ETV Bharat / state

'ರಾಜ್ಯದ 1 ಕೋಟಿ ಕುಟುಂಬಗಳಿಗೆ ತಲಾ ₹10 ಸಾವಿರ ಕೊಡಿ.. ಆಮೇಲೆ ಲಾಕ್‌ಡೌನ್‌ ಮಾಡಿ..'

author img

By

Published : Apr 12, 2021, 2:45 PM IST

ವಿಪಕ್ಷ ನಾಯಕ ಸಿದ್ದರಾಮಯ್ಯವಿಪಕ್ಷ ನಾಯಕ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ

ಕಡ್ಡಾಯವಾಗಿ ಎಲ್ಲರಿಗೂ ಕೊರೊನಾ ಲಸಿಕೆ ಹಾಕಬೇಕು. ಕೊರೊನಾ ನಿಯಂತ್ರಣಕ್ಕೆ ಸರ್ವ ಪಕ್ಷಗಳ ಸಭೆ ಕರೆದರೆ ಹೋಗುತ್ತೇವೆ. ಕರೆಯದೆ ಹೊಗಲಿಕ್ಕಾಗುತ್ತಾ ಎಂದು ಪ್ರಶ್ನಿಸಿದರು..

ಬೀದರ್ : ಕೊರೊನಾ ಸೋಂಕು ತಡೆಯಲು ಲಾಕ್​ಡೌನ್ ಹೇರುವುದಾದರೆ ರಾಜ್ಯದ ಒಂದು ಕೋಟಿ ಕುಟುಂಬಗಳಿಗೆ ತಲಾ 10 ಸಾವಿರ ರೂ. ಅವರುಗಳ ಅಕೌಂಟ್​ಗೆ ಜಮಾ ಮಾಡಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಜಿಲ್ಲೆಯ ಹುಮನಾಬಾದ್ ಪಟ್ಟಣದ ಹೆಲಿಪ್ಯಾಡ್​ನಲ್ಲಿ ಮಾತನಾಡಿದ ಅವರು, ಲಾಕ್​ಡೌನ್ ಮಾಡುವುದರಿಂದ ಪರಿಹಾರ ಇಲ್ಲ.‌ ಮೊದಲು ಈ ರೋಗ ಹೇಗೆ ಹರಡುತ್ತಿದೆ ಎಂಬುದನ್ನು ಕಂಡು ಹಿಡಿದು ಚಿಕಿತ್ಸೆ ನೀಡಬೇಕು ಎಂದರು.

ಸರ್ಕಾರಕ್ಕೆ ಸಲಹೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ..

ಇದನ್ನೂ ಓದಿ: ಕೊರೊನಾ ನಿಯಂತ್ರಣಕ್ಕೆ ಬರದಿದ್ದರೆ ಒಂದು ವಾರದಲ್ಲಿ ಬೇರೆ ಕ್ರಮಗಳ ಬಗ್ಗೆ ನಿರ್ಧಾರ : ಸಿಎಂ

ಕೊರೊನಾ ಸೋಂಕು ಕಡಿಮೆ ಆದಾಗ ಸರ್ಕಾರ ರಿಲ್ಯಾಕ್ಸ್ ಮಾಡಿದೆ.‌ ಟೆಸ್ಟ್ ಮಾಡುವುದನ್ನೇ ಬಿಟ್ಟು ಬಿಟ್ಟಿದೆ. ಹೊರಗಡೆಯಿಂದ ಬರುವವರನ್ನು ಪರಿಶೀಲಿಸುವುದನ್ನು ಬಿಟ್ಟರು. ಸಭೆ-ಸಮಾರಂಭಗಳನ್ನು ಮಾಡಲುಕೆ ಶುರು ಮಾಡಿದರು ಎಂದು ಸಿದ್ದರಾಮಯ್ಯ ಹೇಳಿದರು.

ಕಡ್ಡಾಯವಾಗಿ ಎಲ್ಲರಿಗೂ ಕೊರೊನಾ ಲಸಿಕೆ ಹಾಕಬೇಕು. ಕೊರೊನಾ ನಿಯಂತ್ರಣಕ್ಕೆ ಸರ್ವ ಪಕ್ಷಗಳ ಸಭೆ ಕರೆದರೆ ಹೋಗುತ್ತೇವೆ. ಕರೆಯದೆ ಹೊಗಲಿಕ್ಕಾಗುತ್ತಾ ಎಂದು ಪ್ರಶ್ನಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.