ದಿಗಾರರೊಂದಿಗೆ ಮಾತನಾಡಿದರು.

ದೂಧ್​ಗಂಗಾ ನದಿ ತೀರದ ನಿಪ್ಪಾಣಿ ತಾಲೂಕಿನ ಹಲವು ಗ್ರಾಮಗಳಿಗೆ, ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕೃಷ್ಣಾ ನದಿ ತೀರದ ಪ್ರದೇಶವನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವೀಕ್ಷಣೆ ಮಾಡಿದರು.

ಕೃಷ್ಣಾ ನದಿ ತೀರದ ಪ್ರದೇಶವನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವೀಕ್ಷಣೆ ಮಾಡಿದರು.

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ನದಿಗಳಿಂದ ಪ್ರವಾಹ ಪರಿಸ್ಥಿತಿ ಉಂಟಾಗಿಲ್ಲ. ಆದ್ರೆ ಇನ್ನೂ ನಾಲ್ಕು ದಿನ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜುಲೈ 27ರ ವರೆಗೆ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಲಹೆ ನೀಡಿದ್ದಾರೆ.

ನಿಪ್ಪಾಣಿ ತಾಲೂಕಿನ ದೂಧ್​ ಗಂಗಾ ನದಿ ತೀರದ ಹಲವು ಗ್ರಾಮಗಳಿಗೆ ಹಾಗೂ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕೃಷ್ಣಾ ನದಿ ತೀರದ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಕಳೆದ ನಾಲ್ಕೈದು ದಿನಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಆಗ್ತಿದೆ. ಕೃಷ್ಣಾ ನದಿಗೆ ಒಂದು ಲಕ್ಷ ಕ್ಯೂಸೆಕ್​ ನೀರು ಹರಿದು ಬರುತ್ತಿದೆ. ಮಲಪ್ರಭಾ ನದಿಗೆ 13 ಸಾವಿರ, ಘಟಪ್ರಭಾ ನದಿಗೆ 30 ಸಾವಿರ ಕ್ಯೂಸೆಕ್​ ನೀರು ಹರಿದು ಬರ್ತಿದೆ. ದೂಧ್ ಗಂಗಾ 9 ಸಾವಿರ ಕ್ಯೂಸೆಕ್​, ವೇದಗಂಗಾ ನದಿಗೆ 13 ಸಾವಿರ ಕ್ಯೂಸೆಕ್​ ನೀರು ಹರಿದು ಬರುತ್ತಿದೆ ಎಂದು ಮಾಹಿತಿ ನೀಡಿದರು.

ಸದ್ಯ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಜಿಲ್ಲೆಯ ಕೆಳಹಂತದ ಸೇತುವೆಗಳು ಮುಳುಗಡೆ ಆಗಿವೆ. ಪ್ರವಾಹ ಪರಿಸ್ಥಿತಿ ಬಂದ್ರು ಸಹ ಜಿಲ್ಲಾಡಳಿತ ಎದುರಿಸಲು ಸಿದ್ಧವಾಗಿದೆ. ಪ್ರವಾಹ ಪರಿಸ್ಥಿತಿ ಉಂಟಾದ್ರೆ ಎದುರಿಸಲು ಜಿಲ್ಲೆಯಲ್ಲಿ ಈಗಾಗಲೇ ಒಂದು ಎನ್‌‌ಡಿಆರ್‌ಎಫ್​ ಹಾಗೂ ಎಸ್‌ಡಿಆರ್‌ಎಫ್ ತಂಡ ಬೀಡು ಬಿಟ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಯಾರೂ ಸಹ ಆತಂಕಪಡುವ ಅಗತ್ಯವಿಲ್ಲ. ಕೆಲವು ಕಡೆ ಈಗಾಗಲೇ ಕಾಳಜಿ ಕೆಂದ್ರಗಳನ್ನು ಸಹ ತೆರೆಯಲಾಗಿದೆ. ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಇನ್ನೂ ನಾಲ್ಕು ದಿನ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದ ನದಿ ತೀರದ ತೋಟದ ವಸತಿ ಜನರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಆಗುವಂತೆ ಜನರಿಗೆ ಅವರು ಮನವಿ ಮಾಡಿದರು.

ಈ ವಾರದಲ್ಲಿ ಉತ್ತಮ ಮಳೆ ಬೀಳುತ್ತಿರುವದರಿಂದ ಹಿಡಕಲ್ ಜಲಾಶಯ ನಾಲ್ವತ್ತು ಪ್ರತಿಶತ ತುಂಬಿದೆ. ಇನ್ನೂ ಇದೆ ರೀತಿ ಮುಂದಿನ ದಿನಗಳಲ್ಲಿ ನಮಗೆ ಉತ್ತಮ ಮಳೆ ಆಗಬೇಕಿದೆ. ಇದರಿಂದ ಎಲ್ಲಾ ಜಲಾಶಯಗಳು ತುಂಬುತ್ತವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬೋಟ್​ದಲ್ಲಿ ನದಿ ತೀರದ ಪ್ರದೇಶ ವೀಕ್ಷಣೆ ಮಾಡಿದ ಡಿ‌ಸಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಬೀಳುತ್ತಿರುವ ಹಿನ್ನೆಲೆ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಸದ್ಯ ನದಿಯಲ್ಲಿ 1 ಲಕ್ಷ ಕ್ಯೂಸೆಕ್‌ಗೂ ಹೆಚ್ಚು ನೀರಿನ ಒಳಹರಿವು ಹೆಚ್ಚಾಗಿದೆ. ಯಡೂರು ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಬೋಟ್‌ ಮೂಲಕ ತೆರಳಿದ ಡಿಸಿ ನಿತೇಶ್ ಪಾಟೀಲ್ ನದಿ ಪ್ರದೇಶ ವೀಕ್ಷಣೆ ಮಾಡಿದರು.

ಯಡೂರು ಗ್ರಾಮದಿಂದ ಕಲ್ಲೋಳ ಗ್ರಾಮದ ವರೆಗೆ ಬೋಟ್‌ನಲ್ಲಿಯೇ ತೆರಳಿ ಕೃಷ್ಣಾ ನದಿ ನೀರನ್ನು ವೀಕ್ಷಣೆ ಮಾಡಿದರು. ಬೆಳಗಾವಿ ಜಿಲ್ಲಾಧಿಕಾರಿಗಳ ನೇತೃತ್ವದ ಅಧಿಕಾರಿಗಳ ತಂಡ ನದಿ ವೀಕ್ಷಣೆ ಮಾಡಿ ಮಾಹಿತಿ ಪಡೆಯಿತು. ಈ ವೇಳೆ ಬೆಳಗಾವಿ ಎಸ್‌ಪಿ ಡಾ. ಸಂಜೀವ್ ಪಾಟೀಲ್, ಜಿ ಪಂ ಸಿಇಒ ಹರ್ಷಲ್ ಭೋಯರ್ ಚಿಕ್ಕೋಡಿ ಉಪವಿಭಾಗಾಧಿಕಾರಿ ಮಹಾದೇವಿ ಗಿತ್ತೆ ಸೇರಿ ಹಲವರು ಸಾಥ್​ ನೀಡಿದರು.

ಇದನ್ನೂ ಓದಿ:ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಚುರುಕುಗೊಂಡ ಮಳೆ.. ಲಿಂಗನಮಕ್ಕಿಗೆ ಒಂದೇ ದಿನ ಮೂರುವರೆ ಅಡಿ ನೀರು

Last Updated :Jul 23, 2023, 8:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.