ETV Bharat / state

ರಾಮ ಮಂದಿರ ಭೂಮಿ ಪೂಜೆ: ಬೀದರ್​ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

author img

By

Published : Aug 4, 2020, 9:49 PM IST

DC
ಜಿಲ್ಲಾಧಿಕಾರಿ ರಾಮಚಂದ್ರನ್ ಆರ್

ಕಲಂ 144 ಅನ್ವಯ ಜಿಲ್ಲೆಯಾದ್ಯಂತ ಆಗಸ್ಟ್ 4 ರ ಮಧ್ಯರಾತ್ರಿಯಿಂದ 5 ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಬೀದರ್: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಹಮ್ಮಿಕೊಂಡ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ಆದೇಶ ಹೊರಡಿಸಿದ್ದಾರೆ.

Prohibition Across Bidar District
ಜಿಲ್ಲೆಯಾದ್ಯಂತ ನಿಷೇದಾಜ್ಞೆ

ಕಲಂ 144 ಅನ್ವಯ ಜಿಲ್ಲೆಯಾದ್ಯಂತ ಆಗಸ್ಟ್ 4 ರ ಮಧ್ಯರಾತ್ರಿಯಿಂದ 5 ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ, ಸಭೆ ಸಮಾರಂಭಗಳು ಮಾಡುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಅಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಜನರ ಓಡಾಟ ನಿರ್ಬಂಧಿಸಲಾಗಿದ್ದು ಮಾರಕಾಸ್ತ್ರ, ಆಯುಧ ಸೇರಿದಂತೆ ಪಟಾಕಿ ಮಾರಾಟಕ್ಕೂ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.