ಕೊಲ್ಲಾಪುರದಲ್ಲಿ ಬಸ್​ಗೆ ಮಸಿ ಬಳಿದ ಶಿವಸೇನೆ ಕಾರ್ಯಕರ್ತರು: ಕನ್ನಡಿಗರ ಆಕ್ರೋಶ​​​​​

author img

By

Published : Nov 25, 2022, 5:29 PM IST

Updated : Nov 25, 2022, 6:53 PM IST

shivasena activis

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ಸಿಎಂ ಬಸವರಾಜ ಬೊಮ್ಮಾಯಿ ಅಣಕು ಶವಯಾತ್ರೆ ನಡೆಸಿದ್ದಾರೆ. ಅಲ್ಲದೇ ಕರ್ನಾಟಕದ ಮತ್ತೊಂದು ಬಸ್​ಗೆ ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ.

ಬೆಳಗಾವಿ: ಸಿಎಂ ಬಸವರಾಜ ಬೊಮ್ಮಾಯಿಯವರ ಹೇಳಿಕೆಯನ್ನು ಖಂಡಿಸಿ, ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರು ಉದ್ಧಟತನ ಮುಂದುವರೆಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಯವರ ಅಣಕು ಶವಯಾತ್ರೆ ನಡೆಸಿ, ಕರ್ನಾಟಕದ ಮತ್ತೊಂದು ಬಸ್​ಗೆ ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ.

ಕೊಲ್ಲಾಪುರದಲ್ಲಿ ಸಿಎಂ ಬೊಮ್ಮಾಯಿ ಅಣಕು ಶವಯಾತ್ರೆ

ಮಹಾರಾಷ್ಟ್ರದ ಕೊಲ್ಲಾಪುರ ನಗರದಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣದ ಕೊಲ್ಲಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ನೇತೃತ್ವದಲ್ಲಿ ಶಿವಸೇನೆ ಕಾರ್ಯಕರ್ತರು ಪುಂಡಾಟಿಕೆ ಮಾಡಿದ್ದಾರೆ. ಕರ್ನಾಟಕದ ವಿಜಯಪುರ - ಕೊಲ್ಲಾಪುರ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ಗೆ ಮಸಿ ಬಳಿದಿದ್ದಾರೆ.

ಈ ವೇಳೆ, ಕರ್ನಾಟಕದ ಬಸ್​ಗೆ ಜೈ ಮಹಾರಾಷ್ಟ್ರ ಅಂತಾ ಬರೆದಿದ್ದು, ಕರ್ನಾಟಕ ಬಸ್‌ಗಳನ್ನ ಕೂಡಲೇ ಬಂದ್ ಮಾಡುವಂತೆ ಘೋಷಣೆ ಹಾಕಿದ್ದಾರೆ. ಅಲ್ಲದೇ ಶಿವಸೇನೆ ಕಾರ್ಯಕರ್ತರ ಈ ನಡೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುತ್ತಿದ್ದ 300ಕ್ಕೂ ಹೆಚ್ಚು ಬಸ್​​ಗಳು ತಾತ್ಕಾಲಿಕ ಸ್ಥಗಿತ!

Last Updated :Nov 25, 2022, 6:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.