ETV Bharat / state

ಸಿಂದಗಿ, ಬಸವಕಲ್ಯಾಣ ಉಪಚುನಾವಣೆ ತಂತ್ರ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಳಕೆ: ಲಕ್ಷ್ಮಣ್ ಸವದಿ

author img

By

Published : Nov 5, 2021, 9:46 AM IST

ಇದೇ ತಿಂಗಳ 9ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಚಿಂತನ-ಮಂಥನ ಸಭೆ ನಡೆಸಲಾಗುವುದು. ಸಭೆಯಲ್ಲಿ ಹಾನಗಲ್ ಉಪಚುನಾವಣೆ ಸೋಲಿನ ಕುರಿತು ಚರ್ಚಿಸಲಾಗುವುದು ಎಂದಿದ್ದಾರೆ. ಸಿಂದಗಿ, ಬಸವಕಲ್ಯಾಣ ಉಪಚುನಾವಣೆ ತಂತ್ರವನ್ನು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾರ್ಯಗತ ಮಾಡಲಾಗುವುದು ಎಂದು ಮಾಜಿ ಡಿಸಿಎಂ ಲಕ್ಷ್ಮಣ್​ ಸವದಿ ಹೇಳಿದ್ದಾರೆ.

lakshman-savadi
ಲಕ್ಷ್ಮಣ್ ಸವದಿ

ಅಥಣಿ (ಬೆಳಗಾವಿ): ಹಾನಗಲ್ ಉಪಚುನಾವಣೆ ಸೋಲಿನ ಕುರಿತಂತೆ ಇದೇ ತಿಂಗಳ 9ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಚಿಂತನ-ಮಂಥನ ಸಭೆ ನಡೆಸಲಾಗುವುದು ಎಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಹಾನಗಲ್ ಉಪಚುನಾವಣೆ ಸೋಲಿನ ಕುರಿತು ಚರ್ಚಿಸಲಾಗುವುದು. ಸಿಂದಗಿ, ಬಸವಕಲ್ಯಾಣ ಉಪಚುನಾವಣೆ ತಂತ್ರವನ್ನು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾರ್ಯಗತ ಮಾಡಲಾಗುವುದು ಎಂದಿದ್ದಾರೆ.

ಹಾನಗಲ್ ಉಪಚುನಾವಣೆ ಸೋಲಿಗೆ ನ.9ರಂದು ಚಿಂತನ-ಮಂಥನ ಸಭೆ: ಲಕ್ಷ್ಮಣ್ ಸವದಿ

ನಾವು ಜನರ ತೀರ್ಪನ್ನು ಸ್ವಾಗತಿಸುತ್ತೇವೆ. ಹಾನಗಲ್ ಕ್ಷೇತ್ರದಲ್ಲಿ ಅಚ್ಚುಕಟ್ಟಾಗಿ ಚುನಾವಣೆ ಮಾಡಿದ್ದರು. ಹಾನಗಲ್ ಶಾಸಕ ಶ್ರೀನಿವಾಸ್​​ ಮಾನೆ ಹಿಂದೆ ಕೊರೊನಾ ಸಂದರ್ಭದಲ್ಲಿ ಜನರಿಗೆ ಸಹಾಯ, ಸಂಪರ್ಕ ಮಾಡಿದ್ದರಿಂದ ಜನರು ಅವರನ್ನು ಆಯ್ಕೆ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋಲಿಗೆ ಇದೂ ಒಂದು ಪ್ರಮುಖ ಕಾರಣವಾಯಿತು ಎಂದಿದ್ದಾರೆ.

ಮುಂದಿನ ಸಾರ್ವತ್ರಿಕ ಚುನಾವಣೆ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ ನಡೆಯಲಿದೆ. ಈಗಾಗಲೇ ಕೇಂದ್ರ ಸಚಿವ ಅಮಿತ್ ಶಾ ಅವರು ಈ ಕುರಿತಂತೆ ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ನಮ್ಮ ಪಕ್ಷದ ನಾಯಕರಲ್ಲಿ ಯಾವುದೇ ಅಸಮಾಧಾನವಿಲ್ಲ. ನಾವು ಮುಂದಿನ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದ್ದೇವೆ ಎಂದು ಹೇಳಿದರು.

ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿರ್ವಹಿಸುತ್ತೇನೆ..

ಸಿಂದಗಿ ಉಪಚುನಾವಣೆಯ ಗೆಲುವಿನ ಹಿಂದೆ ಕಾರ್ಯಕರ್ತರ ಶ್ರಮ-ತ್ಯಾಗದ ಫಲವಿದೆ. ನಾನು ಬಿಜೆಪಿ ಸಾಮಾನ್ಯ ಕಾರ್ಯಕರ್ತರಾಗಿ ಸಿಂದಗಿ ಉಪಚುನಾವಣೆ ನೇತೃತ್ವ ವಹಿಸಿದ್ದೆ. ಈ ಗೆಲುವಿಗೆ ನಾನು ಯಾವುದೇ ಪದವಿ, ಸ್ಥಾನಮಾನದ ಬಗ್ಗೆ ಅಪೇಕ್ಷೆ ಪಡುವುದಿಲ್ಲ. ನಾನು ಸಚಿವ ಸ್ಥಾನದ ಬಗ್ಗೆ ಯಾವತ್ತೂ ಲಾಭಿ ಸಹ ಮಾಡುವುದಿಲ್ಲ ಎಂದು ಸವದಿ ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ತೈಲ ಬೆಲೆ ಇಳಿಸಿರುವುದು ಸ್ವಾಗತಾರ್ಹ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಜನರು ಸಂತಸಗೊಂಡಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಇಳಿಕೆ: ರಾಜ್ಯದ ಜನ ಏನಂತಾರೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.