ETV Bharat / state

ಅಕ್ರಮ ಆಸ್ತಿ ಗಳಿಕೆ ಆರೋಪ; ಹೊಸಪೇಟೆ ಉಪನೋಂದಣಾಧಿಕಾರಿ ಕಚೇರಿ, ಮನೆ ಮೇಲೆ ಎಸಿಬಿ ದಾಳಿ

author img

By

Published : Dec 31, 2020, 12:38 PM IST

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇರೆಗೆ ಉಪನೋಂದಣಾಧಿಕಾರಿ ಪ್ರಭಾಕರ್ ಅವರ ಕಚೇರಿ, ಮನೆ ಹಾಗೂ ಕೂಡ್ಲಿಗಿಯ ಮಾವನ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ACB Raid
ಅಕ್ರಮ ಆಸ್ತಿ ಗಳಿಕೆ ಆರೋಪ: ಉಪನೋಂದಣಾಧಿಕಾರಿ ಕಚೇರಿ, ಮನೆ ಮೇಲೆ ಎಸಿಬಿ ದಾಳಿ

ಹೊಸಪೇಟೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ನಗರದ ಉಪನೋಂದಣಾಧಿಕಾರಿಯವರ ಕಚೇರಿ, ಅವರ ಮನೆ ಹಾಗೂ ಕೂಡ್ಲಿಗಿಯ ಅವರ ಮಾವನ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪ: ಉಪನೋಂದಣಾಧಿಕಾರಿ ಕಚೇರಿ, ಮನೆ ಮೇಲೆ ಎಸಿಬಿ ದಾಳಿ

ಉಪನೋಂದಣಾಧಿಕಾರಿ ಪ್ರಭಾಕರ್ ಅವರ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪ ಬಂದ ಹಿನ್ನೆಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಪನೋಂದಣಾಧಿಕಾರಿ ಕಚೇರಿಯಲ್ಲಿ ರಾಯಚೂರು ಎಸಿಬಿ ಇನ್ಸ್​ಪೆಕ್ಟರ್ ಹನುಮಂತಪ್ಪ ಸಣ್ಣಮನೆ ತಂಡ, ಬಸವೇಶ್ವರ ಬಡಾವಣೆಯ ಮನೆಯಲ್ಲಿ ಬಳ್ಳಾರಿ ಡಿವೈಎಸ್​ಪಿ ಚಂದ್ರಕಾಂತ ಪೂಜಾರಿ ನೇತೃತ್ವದ ತಂಡ ಹಾಗೂ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯ ಮಾವನ ಮನೆಯಲ್ಲಿ ಬಳ್ಳಾರಿ ಎಸಿಬಿ ಎಸ್​ಪಿ ಗುರುನಾಥ ಬಿ. ಮತ್ತೂರ್ ಅವರು ಏಕಕಾಲದಲ್ಲಿ ದಾಳಿ ಮಾಡಿ ದಾಖಲೆ ಸಂಗ್ರಹಿಸುತ್ತಿದ್ದಾರೆ.

ಓದಿ: ಹೊಸಪೇಟೆ: ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ

ಈ ಸಂದರ್ಭದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅಧಿಕಾರಿಗಳು, ಈಗಾಗಲೇ ದಾಖಲೆಗಳನ್ನು‌ ಪರಿಶೀಲನೆ ಮಾಡಲಾಗುತ್ತಿದೆ. ಇಲ್ಲಿಯವರೆಗೆ ಯಾವುದೇ ದಾಖಲೆಗಳು ಲಭ್ಯವಾಗಿಲ್ಲ. ಮಧ್ಯಾಹ್ನ 1 ಗಂಟೆ ವೇಳೆಗೆ ಪರಿಶೀಲನೆ ಅಂತ್ಯಗೊಳ್ಳಲಿದೆ. ಆಗ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.