ETV Bharat / state

ಸಿಡಿ ಪ್ರಕರಣ: ರಮೇಶ್​ ಜಾರಕಿಹೊಳಿ ದಾಖಲಾದ ಆಸ್ಪತ್ರೆಗೆ ಎಸ್​​ಐಟಿ ಅಧಿಕಾರಿಗಳ ದೌಡು

author img

By

Published : Apr 7, 2021, 4:07 AM IST

ಸಿಡಿ ಪ್ರಕರಣ
ಸಿಡಿ ಪ್ರಕರಣ

ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಗೋಕಾಕ್​ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಡಿ ಪ್ರಕರಣದ ವಿಚಾರಣೆಗೆ ಗೈರಾಗಿರುವ ಕಾರಣ ಎಸ್ಐಟಿ ಅಧಿಕಾರಿಗಳು ಗೋಕಾಕ್​ಗೆ ದೌಡಾಯಿಸಿದ್ದಾರೆ.

ಬೆಳಗಾವಿ: ವಿವಾದಾತ್ಮಕ ಸಿಡಿ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮಾಹಿತಿ ಪಡೆಯಲು ವಿಶೇಷ ತನಿಖಾ ತಂಡದ (ಎಸ್​ಐಟಿ) ಅಧಿಕಾರಿಗಳು ಗೋಕಾಕ್ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಗೋಕಾಕ್​ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಡಿ ಪ್ರಕರಣದ ವಿಚಾರಣೆಗೆ ಗೈರಾಗಿರುವ ಕಾರಣ ಎಸ್ಐಟಿ ಅಧಿಕಾರಿಗಳು ಗೋಕಾಕ್​ಗೆ ದೌಡಾಯಿಸಿದ್ದಾರೆ.

ಎಸ್​ಐಟಿ ಭೇಟಿ ಬಗ್ಗೆ ಮಾಹಿತಿ ನೀಡಿದ ವೈದ್ಯರು

ಗೋಕಾಕ ತಾಲೂಕಾ ಆಸ್ಪತ್ರೆಗೆ ಎಸ್ಐಟಿ ತಂಡ ಭೇಟಿ ನೀಡಿರುವ ವಿಚಾರವನ್ನು ವೈದ್ಯರು ದೃಢಪಡಿಸಿದ್ದಾರೆ. ಆಸ್ಪತ್ರೆಯ ವೈದ್ಯಾಧಿಕಾರಿ ಡಾ ರವೀಂದ್ರ ಅಂಟಿನ್ ಮಾತನಾಡಿ, ಎಸ್​ಐಟಿ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಹೋಗಿದ್ದಾರೆ. ಚಿಕಿತ್ಸೆಯ ಕುರಿತು ಇಬ್ಬರು ಅಧಿಕಾರಿಗಳು ಬಂದು ಸಂಪೂರ್ಣ ಮಾಹಿತಿ ಪಡೆದಿದ್ದಾರೆ ಎಂದರು.

ಎಸ್​ಐಟಿ ಅಧಿಕಾರಿಗಳು ರಮೇಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿಲ್ಲ. ಕೋವಿಡ್ ಪರೀಕ್ಷಾ ವರದಿ ಪರಿಶೀಲಿಸಿ ಚಿಕಿತ್ಸೆ ಬಗ್ಗೆ ಒಂದು ಗಂಟೆಗಳ ಕಾಲ ನಮ್ಮೊಂದಿಗೆ ಚರ್ಚೆ ನಡೆಸಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡುವ ಮುನ್ನ ಎಸ್ಐಟಿಗೆ ಮಾಹಿತಿ ನೀಡುವಂತೆ ಕೋರಿದ್ದಾರೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.