ETV Bharat / state

ಬೆಳಗಾವಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ: ಇಬ್ಬರ ಬಂಧನ

author img

By

Published : May 19, 2023, 10:12 AM IST

Updated : May 19, 2023, 11:02 PM IST

Young man murder in Belagavi  Murder in Belagavi  ಯುವಕನ ಬರ್ಬರ ಹತ್ಯೆ  ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ  ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ  ಪೊಲೀಸರ ಮೊದಲ ಹಂತದ ತನಿಖೆ  ಅಪರಾಧ ವಿಭಾಗದ ಡಿಸಿಪಿ
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆಗೈದು ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ: ದುಷ್ಕರ್ಮಿಗಳ ತಂಡ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಮಾರಿಹಾಳ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮಾರಿಹಾಳ ಗ್ರಾಮದ ಮಹಾಂತೇಶ ರುದ್ರಪ್ಪ ಕರಲಿಂಗನವರ (23) ಮೃತ ವ್ಯಕ್ತಿ. ನಾಲ್ಕೈದು ಜನ ಯುವಕರು ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಅಪರಾಧ ವಿಭಾಗದ ಡಿಸಿಪಿ ಪಿ.ವಿ.ಸ್ನೇಹ ಹಾಗೂ ಮಾರಿಹಾಳ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇಬ್ಬರು ಆರೋಪಿಗಳ ಬಂಧನ: ತಾಲೂಕಿನ ಮಾರಿಹಾಳ ಗ್ರಾಮದಲ್ಲಿ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಾರಿಹಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಮಾರಿಹಾಳ ಗ್ರಾಮದ ಮಹಾಂತೇಶ ರುದ್ರಪ್ಪ ಕರಲಿಂಗನವರ (23) ಎಂಬ ಯುವಕನನ್ನು ಗುರುವಾರ ತಡ ರಾತ್ರಿ ಬರ್ಬರವಾಗಿ ದುಷ್ಕರ್ಮಿಗಳು ಹತ್ಯೆ ಮಾಡಿ‌ ಪರಾರಿಯಾಗಿದ್ದರು. ಘಟನಾ ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ಪಿ.ವ್ಹಿ.ಸ್ನೇಹಾ ಮತ್ತು ಮಾರಿಹಾಳ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದರು.

ಬಳಿಕ ಆರೋಪಿಗಳಿಗೆ ಬಲೆ ಬೀಸಿದ್ದ ಪೊಲೀಸರು ಇಂದು ಸಂಜೆ ಸುಳೇಭಾವಿಯ ಅಕ್ಷಯಕುಮಾರ್ ಕೊಣಕೇರಿ (23) ಹಾಗೂ ಮಾರಿಹಾಳದ ರಾಜೇಸಾಬ್ ಮುಲ್ಲಾ (23) ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಿರಬಹುದು ಎಂದು ಪೊಲೀಸರ ಮೊದಲ ಹಂತದ ತನಿಖೆಯಿಂದ ತಿಳಿದು ಬಂದಿದೆ. ಕೊಲೆಗೆ ನಿಖರ ಕಾರಣ ಆರೋಪಿಗಳ ವಿಚಾರಣೆ ಬಳಿಕ ತಿಳಿಯಲಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನಿರ್ಮಾಣ ಹಂತದ ಕಟ್ಟಡದಲ್ಲಿ ಡಬಲ್ ಮರ್ಡರ್.. ಬೆಚ್ಚಿಬಿದ್ದ ತೀರ್ಥಹಳ್ಳಿ ಜನ

Last Updated :May 19, 2023, 11:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.