ETV Bharat / state

ಅವರ ಹಾದಿ ಅವರಿಗೆ, ನಮ್ಮ ಹಾದಿ ನಮಗೆ.. ರೆಡ್ಡಿ ಹೊಸ ಪಕ್ಷ ಕುರಿತು ಸಚಿವ ಶ್ರೀರಾಮುಲು ಪ್ರತಿಕ್ರಿಯೆ

author img

By

Published : Dec 25, 2022, 5:23 PM IST

Updated : Dec 25, 2022, 5:50 PM IST

Minister Sriramulu
ಶ್ರೀರಾಮುಲು

ನಮ್ಮದು ರಾಷ್ಟ್ರೀಯ ಪಕ್ಷ- ಜನಾರ್ದನ್​ ರೆಡ್ಡಿಯವರ ಹೊಸ ಪಕ್ಷ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರಲ್ಲ- ಸಚಿವ ಶ್ರೀರಾಮುಲು ಪ್ರತಿಕ್ರಿಯೆ

ಸಾರಿಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ

ಬಳ್ಳಾರಿ: ನಮ್ಮದು ರಾಷ್ಟ್ರೀಯ ಪಕ್ಷ, ಪಕ್ಷಕ್ಕೆ ಅದರದೆ ಆದ ಹಿನ್ನೆಲೆ ಮತ್ತು ಸಿದ್ಧಾಂತ ಇದೆ. ಹೊಸ ಪಕ್ಷದಿಂದ ನಮ್ಮ ಪಕ್ಷದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಆದರೆ, ರೆಡ್ಡಿ ಹೊಸ ಪಕ್ಷ ಕಟ್ಟಿರುವುದರಿಂದ ಅವರ ಹಾದಿ ಅವರಿಗೆ, ನಮ್ಮ ಹಾದಿ ನಮಗೆ. ಅವರ ನಮ್ಮ ಸ್ನೇಹಕ್ಕೆ ಧಕ್ಕೆ ಇಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಪಕ್ಷ ಅವರಿಗೆ ಶಕ್ತಿಯಾಗಿ ನಿಂತಿದೆ: ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆ ಬಗ್ಗೆ ಸಚಿವ ಶ್ರೀರಾಮುಲು ಬಳ್ಳಾರಿಯಲ್ಲಿ ಪ್ರತಿಕ್ರಿಯೆ ನೀಡಿದರು. ರೆಡ್ಡಿ ಬುದ್ಧಿವಂತರು, ತಿಳಿದವರು, ಅನುಭವ ಇದ್ದ ವ್ಯಕ್ತಿ ಇದ್ದಾರೆ. ನನ್ನ ಪ್ರಾಣ ಸ್ನೇಹಿತನಾಗಿರುವ ರೆಡ್ಡಿ ಅವರು ಬಿಜೆಪಿ‌ ಶಕ್ತಿಯಾಗಿದ್ದರು. ಪಕ್ಷವೂ ಅವರಿಗೆ ಶಕ್ತಿಯಾಗಿ ನಿಂತಿದೆ. ನನ್ನ ಬೆಳವಣಿಗೆಗೆ ಹೇಗೆ ಜನಾರ್ದನ ರೆಡ್ಡಿ ಅವರು ಸಹಕಾರಿ ಆಗಿದ್ದರೋ, ಹಾಗೆಯೇ ನಾನು ಅವರಿಗೆ ಬಂಡೆಯಾಗಿನಿಂತಿದ್ದೆ ಎಂದು ಶ್ರೀರಾಮುಲು ಹೇಳಿದರು.

ನಾನು ಪಕ್ಷದ ಶಿಸ್ತಿನ ಸಿಪಾಯಿ: ನಾನಂತೂ ಬಿಜೆಪಿಯಲ್ಲಿ ಇರುತ್ತೇನೆ. ಸಿಎಂ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುವೆ. ಅವರು ವೈಯಕ್ತಿಕವಾಗಿ‌ ಪಕ್ಷ ಮಾಡಿದ್ದಾರೆ. ಬಿಜೆಪಿ ಅವರನ್ನು ಯಾವತ್ತು ಬಿಟ್ಟು ಕೊಟ್ಟಿಲ್ಲ. ಅವರೂ ಪಕ್ಷವನ್ನು ಬಿಟ್ಟು ಕೊಟ್ಟಿಲ್ಲ ಎಂದು ಹೇಳಿದ ಸಚಿವ ಶ್ರೀರಾಮುಲು, ನಾನು ಪಕ್ಷದ ಶಿಸ್ತಿನ ಸಿಪಾಯಿ, ಕಾಲ ಬಂದಾಗ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದರು.

ನಾನು ಒಳ್ಳೆ ಸ್ನೇಹಿತನಾಗಿ ಇರುತ್ತೇನೆ: ಕರ್ನಾಟಕದಲ್ಲಿ 2023ಕ್ಕೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲಾ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೇಕು. ಜನರ್ದಾನ ರೆಡ್ಡಿ ಅವರು ಹೊಸ ಪಕ್ಷ ಕಟ್ಟಿದ್ದಾರೆ. ಅದರ ಬಗ್ಗೆ ನಾನು ಯಾವುದೇ ಚರ್ಚೆ ಮಾಡುವುದಿಲ್ಲ. ಇಂದಿನ ದಿನದಲ್ಲಿ ರಾಜಕಾರಣ ಬೇರೆ ಮತ್ತು ಸ್ನೇಹವೇ ಬೇರೆ. ನಾನು ಅವರಿಗೆ ಒಳ್ಳೆ ಸ್ನೇಹಿತನಾಗಿ ಇರುತ್ತೇನೆ. ನನ್ನ ಪಕ್ಷದ ಸಿದ್ಧಾಂತ ಬೇರೆ, ಅವರ ಪಕ್ಷದ ಸಿದ್ಧಾಂತ ಬೇರೆ ಎಂದು ಶ್ರಿರಾಮುಲು ಹೇಳಿದರು.

ಜನರ್ದಾನ ರೆಡ್ಡಿ ತುಂಬಾ ಅನುಭವಿ ರಾಜಕಾರಣಿ: ಅವರು ಈ ಭಾಗದ ಹಿರಿಯ ನಾಯಕರಿದ್ದಾರೆ. ಅವರು ಬೆಜೆಪಿಗೆ ಶಕ್ತಿಯಾಗಿ ಇದ್ದರು. ಅವರಿಗೂ ಕೂಡ ಬಿಜೆಪಿ ದೊಡ್ಡ ಶಕ್ತಿಯಾಗಿ ನಿಂತಿದೆ. ಅವರು ಪಕ್ಷ ಘೋಷಣೆ ಮಾಡಿದ್ದಾರೆ. ಅದರ ಬಗ್ಗೆ ನಾನು ವಿಶ್ಲೇಷಣೆ ಮಾಡುವುದಿಲ್ಲ. ಅವರು ತುಂಬಾ ಅನುಭವಿ ರಾಜಕಾರಣಿ. ನಾನು ಒಬ್ಬ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದೇನೆ. ಕಾಲ ಬಂದಾಗ ಎಲ್ಲದಕ್ಕೂ ಉತ್ತರ ನೀಡುತ್ತೇನೆ. ಇದರ ಬಗ್ಗೆ ಚರ್ಚೆ ಮಾಡಲು ನನಗೆ ಇಷ್ಟ ಇಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ವ್ಯಾಪಾರ ವ್ಯವಹಾರ ಬಿಟ್ಟು ಬಿಜೆಪಿ ಕಟ್ಟಿದ್ದಕ್ಕೆ ಬೆಲೆ ಸಿಗಲಿಲ್ಲ: ಗಾಲಿ ಜನಾರ್ದನ ರೆಡ್ಡಿ

ಇನ್ನೂ ನಮ್ಮ ಸಂಬಂಧದ ಬಗ್ಗೆ ಮಾತನಾಡುವುದಾದರೆ, ರಾಜಕೀಯ ಹೊರತು ಪಡಿಸಿ ನಮ್ಮ ಸಂಬಂಧ ಇದೆ. ಇವತ್ತು ಭಾರತೀಯ ಜನತಾ ಪಾರ್ಟಿಯಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಇಲ್ಲಿ ತನಕ ನಾನು ಅವರ ಜೊತೆ ನಿಂತಿದ್ದೆ. ಅವರ ಬಗ್ಗೆ ಪಕ್ಷದ ಎಲ್ಲ ಹಿರಿಯ ರಾಷ್ಟ್ರೀಯ, ರಾಜ್ಯ ನಾಯಕರ ಗಮನಕ್ಕೂ ತರಲಾಗಿದೆ. ಜನಾರ್ದನ ರೆಡ್ಡಿ ಹೇಳಿರುವ ವಿಚಾರಗಳನ್ನು ಸಹ ಪಕ್ಷದ ಹೈಕಮಾಂಡ್‌ಗೆ ತಿಳಿಸಿದ್ದೇನೆ ಎಂದು ವಿವರಿಸಿದರು.

ಇದನ್ನೂ ಓದಿ: ಹೊಸ ರಾಜಕೀಯ ಪಕ್ಷ ಘೋಷಿಸಿದ ಮಾಜಿ ಸಚಿವ ಜನಾರ್ದನ​ ರೆಡ್ಡಿ!

Last Updated :Dec 25, 2022, 5:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.