ಪ್ರೀತಿ ಹೆಸರಲ್ಲಿ ಯುವತಿ ಜೊತೆ ನಿರಂತರ ದೈಹಿಕ ಸಂಪರ್ಕ : ಕೈಕೊಟ್ಟ ಎಂಜಿನಿಯರ್ ಬಂಧನ

author img

By

Published : Jun 6, 2022, 7:48 PM IST

engineer-arrested-in-sexual-harassment-case-in-ballari

ಮದುವೆಯಾಗುವುದಾಗಿ ನಂಬಿಸಿ ಯುವತಿ ಜೊತೆ ದೈಹಿಕ ಸಂಪರ್ಕ ನಡೆಸಿ ಬಳಿಕ ಆಕೆಗೆ ವಂಚಿಸಿದ ಎಂಜಿನಿಯರ್​ವೊಬ್ಬರನ್ನು ಬಳ್ಳಾರಿಯಲ್ಲಿ ಬಂಧಿಸಲಾಗಿದೆ..

ಬಳ್ಳಾರಿ : ಮದುವೆಯಾಗುವುದಾಗಿ ನಂಬಿಸಿ ಪ್ರೀತಿಸಿದ ಯುವತಿಯ ಜೊತೆ ದೈಹಿಕ ಸಂಪರ್ಕ ನಡೆಸಿ ಬಳಿಕ ಆಕೆಗೆ ವಂಚಿಸಿರುವ ಆರೋಪದಡಿ ಬಳ್ಳಾರಿ ಕೆಎಂಎಫ್​ನ ಅಸಿಸ್ಟೆಂಟ್ ಟೆಕ್ನಿಕಲ್ ಎಂಜಿನಿಯರ್​ವೊಬ್ಬರನ್ನು ಇಲ್ಲಿನ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಪಿ.ವೆಂಕಟೇಶ್ ಎಂಬುವರೆ ಬಂಧಿತ ಎಂಜಿನಿಯರ್. ರಾಯಚೂರು ಮೂಲದ ಆರೋಪಿಯು ಬಳ್ಳಾರಿಯ ಯುವತಿಯೊಬ್ಬಳನ್ನು ಪ್ರೀತಿಸಿದ್ದ. ಬಳಿಕ ಮದುವೆಯಾಗುವುದಾಗಿ ಹೇಳಿಕೊಂಡು ನಿರಂತರ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ತದನಂತರ ಯುವತಿ ಮದುವೆಯಾಗೋಣ ಎಂದಾಗ ಅದೆಲ್ಲ ಸದ್ಯ ಬೇಡ, ಹೀಗೆಯೇ ಸ್ನೇಹಿತರಾಗಿ ಇರೋಣ ಎಂದು ಹೇಳಿ ನಿರಂತರ ಅತ್ಯಾಚಾರ ಮಾಡಿ ಮೋಸ ಮಾಡಿದ್ದಾನೆ ಎಂದು ದೂರಲಾಗಿದೆ.

ಯುವಕನ ಮಾತಿನಿಂದ ಯುವತಿಗೆ ಪ್ರೀತಿಯ ನಾಟಕವಾಡಿ ವಂಚನೆ ಆಗಿರುವುದು ಗೊತ್ತಾಗಿದೆ. ಹೀಗಾಗಿ, ಪ್ರೇಮದ ವಿಚಾರವನ್ನು ಮನೆಯವರಲ್ಲಿ ತಿಳಿಸಿದ್ದಾಳೆ. ವಿಷಯ ತಿಳಿದ ಪೋಷಕರು ವೆಂಕಟೇಶ್​​ ಬಳಿ ತಮ್ಮ ಮಗಳನ್ನು ಮದುವೆ ಆಗುವಂತೆ ಕೇಳಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ತಾನು ಮದುವೆಯಾಗುವುದಿಲ್ಲ ಎಂದು ಎಂಜಿನಿಯರ್ ಗಲಾಟೆ ಮಾಡಿದ್ದಾನೆ ಎನ್ನಲಾಗಿದೆ.

ಕೊನೆಗೆ ಯುವತಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು ನೀಡಿದ್ದಾಳೆ. ಪೊಲೀಸರು ಆರೋಪಿ ವೆಂಕಟೇಶ್ ಹಾಗೂ ಆತನಿಗೆ ಸಹಕಾರ ನೀಡಿದ ಹಿನ್ನೆಲೆಯಲ್ಲಿ ಸಹೋದರರಾದ ರಾಮಕೃಷ್ಣ, ತಾಯಣ್ಣ ಅವರ ಮೇಲೆ ಎಫ್​ಐಆರ್ ದಾಖಲಿಸಿ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ಇದನ್ನೂ ಓದಿ: ಚೀಟಿ ಹಣ ಹಾಕಿದ್ದಕ್ಕೆ ಹೆಂಡತಿಗೆ ನಿತ್ಯ ಬೈಗುಳ: ಬೇಸತ್ತು ಗಂಡನ ಕೊಲೆಗೆ ಸುಪಾರಿ ಕೊಟ್ಟಳು ಪತ್ನಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.