ETV Bharat / state

30 ವರ್ಷದ ಹಿಂದೆಯೇ ಕಾಂಗ್ರೆಸ್ ಸರ್ಕಾರ ಅಗ್ನಿಪಥ್ ಯೋಜನೆ ರೂಪಿಸಿತ್ತು: ಲಕ್ಷ್ಮಣ್ ಸವದಿ

author img

By

Published : Jun 25, 2022, 4:50 PM IST

Updated : Jun 25, 2022, 4:57 PM IST

Laxman Savadi reaction about agneepath scheme in Belagavi
ಲಕ್ಷ್ಮಣ್ ಸವದಿ

ಕಳೆದ 30 ವರ್ಷದ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಈ ಯೋಜನೆ ರೂಪಿಸತ್ತು. ಆದರೆ ನಮ್ಮ ಸರ್ಕಾರ ಈ ಯೋಜನೆ ಜಾರಿಗೆ ತರುತ್ತಿದೆ. ಆದರೆ ಕಾಂಗ್ರೆಸ್ ಅವರಿಗೆ ಅರಿವು ಇಲ್ಲದೆ ಸುಮ್ಮನೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಹೇಳಿದರು.

ಅಥಣಿ(ಬೆಳಗಾವಿ): ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶದ ಯುವಕರ ನಿರುದ್ಯೋಗ ಹೋಗಲಾಡಿಸಲು ಅಗ್ನಿಪಥ್ ಯೋಜನೆಯನ್ನು ಅನುಷ್ಠಾನ ಮಾಡಿದ್ದಾರೆ. ಕಳೆದ 30 ವರ್ಷದ ಹಿಂದೆಯೇ ಕಾಂಗ್ರೆಸ್ ಸರ್ಕಾರ ಈ ಯೋಜನೆ ರೂಪಿಸಿತ್ತು. ಆದರೆ ನಮ್ಮ ಸರ್ಕಾರ ಇದನ್ನು ಜಾರಿಗೆ ತರುತ್ತಿದೆ. ಆದರೆ ಕಾಂಗ್ರೆಸ್ ಅವರಿಗೆ ಅರಿವು ಇಲ್ಲದೆ ಸುಮ್ಮನೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಹೇಳಿದರು.

ಅವರು ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ. ಅಗ್ನಿಪಥ್ ಯೋಜನೆಯಿಂದ ಚಿಕ್ಕ ವಯಸ್ಸಿನಲ್ಲೇ ನಾಲ್ಕು ವರ್ಷ ದೇಶ ಸೇವೆ ಮಾಡುತ್ತಾರೆ. ತಮ್ಮ ಜೀವನ ರೂಪಿಸಿಕೊಳ್ಳಲು ಒಂದು ಯೋಜನೆ ಇದಾಗಿದೆ ಮತ್ತು ದೇಶ ಸೇವೆ ಸಲ್ಲಿಸಲು ಅವಕಾಶ ಸಿಗುತ್ತದೆ. ಕೆಲವು ರಾಷ್ಟ್ರಗಳಲ್ಲಿ ದೇಶ ಸೇವೆಗೆ ಇಂತಿಷ್ಟು ವರ್ಷಗಳ ಕಾಲ ಸೇನೆಯಲ್ಲಿ ಕೆಲಸ ಮಾಡುವ ಕಾನೂನು ಜಾರಿಯಲ್ಲಿದೆ.

30 ವರ್ಷದ ಹಿಂದೆಯೇ ಕಾಂಗ್ರೆಸ್ ಸರ್ಕಾರ ಅಗ್ನಿಪಥ್ ಯೋಜನೆ ರೂಪಿಸಿತ್ತು

ನಮ್ಮ ದೇಶದಲ್ಲಿ ಸೇನೆ ಸೇರಬೇಕೆಂಬ ಯುವಕರು ಕೇವಲ ನಾಲ್ಕು ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಬಹುದು. ಮತ್ತೆ ಕೆಲಸ ಮಾಡಲು ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ ಅವರಿಗೆ ಅವಕಾಶ ಸಿಗುತ್ತದೆ. ಯುವಕರು ವದಂತಿಗಳನ್ನು ನಂಬಬೇಡಿ ಎಂದು ಲಕ್ಷ್ಮಣ್ ಸವದಿ ಕಿವಿಮಾತು ಹೇಳಿದರು.

ಇದನ್ನೂ ಓದಿ: ಬಿಬಿಎಂಪಿ ವಾರ್ಡ್ ಮರುವಿಂಗಡಣೆ: ವಿಪಕ್ಷದವರಿಂದ ರಾಜಕೀಯಕ್ಕಾಗಿ ಆರೋಪ ಎಂದ ಸಿಎಂ

Last Updated :Jun 25, 2022, 4:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.