ರೈತರ ಜಮೀನಿಗೆ ನುಗ್ಗಿದ ನೀರು: ವಿಡಿಯೋ ಮಾಡಿ ಅಳಲು ತೋಡಿಕೊಂಡ ರೈತರು

author img

By

Published : Oct 1, 2021, 1:54 PM IST

farmers crop damage due to river water in bidar

ಮಾಂಜ್ರಾ ನದಿಗೆ ಧನೇಗಾಂವ್ ಜಲಾಶಯದಿಂದ 80 ಸಾವಿರ ಕ್ಯೂಸೆಕ್​ ನೀರು ಹರಿಬಿಟ್ಟ ಹಿನ್ನೆಲೆ ರೈತರ ಬೆಳೆಗೆ ನೀರು ನುಗಿದ್ದು, ಸೂಕ್ತ ಪರಿಹಾರ ನೀಡುವಂತೆ ವಿಡಿಯೋ ಮಾಡಿ ಅನ್ನದಾತರು ಮನವಿ ಮಾಡಿಕೊಂಡಿದ್ದಾರೆ.

ಬೀದರ್: ಮಹಾರಾಷ್ಟ್ರದ ಧನೇಗಾಂವ್ ಜಲಾಶಯದಿಂದ ಹೆಚ್ಚುವರಿಯಾಗಿ 80 ಸಾವಿರ ಕ್ಯೂಸೆಕ್​ ನೀರನ್ನು ಮಾಂಜ್ರಾ ನದಿಗೆ ಹರಿಬಿಟ್ಟ ಹಿನ್ನೆಲೆ ರೈತರ ಬೆಳೆಗೆ ನೀರು ನುಗಿದ್ದು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ.

ಜಿಲ್ಲೆಯ ಕಮಲನಗರ ತಾಲೂಕಿನ ಸೋನಾಳ ಗ್ರಾಮದ ರೈತರ ಸೋಯಾಬೀನ್​ ಬೆಳೆಗೆ ನೀರು ನುಗ್ಗಿದೆ. ಜಲಾವೃತವಾದ ಬೆಳೆ ಮಧ್ಯೆ ನಿಂತು ರೈತನೋರ್ವ ಮರಾಠಿ ಭಾಷೆಯಲ್ಲಿ ಸಾಲ ಮಾಡಿಕೊಂಡ ರೈತ ಬದುಕುವುದು ಹೇಗೆ ಎಂದು ಹಾಡು ಹಾಡಿ, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುವ ಮೂಲಕ ನೋವು ತೋಡಿಕೊಂಡಿದ್ದಾರೆ.

ವಿಡಿಯೋ ಮೂಲಕ ತಮ್ಮ ಅಳಲು ತೋಡಿಕೊಂಡ ರೈತರು

ಇನ್ನು ಭಾಲ್ಕಿ ತಾಲೂಕಿನ ಲಖನಗಾಂವ್ ಹೋಬಳಿ ವ್ಯಾಪ್ತಿಯ ಸೋಮಪುರ ಗ್ರಾಮದ ಉತ್ತಮ ಬಿರಾದರ ಎಂಬ ರೈತನ ಎಂಟು ಎಕರೆ ಸೋಯಾಬೀನ್ ಬೆಳೆ ಸಹ ನೀರು ಪಾಲಾಗಿದೆ.

ಬೆಳೆಗೆ ಪರಿಹಾರ ನೀಡುವಂತೆ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾರೊಬ್ಬರು ಸ್ಪಂದಿಸುತ್ತಿಲ್ಲ. ದಯವಿಟ್ಟು ಸಂಬಂಧಿಸಿದ ಅಧಿಕಾರಿಗಳು ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ, ಪರಿಹಾರ ನೀಡಬೇಕು ಎಂದು ರೈತ ಮನವಿ ಮಾಡಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.