ETV Bharat / state

ಬಳ್ಳಾರಿ ಐದು ವಿಧಾನಸಭಾ ಕ್ಷೇತ್ರಗಳಲ್ಲಿ 36 ಅಭ್ಯರ್ಥಿಗಳಿಂದ 42 ನಾಮಪತ್ರ ಸಲ್ಲಿಕೆ

author img

By

Published : Apr 21, 2023, 9:59 AM IST

Pawan Kumar Malapati
ಪವನ್‍ಕುಮಾರ್ ಮಾಲಪಾಟಿ

ಬಳ್ಳಾರಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 36 ಅಭ್ಯರ್ಥಿಗಳಿಂದ 42 ನಾಮಪತ್ರ ಸಲ್ಲಿಕೆಯಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನ ಎಂದು ಜಿಲ್ಲಾ ಚುನಾವಣಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ತಿಳಿಸಿದ್ದಾರೆ.

ಬಳ್ಳಾರಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಉಮೇದುವಾರಿಕೆ ಸಲ್ಲಿಕೆಯ ಕೊನೆಯ ದಿನವಾಗಿದ್ದ ಗುರುವಾರದಂದು ಒಟ್ಟು 36 ಅಭ್ಯರ್ಥಿಗಳಿಂದ 42 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ತಿಳಿಸಿದ್ದಾರೆ.

ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಉತ್ತನೂರು ನಾಗರಾಜ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಹೆಚ್ ಪ್ರಹ್ಲಾದ ನಾಯಕ್, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಟಿ.ಹೆಚ್.ಸುರೇಶ್ ಬಾಬು ಅವರು ದೇಶ ಪ್ರೇಮ ಪಕ್ಷದ ಅಭ್ಯರ್ಥಿಯಾಗಿ ರಾಮಕ್ಕ ಟಿ ಮತ್ತು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ನಾಯಕರ ದುರುಗಪ್ಪ ನಾಮಪತ್ರ ಸಲ್ಲಿಸಿದ್ದಾರೆ.

ಸಿರುಗುಪ್ಪ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಬಿ.ಲೋಕೇಶ್, ಜನತಾ ದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಬಿ.ಪರಮೇಶ್ವರ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಎಂ.ಎಸ್.ಸಿದ್ದಪ್ಪ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಭ್ಯರ್ಥಿಯಾಗಿ ಹೆಚ್.ಸಿ.ರಾಧಾ, ಪಕ್ಷೇತರ ಅಭ್ಯರ್ಥಿಯಾಗಿ ಮಾರೆಣ್ಣ, ಜನತಾ ದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಮಲ್ಲಯ್ಯ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಭ್ಯರ್ಥಿಯಾಗಿ ಟಿ.ದರಪ್ಪ ನಾಯಕ, ಪಕ್ಷೇತರ ಅಭ್ಯರ್ಥಿಯಾಗಿ ಹನುಮಂತ.ಎಸ್, ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ಪಕ್ಷದ ಅಭ್ಯರ್ಥಿಯಾಗಿ ಎಂ.ಹೆಚ್.ವೀರೇಶಪ್ಪ ಹುಣಸೇಮರದವರು ಮತ್ತು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ಪಕ್ಷದ ಅಭ್ಯರ್ಥಿಯಾಗಿ ಈರಬಸಮ್ಮ ಹುಣಸೇಮರದವರು ನಾಮಪತ್ರ ಸಲ್ಲಿಸಿದ್ದಾರೆ.

ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಷಣ್ಮುಖ ನವೀನ್ ಬಾಬು, ಪಕ್ಷೇತರ ಅಭ್ಯರ್ಥಿ ಕೆ.ಶಂಭುಲಿಂಗ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಿ.ಶ್ರೀರಾಮುಲು, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಜೆ.ತಿಪ್ಪೇಸ್ವಾಮಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬಿ.ನಾಗೇಂದ್ರ, ಪಕ್ಷೇತರ ಅಭ್ಯರ್ಥಿಯಾಗಿ ಬಿ.ವೆಂಕಟೇಶ್ ಪ್ರಸಾದ್ ಮತ್ತು ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ನಾಯ್ಕರ ಕೃಷ್ಣಪ್ಪ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ.

ಇದನ್ನೂ ಓದಿ : ಬೆಂಗಳೂರು ಗ್ರಾ. ಜಿಲ್ಲೆಯ 4 ಕ್ಷೇತ್ರಗಳಲ್ಲಿ 33 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅರುಣ್‍ಕುಮಾರ್, ಪಕ್ಷೇತರ ಅಭ್ಯರ್ಥಿಯಾಗಿ ಕಂದೂರಿ ಅಜೇಯ ಕುಮಾರ್, ಪಕ್ಷೇತರ ಅಭ್ಯರ್ಥಿ ಉಪ್ಪಾರ ಅನೀಲ್ ಕುಮಾರ್, ಪಕ್ಷೇತರ ಅಭ್ಯರ್ಥಿ ಗಂಗಿರೆಡ್ಡಿ, ಜನತಾ ದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಅನೀಲ್ ಹೆಚ್ ಲಾಡ್, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿಯಾಗಿ ಸಿ.ಶರಣ ಬಸಪ್ಪ, ಪಕ್ಷೇತರ ಅಭ್ಯರ್ಥಿ ಬಿ.ಆರ್.ಮಂಜುನಾಥ, ಪಕ್ಷೇತರ ಅಭ್ಯರ್ಥಿ ನಾರಾಯಣ ಸ್ವಾಮಿ, ಪಕ್ಷೇತರ ಅಭ್ಯರ್ಥಿ ಶ್ರೀಧರ್ ಕೆ, ಪಕ್ಷೇತರ ಅಭ್ಯರ್ಥಿ ಕೆ.ಭರತ್ ಬಾಬು, ಪಕ್ಷೇತರ ಅಭ್ಯರ್ಥಿ ಎಸ್.ಬಿ.ಶಿವಕುಮಾರ್, ಪಕ್ಷೇತರ ಅಭ್ಯರ್ಥಿ ಅಹಮ್ಮದ್ ಮೊಹಮ್ಮದ್ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಅನೀಲ್ ಹೆಚ್ ಲಾಡ್ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಕೆ.ಆರ್.ಕುಮಾರಸ್ವಾಮಿ, ಪಕ್ಷೇತರ ಅಭ್ಯರ್ಥಿಯಾಗಿ ಗೆರೆಗಲ್ ಪಾಪಯ್ಯ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಶಿಲ್ಪ ಪಾಟೀಲ್ ಮತ್ತು ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಶಕುಂತಲ.ಕೆ ಅವರು ನಾಮ ಪತ್ರ ಸಲ್ಲಿಕೆ ಮಾಡಿದ್ದಾರೆ.

ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.