ಕೆಮಿಕಲ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ: ಒಬ್ಬ ಸಾವು, ಮೂವರ ಸ್ಥಿತಿ ಗಂಭೀರ

author img

By

Published : Jul 13, 2022, 8:40 PM IST

Toxic gas leak in chemical factory in Bidar

ಬೀದರ್‌ ಜಿಲ್ಲೆಯ ಹುಮ್ನಾಬಾದ್‌ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಸೂಟಿಕ್ ಕೆಮಿಕಲ್‌ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ, ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ.

ಬೀದರ್​​: ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಿಂದ ವಿಷಾನಿಲ ಸೋರಿಕೆಯಾದ ಪರಿಣಾಮ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾದ ಘಟನೆ ಬುಧವಾರ ಬೀದರ್‌ ಜಿಲ್ಲೆಯ ಹುಮ್ನಾಬಾದ್‌ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಸೂಟಿಕ್ ಕೆಮಿಕಲ್‌ ಕಾರ್ಖಾನೆಯಲ್ಲಿ ನಡೆದಿದೆ.

ಕೆಮಿಕಲ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ

ಕಾರ್ಖಾನೆಯಲ್ಲಿ ಔಷಧಗಳಿಗೆ ಬಳಸುವ ಪೌಡರ್ ತಯಾರಿಸುವ ಸಂದರ್ಭದಲ್ಲಿ ಈ ಅವಘಡ ನಡೆದಿದೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ವ್ಯಕ್ತಿ ಗುರುಪ್ರಸಾದ ( 45 ) ಮೃತಪಟ್ಟ ದುರ್ದೈವಿ. ಗಂಭೀರ ಸ್ಥಿತಿಯಲ್ಲಿರುವ ವಿಷ್ಣು ಕುಮಾರ್, ಶಂಭು ಶರ್ಮಾ, ಗಿರೀಶ್ ರೆಡ್ಡಿ ಈ ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಹುಮ್ನಾಬಾದ್‌ ಪೊಲೀಸ್ ಠಾಣೆಯ ಸಿಪಿಐ ಶರಣಬಸಪ್ಪ ಕೊಡ್ಲಾ, ಪಿಎಸ್‌ಐ ಮಂಜನ ಗೌಡ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಇಲ್ಲಿಯವರೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ: ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡುತ್ತಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.