ETV Bharat / state

ಗಣೇಶಮೂರ್ತಿ ನಿಮಜ್ಜನ ಹಿನ್ನೆಲೆ: ಸಿರುಗುಪ್ಪ ಪಟ್ಟಣಕ್ಕಿಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರ ಭೇಟಿ

author img

By

Published : Sep 7, 2019, 12:12 AM IST

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣಕ್ಕಿಂದು ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮರ್ ಕುಮಾರಪಾಂಡೆ ಭೇಟಿ ನೀಡಿ ಗಣೇಶ ಮಿತ್ರ ಮಂಡಳಿ ಸದಸ್ಯರೊಂದಿಗೆ ಚರ್ಚಿಸಿದ್ದಾರೆ.
ಸಿರುಗುಪ್ಪಾಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಭೇಟಿ

ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ಪಟ್ಟಣಕ್ಕಿಂದು ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮರ್ ಕುಮಾರಪಾಂಡೆ ಭೇಟಿ ನೀಡಿದ್ದಾರೆ.

ಹಿಂದೂ ಮಹಾಸಭಾ ಗಣೇಶ ಮಿತ್ರಮಂಡಳಿಯಿಂದ ಪ್ರತಿಷ್ಠಾಪಿಸಲಾದ ಗಣೇಶಮೂರ್ತಿ ನಿಮಜ್ಜನಕ್ಕೆ ಸಿರುಗುಪ್ಪ ತಾಲೂಕಿನ ದೇಶನೂರು ಗ್ರಾಮ ಮಾರ್ಗದಲ್ಲೇ ಗಣೇಶ ಮೂರ್ತಿಗಳ ಮೆರವಣಿಗೆ ಕೊಂಡೊಯ್ಯುಲು ಅವಕಾಶ ಕಲ್ಪಿಸಿಕೊಡಬೇಕೆಂಬ ಮನವಿ ಮಾಡಿದ್ದರು. ಈ ಮನವಿ ಮೇರೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮರ್ ಕುಮಾರ ಪಾಂಡೆ ಭೇಟಿ ನೀಡಿ, ಗಣೇಶ ಮಿತ್ರಮಂಡಳಿ ಸದಸ್ಯರೊಂದಿಗೆ ಚರ್ಚಿಸಿದ್ದಾರೆ. ಅವರೊಂದಿಗೆ ಬಳ್ಳಾರಿ ವಲಯದ ಐಜಿಪಿ ನಂಜುಂಡ ಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಡಿವೈಎಸ್ಪಿ ಅರುಣ ಕುಮಾರ್ ಸಹ ಭಾಗಿಯಾಗಿದ್ದರು.

ಪೊಲೀಸರು ಹಿಂದೂ ಮಹಾಸಭಾದ ಗಣೇಶ ಮಿತ್ರ ಮಂಡಳಿ ಸದಸ್ಯರು ಹಾಗೂ ದೇಶನೂರು ಗ್ರಾಮಸ್ಥರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಗಣೇಶಮೂರ್ತಿಗಳ ಮೆರವಣಿಗೆ ಮಾರ್ಗ ಬದಲಾವಣೆಯಿಲ್ಲ ಎಂಬ ಸ್ಪಷ್ಟನೆಯನ್ನು ಈಗಾಗಲೇ ಜಿಲ್ಲಾ ಪೊಲೀಸ್ ಇಲಾಖೆಯು ನೀಡಿದೆ. ಹಾಗಾಗಿ ಈ ದಿನ ನಡೆದ ಸಭೆಯಲ್ಲಿ ಮಾರ್ಗ ಬದಲಾವಣೆ ಕುರಿತು ಯಾವುದೇ ಚರ್ಚೆಗೆ ಆಸ್ಪದ ನೀಡೋದು ಅಸಾಧ್ಯ ಎನ್ನುತ್ತಿವೆ ಪೊಲೀಸ್ ಮೂಲಗಳು.

Intro:ಸಿರುಗುಪ್ಪಾಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಭೇಟಿ
ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ಪಟ್ಟಣಕ್ಕಿಂದು ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮರ್ ಕುಮಾರ
ಪಾಂಡೆ ಭೇಟಿ ನೀಡಿದ್ದಾರೆ.
ಹಿಂದೂ ಮಹಾಸಭಾ ಗಣೇಶ ಮಿತ್ರಮಂಡಳಿ ವತಿಯಿಂದ ಪ್ರತಿಷ್ಠಾಪಿಸಲಾದ ಗಣೇಶಮೂರ್ತಿ ನಿಮ್ಮಜ್ಜನಕ್ಕೆ ಸಿರುಗುಪ್ಪ ತಾಲೂಕಿನ ದೇಶನೂರು ಗ್ರಾಮ ಮಾರ್ಗದಲ್ಲೇ ಗಣೇಶ ಮೂರ್ತಿಗಳ ಮೆರವಣಿಗೆ ಕೊಂಡೊಯ್ಯುಲು ಅವಕಾಶ ಕಲ್ಪಿಸಿಕೊಡಬೇಕೆಂಬ ಮನವಿ ಮೇರೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮರ್ ಕುಮಾರ ಪಾಂಡೆ ಭೇಟಿ ನೀಡಿ,
ಹಿಂದೂ ಮಹಾಸಭಾದ ಗಣೇಶ ಮಿತ್ರಮಂಡಳಿ ಸದಸ್ಯರೊಂದಿಗೆ ಚರ್ಚಿಸಿದ್ದಾರೆ.
ಅವರೊಂದಿಗೆ ಬಳ್ಳಾರಿ ವಲಯದ ಐಜಿಪಿ ನಂಜುಂಡ ಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಡಿವೈಎಸ್ಪಿ ಅರುಣ ಕುಮಾರ್ ಇದ್ದಾರೆ.
Body:ಹಿಂದೂ ಮಹಾಸಭಾದ ಗಣೇಶ ಮಿತ್ರ ಮಂಡಳಿ ಸದಸ್ಯರು ಹಾಗೂ ದೇಶನೂರು ಗ್ರಾಮಸ್ಥರೊಂದಿಗೆ ಸುದೀರ್ಘವಾಗಿ ಚರ್ಚಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಗಣೇಶಮೂರ್ತಿಗಳ ಮೆರವಣಿಗೆ ಮಾರ್ಗ ಬದಲಾವಣೆಯಿಲ್ಲ ಎಂಬ ಸ್ಪಷ್ಟನೆಯನ್ನು ಈಗಾಗಲೇ ಜಿಲ್ಲಾ ಪೊಲೀಸ್ ಇಲಾಖೆಯು ನೀಡಿದ್ದು, ಆಗಾಗಿ ಈ ದಿನ ನಡೆದ ಸಭೆಯಲ್ಲಿ ಮಾರ್ಗ ಬದಲಾವಣೆ ಕುರಿತು ಯಾವುದೇ ಚರ್ಚೆಗೆ ಹಾಸ್ಪಾದ ನೀಡೋದು ಅಸಾಧ್ಯವೇ ಸರಿ ಎನ್ನುತ್ತಿವೆ ಪೊಲೀಸ್ ಮೂಲಗಳು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:
KN_BLY_5_POLICE_AGDP_VISIT_IN_SIRUGUPPA_7203310

KN_BLY_5e_POLICE_AGDP_VISIT_IN_SIRUGUPPA_7203310

KN_BLY_5f_POLICE_AGDP_VISIT_IN_SIRUGUPPA_7203310
ETV Bharat Logo

Copyright © 2024 Ushodaya Enterprises Pvt. Ltd., All Rights Reserved.