ETV Bharat / state

ಭಾರತ ಬಂದ್​ಗೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ

author img

By

Published : Jan 8, 2020, 8:08 PM IST

ಭಾರತ ಬಂದ್​ಗೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ
Mixed Reaction to Bharat Bandh

ಇಂದು ರಾಜ್ಯಾದ್ಯಂತ ವಿವಿಧ ಬೇಡಿಕೆಗಳ ಈಡೇರಿಕೆಗೆ ವಿವಿಧ ಸಂಘಟನೆಗಳು ಹಮ್ಮಿಕೊಂಡಿದ್ದ ಬಂದ್​ಗೆ ಗಡಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳಗಾವಿ : ಬೆಲೆ ಏರಿಕೆ ಸೇರಿದಂತೆ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಕರೆದಿದ್ದ ಬಂದ್​ಗೆ ಗಡಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಭಾರತ ಬಂದ್​ಗೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ

ನಗರದಲ್ಲಿ ಎಐಟಿಸಿಯುಸಿ, ಸಿಐಟಿಯು, ಪಂಚಾಯತ್ ನೌಕರರ ಸಂಘ, ಅಂಗನವಾಡಿ ಕಾರ್ಯಕರ್ತೆಯರ ಸಂಘ, ಕೆಎಸ್ಆರ್​ಟಿಸಿ ನೌಕರರ ಸಂಘ, ಅಕ್ಷರ ದಾಸೋಹ ನೌಕರರ ಸಂಘ, ಕೆಪಿಸಿಸಿ ಕಾರ್ಮಿಕ ಘಟಕ, ಔಷಧ ಮಾರಾಟಗಾರರ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಬಂದ್​ ಕರೆದಿದ್ದರೂ ಎಂದಿನಂತೆ ಬಸ್, ಆಟೋ, ಅಂಗಡಿ ಮುಂಗಟ್ಟು, ಶಾಲಾ-ಕಾಲೇಜು ಆರಂಭಗೊಂಡಿದ್ದು, ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಚಿಕ್ಕೋಡಿಯಲ್ಲಿ ಬಂದ್​ಗೆ ನೀರಸ ಪ್ರತಿಕ್ರಿಯೆ:
ಬಂದ್​​ ನಿಮಿತ್ತ ಚಿಕ್ಕೋಡಿಯಲ್ಲಿ ಪ್ರತಿಭಟನಾಕಾರರು ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ರು.
ನಗರದ ಆರ್.ಡಿ.ಪ್ರೌಢ ಶಾಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಿದ ಕಾರ್ಮಿಕರು ರ‍್ಯಾಲಿ ಮಾಡಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆದರು. ಪೊಲೀಸರ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿದ ಕಾರ್ಮಿಕ ಸಂಘಟನೆಗಳು ಸಭೆ ನಡೆಸಿದವು. ಬಳಿಕ ಸ್ಥಳಕ್ಕೆ ತಹಶೀಲ್ದಾರ್ ಆಗಮಿಸಿ ಮನವಿ ಸ್ವೀಕರಿಸಿದರು.

ಇನ್ನು ಚಿಕ್ಕೋಡಿ, ಅಥಣಿ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಭಾರತ ಬಂದ್​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಭಾರತ ಬಂದ್​ನಿಂದ ಅಥಣಿಯಲ್ಲಿ ಯಾವುದೇ ಎಫೆಕ್ಟ್​ ಆಗಿಲ್ಲ:

ಅಥಣಿಯಲ್ಲಿ ಭಾರತ್​ ಬಂದ್​ ಯಾವುದೇ ಪರಿಣಾಮ ಬೀರಿಲ್ಲ. ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಬಿಟ್ಟರೆ ಪಟ್ಟಣದಲ್ಲಿ ಜನಸಾಮಾನ್ಯರು ದಿನನಿತ್ಯದ ಕೆಲಸದಲ್ಲಿ ನಿರತರಾಗಿದ್ದರು.

Intro:ಭಾರತ ಬಂದ ಅಥಣಿಯಲ್ಲಿ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ, ದಿನನಿತ್ಯದ ಜನಸಾಮಾನ್ಯರ ಕೆಲಸದಲ್ಲಿ ನಿರತರಾಗಿದ್ದಾರೆ..Body:ಅಥಣಿ ವರದಿ
ಫಾರ್ಮೇಟ್_Av
ಸ್ಥಳ_ಅಥಣಿ
ಸ್ಲಗ್_ಅಥಣಿಯಲ್ಲಿ ಭಾರತ ಬಂದ ಇಲ್ಲ...

Anchor
ಕಾರ್ಮಿಕ ಸಂಘಟನೆಗಳ ಜೋತೆ ಕೆಲವು ಸಂಘಟನೆಗಳು ಭಾರತ ಬಂದಗೆ ಕರೆ ನೀಡಿದರು. ಆದರೆ ಇದುವರೆಗೂ ಅಥಣಿಯಲ್ಲಿ ಯಾವುದೇ ರೀತಿಯ ಪರಿಣಾಮ ಬಿರಿಲ್ಲ. ಅಥಣಿ ಪಟ್ಟನದಲ್ಲಿ ಜನಸಾಮಾನ್ಯರ ದಿನನಿತ್ಯದ ಕೆಲಸದಲ್ಲಿ ನಿರತರಾಗಿದ್ದಾರೆ, ಸಾರಿಗೆ ಸಂಪರ್ಕ ದಿನನಿತ್ಯದ ಸೇವೆ ಸಲ್ಲಿಸುತ್ತಿದ್ದಾರೆ. ಶಾಲೆ ಕಾಲೇಜುಗಳು ಪ್ರಾರಂಭ, ತಾಲೂಕಿನ ಆಸ್ಪತ್ರೆಗಳಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹೋಟೆಲ್, ಮೆಡಿಕಲ್, ಅಂಗಡಿ ಗಳಿಗು ಕಾರ್ಯನಿರ್ವಹಿಸುತ್ತಿದೆ.

ಒಟ್ಟಾರೆಯಾಗಿ ೨೦೨೦ ಮೊದಲನೇ ಭಾರತ್ ಬಂದ್ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದರು, ಆದರೆ ದೇಶದಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ....
Conclusion:ಅಥಣಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.