ETV Bharat / state

ಸುಗ್ರೀವಾಜ್ಞೆ ವಾಪಸ್​ ಪಡೆಯುವವರೆಗೂ ನಮ್ಮ ಹೋರಾಟ ನಿಲ್ಲಲ್ಲ: ಕೃಷ್ಣಮೂರ್ತಿ

author img

By

Published : Sep 23, 2020, 7:45 PM IST

ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಇದೇ 25ರಂದು ಭಾರತ್ ಬಂದ್​ಗೆ ಕರೆ ನೀಡಿರುವ ಹಿನ್ನೆಲೆ, ಇಂದು ಸಾಂಕೇತವಾಗಿ ಬಳ್ಳಾರಿ ಡಿಸಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

Karnataka State Farmers' Organization protests against government
ರೈತ ವಿರೋಧಿ ಸುಗ್ರಿವಾಜ್ಞೆ ವಾಪಾಸ್​ ಪಡೆಯುವವರೆಗೂ ನಮ್ಮ ಹೋರಾಟ ನಿಲ್ಲಲ್ಲ: ಕೃಷ್ಣಮೂರ್ತಿ

ಬಳ್ಳಾರಿ: ರೈತ ವಿರೋಧಿ ಸುಗ್ರಿವಾಜ್ಞೆಗಳನ್ನು ವಾಪಸ್​ ಪಡೆಯುವವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಕೃಷ್ಣಮೂರ್ತಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರೈತ ವಿರೋಧಿ ಸುಗ್ರೀವಾಜ್ಞೆ ವಾಪಸ್​ ಪಡೆಯುವವರೆಗೂ ನಮ್ಮ ಹೋರಾಟ ನಿಲ್ಲಲ್ಲ: ಕೃಷ್ಣಮೂರ್ತಿ

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಸರ್ಕಾರ ರೈತ ವಿರೋಧಿ ಕಾಯ್ದೆ ಕೈ ಬಿಡಬೇಕು. ಕಾರ್ಪೂರೇಟ್ ಸಂಸ್ಥೆಗಳಿಂದ ಅನ್ನದಾತನ ರಕ್ಷಿಸಿ, ಭೂ ಸುಧಾರಣಾ ಹೆಸರಿನಲ್ಲಿ ರೈತರು ಹಾಗೂ ಕೂಲಿ ಕಾರ್ಮಿಕರನ್ನು ಜೀತದಾಳುಗಳಾಗಿ ಮಾಡುವ ಸುಗ್ರೀವಾಜ್ಞೆ ವಾಪಸ್​ ಪಡೆಯಬೇಕು ಎಂದರು.

ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಇದೇ 25ರಂದು ಭಾರತ್ ಬಂದ್​ಗೆ ಕರೆ ನೀಡಿರುವ ಹಿನ್ನೆಲೆ, ಇಂದು ಸಾಂಕೇತವಾಗಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರೈತ ವಿರೋಧಿ ಸುಗ್ರೀವಾಜ್ಞೆಗಳನ್ನು ವಾಪಸ್​ ಪಡೆಯುವಂತೆ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.