ETV Bharat / state

ಬಳ್ಳಾರಿಯಲ್ಲಿ ಸರ್ಕಾರಿ ಬಸ್-ಲಾರಿ ಅಪಘಾತ; ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

author img

By

Published : May 22, 2023, 1:11 PM IST

Updated : May 22, 2023, 2:15 PM IST

ಬಳ್ಳಾರಿಯಲ್ಲಿ ಲಾರಿ ಹಾಗು ಸರ್ಕಾರಿ ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

accident
ಅಪಘಾತ

ಸರ್ಕಾರಿ ಬಸ್-ಲಾರಿ ಅಪಘಾತ

ಬಳ್ಳಾರಿ: ಜಿಲ್ಲೆಯ ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬಸ್ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮಸಮುದ್ರ ಗ್ರಾಮದ ಹೊರವಲಯದಲ್ಲಿ ಘಟನೆ ಜರುಗಿದೆ. ಸರ್ಕಾರಿ ಬಸ್ಸಿನಲ್ಲಿದ್ದ 30ಕ್ಕೂ ಅಧಿಕ ಜನರಿಗೆ ಗಂಭೀರ ಗಾಯಗಳಾಗಿದ್ದು ವಿಮ್ಸ್‌ಗೆ ದಾಖಲಿಸಲಾಗಿದೆ.

ಗದಗದಲ್ಲಿ ಬೈಕ್ ಅಪಘಾತ: ಬೈಕ್​ ನಿಯಂತ್ರಣ ತಪ್ಪಿ ರಭಸವಾಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಾಲಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ಬಳಿ‌ ನಡೆದಿತ್ತು. ಶ್ರೀಧರ ಗಡಗಿ (15) ಹಾಗೂ ಅನುಪಕುಮಾರ ಇಟಗಿ (16) ಮೃತ ದುರ್ದೈವಿಗಳು. ಗಂಭೀರವಾಗಿ ಗಾಯಗೊಂಡಿದ್ದ ಸವಾರ್ ಮೌನೇಶ ಎಂಬಾತನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರು. ಅಬ್ಬಿಗೇರಿ ಗ್ರಾಮದಿಂದ ರೋಣ ಪಟ್ಟಣಕ್ಕೆ ಒಂದೇ ಬೈಕ್​ನಲ್ಲಿ ಮೂವರು ಸವಾರರು ತೆರಳುತ್ತಿದರು. ಮಾರ್ಗ‌ ಮಧ್ಯೆ ನಿಯಂತ್ರಣಕ್ಕೆ ಸಿಗದ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೋಣ ಪೊಲೀಸ್ ಠಾಣೆ ವ್ಯಾಪ್ತಿ ಈ ಘಟನೆ ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ.

ಟ್ರ್ಯಾಕ್ಟರ್ - ಬೊಲೆರೋ ವಾಹನದ​ ನಡುವೆ ಭೀಕರ ಅಪಘಾತ: ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದರು. ಪಶ್ಚಿಮ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಇತ್ತೀಚೆಗೆ ಘಟನೆ ನಡೆದಿದೆ. ಇತರ ಇಬ್ಬರು ಗಾಯಗೊಂಡಿದ್ದರು. ರತ್ನಗಿರಿ - ಪಂಢರಪುರ ರಸ್ತೆಯ ಮೀರಜ್ ಬಳಿ ಬೆಳಗ್ಗೆ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತಪಟ್ಟವರಲ್ಲಿ 12 ವರ್ಷದ ಬಾಲಕ ಮತ್ತು ಮಹಿಳೆಯೂ ಸೇರಿದ್ದಾರೆ. ಗಾಯಗೊಂಡ ಇಬ್ಬರು ಪ್ರಯಾಣಿಕರನ್ನು ಮೀರಜ್ ಸಿವಿಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೊಲೆರೋ ಚಾಲಕನ ಅತಿ ವೇಗದ ಚಾಲನೆಯೇ ಅಫಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಜೀಪ್​ ಕೊಲ್ಲಾಪುರದಿಂದ ರತ್ನಗಿರಿ ಕಡೆಗೆ ಹೋಗುತ್ತಿತ್ತು. ಎದುರುಗಡೆಯಿಂದ ಬಂದ ಟ್ರಾಕ್ಟರ್ ಇಟ್ಟಿಗೆಗಳನ್ನು ಸಾಗಿಸುತ್ತಿತ್ತು. ಘಟನೆ ಸಂಬಂಧ ಟ್ರ್ಯಾಕ್ಟರ್​ ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ರಸ್ತೆ ಅಪಘಾತದಲ್ಲಿ ಬೆಂಗಾಲಿ ಕಿರುತರೆ ನಟಿ ಸಾವು: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಶನಿವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಬೆಂಗಾಲಿ ಕಿರುತೆರೆಯ ಜನಪ್ರಿಯ ನಟಿ ಸುಚಂದ್ರ ದಾಸ್‌ಗುಪ್ತ ಮೃತಪಟ್ಟಿದ್ದಾರೆ. ಸುಚಂದ್ರ ಕೋಲ್ಕತ್ತಾದ ಉತ್ತರ ಭಾಗದ ಪ್ರದೇಶದಲ್ಲಿ ರಾತ್ರಿ ತಮ್ಮ ಶೂಟಿಂಗ್ ಕೆಲಸ ಮುಗಿಸಿ ಬೈಕ್​ನಲ್ಲಿ ಮನೆಗೆ ಮರಳುತ್ತಿದ್ದರು. ಆದರೆ, ಈ ವೇಳೆ ಅತಿವೇಗದಿಂದ ಬಂದ ಲಾರಿಯೊಂದು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ನಟಿ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಶೂಟಿಂಗ್ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಲಾರಿ ಡಿಕ್ಕಿ: ಜನಪ್ರಿಯ ಕಿರುತೆರೆ ನಟಿ ಸಾವು

Last Updated :May 22, 2023, 2:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.