ETV Bharat / state

ಬೆಳಗಾವಿ: ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿ ನೇಣಿಗೆ ಶರಣು

author img

By

Published : Oct 2, 2022, 12:21 PM IST

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ವಿಚಾರಣಾಧೀನ ಕೈದಿ ನೇಣಿಗೆ ಶರಣು
prisoner

ಬೆಳಗಾವಿ: ಇಲ್ಲಿನ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 3 ತಿಂಗಳ ಹಿಂದೆ ಪೋಕ್ಸೋ ಪ್ರಕರಣದಲ್ಲಿ ಈತನನ್ನು ಬಂಧಿಸಲಾಗಿತ್ತು.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದ ಮಂಜುನಾಥ ಮಹಾಂತೇಶ ನಾಯ್ಕರ (20) ನೇಣಿಗೆ ಶರಣಾಗಿರುವ ಕೈದಿ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಕಳೆದ ಮೂರು ತಿಂಗಳಿಂದಲೂ ಆರೋಪಿ ಹಿಂಡಲಗಾ ಜೈಲಿನಲ್ಲಿದ್ದನು.

ಶನಿವಾರ ತಡರಾತ್ರಿ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಾರಾಗೃಹದ ಕಿಟಕಿಗೆ ನೇಣು ಬಿಗಿದುಕೊಂಡು ವಿಚಾರಣಾಧೀನ ಕೈದಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.