ಬೆಳಗಾವಿ: ಕೋಮಾದಲ್ಲಿರುವ ಮಗನ ಪ್ರಾಣ ಉಳಿಸಲು ದೇವರ ಮೊರೆ ಹೋದ ತಾಯಿ

author img

By

Published : Jun 21, 2022, 7:26 PM IST

Updated : Jun 21, 2022, 7:37 PM IST

parents prayer to god for her child health in belagavi

ಮಗನ ಪ್ರಾಣ ಉಳಿಸಲು ತಾಯಿಯು ದೇವರ ಮೊರೆ ಹೋಗಿದ್ಧಾರೆ.

ಬೆಳಗಾವಿ: 'ಜನನಿ ಜನ್ಮ ಭೂಮಿಶ್ಚ ಸ್ವರ್ಗಾದಪಿ ಗರಿಯಸಿ' ಅಂದ್ರೆ ಹೆತ್ತ ತಾಯಿ ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮೇಲು. ಆಕೆಯ ಪ್ರೀತಿ, ಮಮತೆಗೆ ಯಾವುದೂ ಸರಿಸಾಟಿಯಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಕೋಮಾದಲ್ಲಿರುವ ತನ್ನ ಎಂಟು ವರ್ಷದ ಮಗನ ಪ್ರಾಣ ಉಳಿಸಲು ತಾಯಿಯೋರ್ವರು ದೇವರ ಮೊರೆ ಹೋಗಿರುವ ಘಟನೆ ಜಿಲ್ಲೆಯ ನಂದಗಡ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಕೋಮಾದಲ್ಲಿರುವ ಮಗನ ಪ್ರಾಣ ಉಳಿಸಲು ದೇವರ ಮೊರೆ ಹೋದ ತಾಯಿ

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಂಬಾರ್ದ ಗ್ರಾಮದ ಶೈಲೇಶ್ ಕೃಷ್ಣಾ ಸೂತ್ರವಿ ಎಂಬ ಬಾಲಕ ಮೆದುಳಿನ ಸಮಸ್ಯೆಯಿಂದಾಗಿ ಕೋಮಾದಲಿದ್ದಾನೆ. ಶೈಲೇಶ್‌ನ ತಾಯಿ ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿರುವ ಪ್ರಸಿದ್ಧ ಕ್ರೈಸ್ತ ಪ್ರಾರ್ಥನಾ ಮಂದಿರಕ್ಕೆ ಆಗಮಿಸಿ ಮಗನ ಪ್ರಾಣ ಉಳಿಸುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ನಾಳಿನ ಸಭೆಯಲ್ಲಿ 27ರಂದು ನಡೆಸುವ ಹೋರಾಟದ ಬಗ್ಗೆ ನಿರ್ಣಯ: ಜಯಮೃತ್ಯುಂಜಯ ಸ್ವಾಮೀಜಿ

ಬಾಲಕ ಶೈಲೇಶ್ ಕೋಮಾ‌ ಸ್ಥಿತಿಗೆ ತಲುಪಿದ್ದಾನೆ. ಬಳಿಕ ಆತನಿಗೆ ಪಾರ್ಶ್ವವಾಯು ಆಗಿದ್ದರಿಂದ ಆತನ ದೇಹ ಸ್ವಾಧೀನ ಕಳೆದುಕೊಂಡಿದೆ. ‌ಉತ್ತರ ಕನ್ನಡ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಖ್ಯಾತ ವೈದ್ಯರ ಬಳಿ ಶೈಲೇಶ್​ಗೆ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ವೈದ್ಯರ ಪ್ರಯತ್ನ ಕೈಗೂಡದಿರುವ ಹಿನ್ನೆಲೆ ಹೆತ್ತಮ್ಮ ದೇವರ ಮೊರೆ ಹೋಗಿದ್ದಾರೆ. ಅವರ ಪ್ರಾರ್ಥನೆ ಫಲಿಸಿ ಬಾಲಕ ಬದುಕುಳಿಯಲಿ ಎಂದು ಹಾರೈಸೋಣ..

Last Updated :Jun 21, 2022, 7:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.