ETV Bharat / state

ಬೀದರ್​: ಕುಡಿಯಲು ಹಣ ನೀಡುವಂತೆ ಪೀಡಿಸಿ ಹೆತ್ತ ತಾಯಿಯನ್ನೇ ಕೊಂದ ಪುತ್ರ

author img

By ETV Bharat Karnataka Team

Published : Sep 13, 2023, 8:15 AM IST

son killed his mother  son killed his mother in Bidar  Bidar crime news  ಕುಡಿತದ ಚಟಕ್ಕೆ ದಾಸನಾಗಿದ್ದ ಮಗನಿಂದ ತಾಯಿಯ ಬರ್ಬರ ಕೊಲೆ  ಮಗ ತನ್ನ ಹೆತ್ತ ತಾಯಿಯನ್ನೇ ಕೊಲೆ  ಹೆತ್ತ ತಾಯಿಯನ್ನೇ ಕೊಲೆ ಮಾಡಿರುವ ಘಟನೆ  ಕೊಡಲೆಯಿಂದ ಹಲ್ಲೆನಡೆಸಿ ಕೊಲೆ  ದೀಪಕ ಎಂಬಾತ ಕುಡಿತ ಚಟಕ್ಕೆ ದಾಸ  ಹಣ ನೀಡುವಂತೆ ತನ್ನ ತಾಯಿಯೊಂದಿಗೆ ಕ್ಯಾತೆ
ಕುಡಿತದ ಚಟಕ್ಕೆ ದಾಸನಾಗಿದ್ದ ಮಗನಿಂದ ತಾಯಿಯ ಬರ್ಬರ ಕೊಲೆ

ಮದ್ಯದ ಚಟಕ್ಕೆ ಅಂಟಿಕೊಂಡಿದ್ದ ಪುತ್ರನೊಬ್ಬ ಹೆತ್ತ ತಾಯಿಯನ್ನೇ ಕೊಲೆಗೈದ ಘಟನೆ ಬೀದರ್​ ಜಿಲ್ಲೆಯಲ್ಲಿ ನಡೆದಿದೆ.

ಬೀದರ್: ಹೆತ್ತ ತಾಯಿಯನ್ನೇ ಮಗ ಕೊಡಲಿಯಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಟ್ಟಣದ ಚೆಟ್ಟಿ ಗಲ್ಲಿಯಲ್ಲಿ ಮಂಗಳವಾರ ನಡೆದಿದೆ. ಶಂಕುತಲಾ ರಾಜಕುಮಾರ ಸಿಂಧೆ (55) ಹತ್ಯೆಯಾದವರು. ಮಗ ದೀಪಕ ಆರೋಪಿ.

ದೀಪಕ ಕುಡಿತದ ಚಟಕ್ಕೆ ದಾಸನಾಗಿದ್ದ. ಪ್ರತಿನಿತ್ಯ ಹಣ ನೀಡುವಂತೆ ತಾಯಿಯೊಂದಿಗೆ ಜಗಳವಾಡುತ್ತಿದ್ದ ಎಂದು ಸಂಬಂಧಿಕರು ತಿಳಿಸಿದ್ದಾರೆ. ಮಂಗಳವಾರವೂ ಸಹ ಕುಡಿಯಲು ಹಣ ನೀಡುವಂತೆ ಜಗಳ ಮಾಡಿದ್ದಾನೆ. ಈ ಜಗಳ ವಿಕೋಪಕ್ಕೆ ತಿರುಗಿದೆ. ಕುಪಿತ ಆರೋಪಿ ಕೊಡಲಿಯಿಂದ ತಾಯಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ, ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆಯ ಬಗ್ಗೆ ಸಂಬಂಧಿಕರು ಸಂಗ್ರಾಮ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಶಂಕುತಲಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಎಸ್​ಪಿ ಚನ್ನಬಸವಣ್ಣ ಎಸ್.ಎಲ್., ಹೆಚ್ಚುವರಿ ಎಸ್.ಪಿ.ಮಹೇಶ ಮೇಘಣ್ಣವರ್, ಪ್ರಭಾರಿ ಡಿವೈಎಸ್ಪಿ ಶಿವಾನಂದ ಪವಾಡಶೇಟ್ಟಿ, ಸಿಪಿಐ ಗುರು ಪಾಟೀಲ್, ಪಿಎಸ್​ಐ ತಿಮ್ಮಯ್ಯಾ, ವಿಧಿವಿಜ್ಞಾನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಸಂಬಂಧಿ ಸಂಗ್ರಾಮ ಎಂಬವರು ನೀಡಿದ ದೂರಿನ ಮೇರೆಗೆ ಹುಮನಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗೆ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಗಾರ್ಡ್​ ಕೊಂದು ಬ್ಯಾಂಕ್​ ವಾಹನದಲ್ಲಿದ್ದ 39 ಲಕ್ಷ ರೂಪಾಯಿ ದೋಚಿದ ದುಷ್ಕರ್ಮಿಗಳು, ಇನ್ನಿಬ್ಬರಿಗೆ ಗುಂಡೇಟು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.