ಚಿಕ್ಕೋಡಿಯಲ್ಲಿ ರಾಜಾರೋಷವಾಗಿ ರೈತರ ಜಮೀನಿನಲ್ಲಿ ಓಡಾಡುತ್ತಿರೋ ಚಿರತೆ : ಭಯಭೀತರಾದ ಜನತೆ..!

author img

By

Published : Aug 4, 2022, 11:21 AM IST

leopard-found-in-chikkodi-belgaum

ಬೆಳಗಾವಿ ಜಿಲ್ಲೆಯ ಚಂದೂರ ಟೇಕ್ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಈ ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಂದೂರ ಟೇಕ್ ಗ್ರಾಮದ ರೈತರ ಜಮೀನಿನಲ್ಲಿ ಚಿರತೆಯೊಂದು ಪತ್ತೆಯಾಗಿದೆ. ಜಮೀನಿನ ಪಕ್ಕದ ರಸ್ತೆಯಲ್ಲಿ ಚಿರತೆಯೊಂದು ರಾಜಾರೋಷವಾಗಿ ಓಡಾಡುತ್ತಿರುವ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್​​​​ನಲ್ಲಿ ಸೆರೆಹಿಡಿದಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಚಿಕ್ಕೋಡಿಯಲ್ಲಿ ರಾಜಾರೋಷವಾಗಿ ರೈತರ ಜಮೀನಿನಲ್ಲಿ ಓಡಾಡುತ್ತಿರೋ ಚಿರತೆ ; ಭಯಭೀತರಾದ ಜನತೆ..!

ಕಳೆದ ಒಂದು ವಾರದ ಹಿಂದೆಯೇ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಬಗ್ಗೆ ಜನರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸದ್ಯ ಚಿರತೆ ಹಿಡಿಯಲು ಕಾರ್ಯಾಚರಣೆ ನಡೆಸುತ್ತಿದ್ದರೂ, ಚಿರತೆ ಬೋನಿಗೆ ಬೀಳದೆ ಜಮೀನಿಗಳಲ್ಲಿ ತಿರುಗುತ್ತಿದ್ದು, ಈ ಕೂಡಲೇ ಚಿರತೆ ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ‌.

ಓದಿ : ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಗಂಡು ಮರಿ ಆನೆ ಹಸ್ತಾಂತರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.