ಬೆಳಗಾವಿ: ನಿನ್ನೆ ಸುರಿದ ಗುಡುಗು ಸಹಿತ ಭಾರಿ ಮಳೆಗೆ ಸಿಡಿಲು ಬಡಿದು ಇಟ್ಟಿಗೆ ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಖಾನಾಪೂರ ತಾಲೂಕಿನ ನೀಡಗಲ್ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಆದ್ರೆ, ನಿನ್ನೆ ಅಕಾಲಿಕ ಮಳೆ ಬಂದಿದ್ದರಿಂದ ಇಟ್ಟಿಗೆಯ ರಾಶಿ ಮೇಲೆ ಪ್ಲಾಸ್ಟಿಕ್ ಹೊದಿಕೆ ಹಾಕುವ ಸಂದರ್ಭದಲ್ಲಿ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಖಾನಾಪೂರ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:’ಹೀಗೆ ಮಾಡಿ ನಗರ ಸ್ವಚ್ಛವಾಗಿಡಿ’.. ಈ ನಗರದಲ್ಲಿ ಸ್ಥಾಪನೆಯಾಗಲಿವೆ 'ಕ್ಯಾರಿ ಬ್ಯಾಗ್ ಬ್ಯಾಂಕ್'