ETV Bharat / state

ಗೋಕಾಕಿಗೆ ಬರೋದಾದರೆ ಮೋಸ್ಟ್ ವೆಲ್​​ಕಮ್: ಹೆಬ್ಬಾಳ್ಕರ್​ಗೆ ಸಚಿವ ಜಾರಕಿಹೊಳಿ‌ ಪಂಥಾಹ್ವಾನ

author img

By

Published : Feb 12, 2021, 3:29 PM IST

ರಮೇಶ್ ಜಾರಕಿಹೊಳಿ‌
Ramesh Jarkiholi

ಸಚಿವ ರಮೇಶ್ ಜಾರಕಿಹೊಳಿ‌ ಅವರು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​​ ಹೇಳಿಕೆಗೆ ಟಾಂಗ್​ ನೀಡಿದ್ದು,ಲಕ್ಷ್ಮಿ ಹೆಬ್ಬಾಳ್ಕರ್ ಗೋಕಾಕಿಗೆ ಬರುವುದಾದರೆ ಮೋಸ್ಟ್ ವೆಲ್​​ಕಮ್, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕಿದೆ. ಚುನಾವಣೆಗೆ ನಿಲ್ಲಲಿ ನೋಡೋಣ ಎಂದರು.

ಬೆಳಗಾವಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಬಯಸಿದರೆ ರಮೇಶ್ ಜಾರಕಿಹೊಳಿ‌ ವಿರುದ್ಧ ನಾನೇ ಅಭ್ಯರ್ಥಿ ಆಗುವೆ ಎಂಬ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​​ ಹೇಳಿಕೆಗೆ ಸಚಿವ ರಮೇಶ್ ಜಾರಕಿಹೊಳಿ‌ ಟಾಂಗ್ ನೀಡಿದ್ದಾರೆ.

ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೋಕಾಕಿಗೆ ಬರುವುದಾದರೆ ಮೋಸ್ಟ್ ವೆಲ್​​ಕಮ್, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕಿದೆ. ಚುನಾವಣೆಗೆ ನಿಲ್ಲಲಿ ನೋಡೋಣ ಎಂದರು.

ಸಚಿವ ರಮೇಶ್ ಜಾರಕಿಹೊಳಿ

ಓದಿ: ನಾವು ರಾಜಕೀಯದಲ್ಲಿ ಮೀಸಲಾತಿ ಕೇಳುತ್ತಿಲ್ಲ; ಜಯಮೃತ್ಯುಂಜಯ ಸ್ವಾಮೀಜಿ

ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ, ಶಾಸಕ ಅಲ್ಲ. ಯಾವ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇಲ್ಲವೋ ಅಲ್ಲಿ ಗೆಲ್ಲಿಸಬೇಕು. ನಾಲ್ಕೈದು ರಾಜ್ಯಗಳಲ್ಲಿ ಕಾಂಗ್ರೆಸ್ ಯಾಕೆ ಪತನವಾಗಿದೆ ಎಂಬುವುದನ್ನು ಶಾಸಕಿ ತನ್ನ ಗಾಡ್ ಫಾದರ್​ಗೆ ಕೇಳಿದರೆ ಒಳ್ಳೆಯದು ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮರ್​​ ಹಾಗೂ ಶಾಸಕಿ ಹೆಬ್ಬಾಳ್ಕರ್ ಟಾಂಗ್ ಕೊಟ್ಟರು.

ಎಸ್ಟಿ ಮೀಸಲು ಹೆಚ್ಚಿಸುವ ಸಂಬಂಧ ಈಗಾಗಲೇ ಸಾಕಷ್ಟು ಸಲ ಮಾತನಾಡಿದ್ದೇನೆ. ಈ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಮಾಜದ ಸ್ವಾಮೀಜಿಗಳು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಿದ್ದೇನೆ ಎಂದರು.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.