ETV Bharat / state

ಖಾತೆ ಹಂಚಿಕೆ ಬಗ್ಗೆ ಯಾರಲ್ಲೂ ಭಿನ್ನಾಭಿಪ್ರಾಯ ಇಲ್ಲ: ಸಚಿವ ಗೋವಿಂದ ಕಾರಜೋಳ

author img

By

Published : Aug 7, 2021, 11:31 PM IST

Minister Govind Karjol
ಸಚಿವ ಗೋವಿಂದ ಕಾರಜೋಳ

ಇಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಅಥಣಿ ತಾಲೂಕಿನ ಕೃಷ್ಣಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಥಣಿ: ಖಾತೆ ಹಂಚಿಕೆ ಬಗ್ಗೆ ಯಾವುದೇ ಸಚಿವರು ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.

ಇಂದು ಸಚಿವರು ಅಥಣಿ ತಾಲೂಕಿನಲ್ಲಿ ಕೃಷ್ಣಾ ನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸತ್ತಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಅಥಣಿ ಭಾಗಕ್ಕೆ ಮಂಜೂರು ಮಾಡಿದ ನೀರಾವರಿ ಯೋಜನೆಗಳ ಬಗ್ಗೆ ನಾನು ಬೆಂಗಳೂರಿಗೆ ಹೊದ ನಂತರ ಪರಿಶೀಲನೆ ಮಾಡುತ್ತೇನೆ ಎಂದರು.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ

ಅಸಮಾಧಾನ ಇಲ್ಲ :

ಸಂಪುಟ ಖಾತೆ ಹಂಚಿಕೆ ಬಗ್ಗೆ ಕೆಲವು ಸಚಿವರು ಬಹಿರಂಗವಾಗಿ ಸಮಾಧಾನ ಹೊರಹಾಕಿರುವ ಕುರಿತಂತೆ ಪ್ರತಿಕ್ರಿಯಿಸಿ, ಸಚಿವರಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಹೇಳಿದರು.

ಚೆಕ್​ಫೋಸ್ಟ್​ನಲ್ಲಿ ಕಟ್ಟೆಚ್ಚರ :

ಪಕ್ಕದ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಗಡಿ ಗ್ರಾಮಗಳು ಹಾಗೂ ಚೆಕ್​ಫೋಸ್ಟ್​ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೋವಿಡ್​ ಮೂರನೇ ಅಲೆ ಹಿನ್ನೆಲೆಯಲ್ಲಿ ‌ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಈಗಾಗಲೇ ಅನುಸರಿಸುತ್ತಿದೆ ಎಂದು ತಿಳಿಸಿದರು.

Minister Govind Karjol
ನೆರೆ ಸಂತ್ರಸ್ತರಿಂದ ಅಹವಾಲು ಸ್ವೀಕರಿಸಿದ ಸಚಿವರು

ಓದಿ: ಮಾಜಿ ಸಿಎಂ ಬಿಎಸ್​ವೈಗೆ ಸಂಪುಟ ದರ್ಜೆಯ ಸೌಲಭ್ಯ ಒದಗಿಸಿ ಆದೇಶ

ತಾವು ಸಾಗುತ್ತಿರುವ ರಸ್ತೆಯಲ್ಲಿ ಕಾರು ನಿಲ್ಲಿಸಿ ಸಚಿವರು ನೆರೆ ಸಂತ್ರಸ್ತರ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಚಿವರು ನೆರೆ ಬಾಧಿತ ಗ್ರಾಮಗಳಿಗೆ ಶಾಶ್ವತ ಪರಿಹಾರ ಹಾಗೂ ಯಾರೂ ಪರಿಹಾರದಿಂದ ವಂಚಿತರಾಗದಂತೆ ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.