ETV Bharat / state

ಗ್ರಹಣ ಗೋಚರ ಸಹಜ ಪ್ರಕ್ರಿಯೆ, ಜನ ಭಯಪಡಬೇಕಿಲ್ಲ: ಸತೀಶ ಜಾರಕಿಹೊಳಿ

author img

By

Published : Jun 21, 2020, 4:26 PM IST

Satish Jarkiholi
ಸತೀಶ ಜಾರಕಿಹೊಳಿ

ಸೂರ್ಯ, ಚಂದ್ರ ಗ್ರಹಣ ಗೋಚರ ಪ್ರಕೃತಿಯ ಸಹಜ ಪ್ರಕ್ರಿಯೆ. ಈ ಬಗ್ಗೆ ಜನರಲ್ಲಿ ಭಯ ಮೂಡಿಸುವ ಕೆಲಸ ಹಿಂದಿನಿಂದಲೂ ನಡೆದುಕೊಂಡು ಬರುತ್ತಿದೆ‌ ಎಂದು ಸತೀಶ ಜಾರಕಿಹೊಳಿ ಹೇಳಿದರು.

ಗೋಕಾಕ (ಬೆಳಗಾವಿ): ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ತಮ್ಮ ಮಕ್ಕಳಾದ ಪ್ರಿಯಾಂಕಾ, ರಾಹುಲ್ ಹಾಗೂ ಕಾರ್ಯಕರ್ತರೊಂದಿಗೆ ಹಿಲ್ ಗಾರ್ಡನ್​ನಲ್ಲಿ ಮಧ್ಯಾಹ್ನ ಉಪಹಾರ ಸೇವಿಸಿದರು.

ಬಳಿಕ ಮಾತನಾಡಿದ ಅವರು, ಸೂರ್ಯ, ಚಂದ್ರ ಗ್ರಹಣ ಗೋಚರ ಪ್ರಕೃತಿಯ ಸಹಜ ಪ್ರಕ್ರಿಯೆ. ಆದ್ರೆ ಇದನ್ನೇ ಬಂಡವಾಳ ಮಾಡಿಕೊಂಡು ಕೆಲವರು ಜನರಲ್ಲಿ ಭಯ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಈ ಕೆಲಸ ಈಗಲೂ ನಡೆಯುತ್ತಿದೆ. ಇತಿಹಾಸದುದ್ದಕ್ಕೂ ಇದಕ್ಕೆ ವಿರೋಧ ವ್ಯಕ್ತವಾಗಿದೆ. ಈ ವಿಚಾರವಾಗಿ ಜನರಲ್ಲಿನ ಮೌಢ್ಯತೆ ಹೋಗಲಾಡಿಸಲು ನಾವೂ ಕೂಡ ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದೇವೆ.

ಸ್ಮಶಾನದಲ್ಲಿ ಆಹಾರ ಸೇವಿಸುವ ಮೂಲಕ ಮೌಢ್ಯದ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದೇವೆ. ಈ ಕಾರ್ಯಕ್ರಮಗಳ ಮೂಲಕ ಜನರಿಗೆ ಗ್ರಹಣಗಳಿಂದ ಯಾವ ತೊಂದರೆಯೂ ಆಗಲ್ಲ ಎಂಬುವುದನ್ನು ತೋರಿಸಿಕೊಟ್ಟಿದ್ದೇವೆ. ತಂತ್ರಜ್ಞಾನದ ಈ ಯುಗದಲ್ಲಿರೋ ಜನರು ಇನ್ನಾದರೂ ಮೌಢ್ಯದಿಂದ ಹೊರಬರಲೇಬೇಕು ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.