ETV Bharat / state

ಬಸವಕಲ್ಯಾಣ : ಗ್ರಾಮ ಪಂಚಾಯತ್‌ ಯುವ ಅಧ್ಯಕ್ಷ ಕೊರೊನಾಗೆ ಬಲಿ

author img

By

Published : May 2, 2021, 9:33 PM IST

Gram panchayat President died from corona
ಗ್ರಾ.ಪಂಚಾಯಿತಿ ಯುವ ಅಧ್ಯಕ್ಷ ಕೊರೊನಾಗೆ ಬಲಿ

ಹಣಮಂತ ಪದ್ಮೆ ಅವರ ತಂದೆ ದತ್ತು ಪದ್ಮೆ ಅವರಿಗೂ ಕೂಡ ಕೊರೊನಾ ಸೋಂಕು ದೃಢಪಟ್ಟಿದ್ದು, ಇವರು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ..

ಬಸವಕಲ್ಯಾಣ (ಬೀದರ್​) : ನಗರ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಮಹಾಮಾರಿ ಕೊರೊನಾ ಸೋಂಕು ತಾಲೂಕಿನ ಮಂಠಾಳ ಗ್ರಾಮ ಪಂಚಾಯತ್ ಅಧ್ಯಕ್ಷರನ್ನು ಬಲಿ ಪಡೆದಿದೆ.

ಮಂಠಾಳ ಗ್ರಾ.ಪಂ ಅಧ್ಯಕ್ಷ ಹಣಮಂತ ದತ್ತು ಪದ್ಮೆ(31) ಕೊರೊನಾಗೆ ಬಲಿಯಾದ ಯುವ ಅಧ್ಯಕ್ಷರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕು ದೃಢವಾಗಿದ್ದ ಹಿನ್ನೆಲೆ ಕಲಬುರಗಿಯ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಕರ್ನಾಟಕ ಗೃಹ ನಿರ್ಮಾಣ ಮಹಾಮಂಡಳಿಯ ನಿವೃತ್ತ ಅಧಿಕಾರಿ ದತ್ತು ಪದ್ಮೆ ಅವರ ಪುತ್ರರಾಗಿದ್ದ ಹಣಮಂತ ಪದ್ಮೆ ಅವರು, ಇತ್ತೀಚಿಗೆ ನಡೆದ ಗ್ರಾ.ಪಂ ಚುನಾವಣೆಯಲ್ಲಿ ಮಂಠಾಳ ಗ್ರಾಮದ ವಾರ್ಡ್ ಸಂಖ್ಯೆ-8ರಿಂದ ಅವಿರೋಧವಾಗಿ ಆಯ್ಕೆಯಾಗಿ, ನೂತನ ಅಧ್ಯಕ್ಷರಾಗಿ ನೇಮಕವಾಗಿದ್ದರು.

ಹಣಮಂತ ಪದ್ಮೆ ಅವರ ತಂದೆ ದತ್ತು ಪದ್ಮೆ ಅವರಿಗೂ ಕೂಡ ಕೊರೊನಾ ಸೋಂಕು ದೃಢಪಟ್ಟಿದ್ದು, ಇವರು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ತಿಂಗಳು ನಡೆದ ಬಸವಕಲ್ಯಾಣ ಕ್ಷೇತ್ರದ ವಿಧಾನಸಭೆ ಉಪಚುನಾವಣೆ ವೇಳೆಯಲ್ಲಿ ತಂದೆ ಮತ್ತು ಮಗ ಇಬ್ಬರು ಕೂಡ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿದ್ದರು.

ಚುನಾವಣೆ ಮುಗಿದ ನಂತರ ಕೊರೊನಾ ಧೃಡಪಟ್ಟ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದರು ಎಂದು ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.