ETV Bharat / state

ಬೆಳಗಾವಿಯಲ್ಲಿ ಗಣೇಶ ನಿಮಜ್ಜನದ ವೇಳೆ ಗಲಾಟೆ: ಯುವಕನ ಕೊಲೆ

author img

By

Published : Sep 11, 2022, 10:13 AM IST

ಗಣೇಶನ ವಿಗ್ರಹ ನಿಮಜ್ಜನ ನಡೆಯುತ್ತಿದ್ದಾಗ ಬೆಳಗಾವಿ ಜಿಲ್ಲೆಯ ಮುಗಳಿಹಾಳ ಗ್ರಾಮದಲ್ಲಿ ಗಲಾಟೆ ನಡೆದಿದ್ದು, ಯುವಕನಿಗೆ ಚಾಕು ಇರಿದು ಕೊಲೆ ಮಾಡಲಾಗಿದೆ.

youth-stabbed-to-death-while-ganesh-idol-immersion
ಬೆಳಗಾವಿಯಲ್ಲಿ ಗಣೇಶ ನಿಮಜ್ಜನದ ವೇಳೆ ಗಲಾಟೆ: ಯುವಕನ ಕೊಲೆ

ಬೆಳಗಾವಿ: ಗಣೇಶನ ವಿಗ್ರಹ ನಿಮಜ್ಜನದ ಸಂದರ್ಭದಲ್ಲಿ ಆರಂಭವಾದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ. ಮುಗಳಿಹಾಳ ಗ್ರಾಮದ ನಿವಾಸಿ ಅರ್ಜುನಗೌಡ ಪಾಟೀಲ (20) ಕೊಲೆಯಾದ ಯುವಕನಾಗಿದ್ದಾನೆ.

ಶನಿವಾರ ಸಂಜೆ ನಡೆದ ಗಣೇಶ ನಿಮಜ್ಜನದ ವೇಳೆ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದೆ. ಮತ್ತೊಂದು ಗುಂಪಿನ ಯುವಕನೊಬ್ಬ ಅರ್ಜುನಗೌಡನಿಗೆ ಚಾಕು ಇರಿದಿದ್ದಾನೆ. ಈ ವೇಳೆ ಯುವಕ ಕುಸಿದು ಬೀಳುತ್ತಿದ್ದಂತೆ ಎದುರಾಳಿ ಗುಂಪಿನವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಮುರಗೋಡ ಠಾಣೆ ಪೊಲೀಸರು ಭೇಟಿ ನೀಡಿ,‌ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕೊಲೆಯಾದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಧಾರವಾಡ: ಗಣೇಶ ಮೆರವಣಿಗೆ ವೇಳೆ ವ್ಯಕ್ತಿಗೆ ಚಾಕು ಇರಿತ, ದುಷ್ಕರ್ಮಿ ಪರಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.