ETV Bharat / state

ಹೆಸರಲ್ಲಿ ಗೌಡ ಇದ್ದ ಕಾರಣಕ್ಕೆ ಸಿಎಂ, ಸಚಿವ ಸ್ಥಾನ ಹೇಳಿಕೆ: ಡಿವಿಎಸ್ ಸ್ಪಷ್ಟನೆ

author img

By

Published : Jun 23, 2019, 10:36 PM IST

ತಮ್ಮ ಹೆಸರಿನಲ್ಲಿ ಗೌಡ ಎಂದು ಇರುವ ಕಾರಣದಿಂದಲೇ ತಾನು ಸಿಎಂ, ಕೇಂದ್ರ ಮಂತ್ರಿಯಾಗಿದ್ದು ಎಂಬ ವಿವಾದಾತ್ಮಕ ಹೇಳಿಕೆಗೆ ಕೇಂದ್ರ ಮಂತ್ರಿ ಡಿ.ವಿ. ಸದಾನಂದ ಗೌಡ ಸ್ಪಷ್ಟನೆ ನೀಡಿದ್ದಾರೆ.

ವಿವಾದಿತ ಹೇಳಿಕೆಗೆ ಕೇಂದ್ರ ಸಚಿವ ಡಿವಿಎಸ್ ಸ್ಪಷ್ಟನೆ

ಬೆಂಗಳೂರು: ನನ್ನ‌ ಹೆಸರಲ್ಲಿ ಗೌಡ ಇದ್ದ ಕಾರಣ ನಾನು ಸಿಎಂ, ಕೇಂದ್ರ ಮಂತ್ರಿಯಾದೆ ಎಂಬ ತಮ್ಮ ಹೇಳಿಕೆ ವಿವಾದಕ್ಕೊಳಕಾಗುತ್ತಿದ್ದ ಹಾಗೇ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಸ್ಪಷ್ಟೀಕರಣ ನೀಡಿದ್ದಾರೆ.

ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ ಅವರು, ಬಿಜೆಪಿ ಪಕ್ಷ , ನನ್ನ ಹೆತ್ತ ತಾಯಿ ಸಮಾನ. ಕುಗ್ರಾಮ ಮಂಡೆಕೋಲಿನಿಂದ ಬಂದ ಈ ಹುಡುಗನಿಗೆ ಪಕ್ಷ ಎಲ್ಲವನ್ನು ಕೊಟ್ಟಿದೆ. ನನ್ನ ಪಕ್ಷ ಒಕ್ಕಲಿಗ ಸಮಾಜಕ್ಕೆ ಉತ್ತಮ ಸ್ಥಾನಮಾನ, ಪ್ರಾತಿನಿಧಿತ್ವವನ್ನು ನನ್ನ ಮೂಲಕ ಕೊಟ್ಟಿದೆ ಅನ್ನುವ ಮಾತನ್ನು ನಾನು ಹೆಮ್ಮೆಯಿಂದ ಕೇಳಿಕೊಂಡದ್ದನ್ನು ಬೇರೆ ರೀತಿಯಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನಿಂದು ನಿರಂತರ ಚುನಾವಣೆಗಳನ್ನು ಗೆಲ್ಲಲು, ಜಾತ್ಯತೀತವಾಗಿ, ಪಕ್ಷಾತೀತವಾಗಿ ನನ್ನನ್ನು ಜನರು ಆಯ್ಕೆ ಮಾಡಲು ನನ್ನ ಪಕ್ಷ ಮತ್ತು ಮೋದಿಯವರ ನಾಯಕತ್ವವೇ ಕಾರಣ. ಮುಂದೆ ಜನ ನಮ್ಮನ್ನು ಗುರುತಿಸುವುದು, ಗೌರವಿಸುವುದು ಮೋದಿಯವರ ನೇತೃತ್ವದಲ್ಲಿ ನಾವು ಮಾಡುವ ಕೆಲಸದಿಂದ ಎಂದಿದ್ದಾರೆ.

bng-dvs
ವಿವಾದಿತ ಹೇಳಿಕೆಗೆ ಕೇಂದ್ರ ಸಚಿವ ಡಿವಿಎಸ್ ಸ್ಪಷ್ಟನೆ

ಶನಿವಾರ ನಗರದಲ್ಲಿ ನಡೆದ ವಿಚಾರ ಸಂಕೀರ್ಣವೊಂದರಲ್ಲಿ ಡಿವಿಎಸ್​ ಮಾತನಾಡುತ್ತಾ , ನನ್ನ ಹೆಸರಲ್ಲಿ ಗೌಡ ಇದ್ದ ಕಾರಣ ನಾನು ಸಿಎಂ ಆದೆ. ಕೇಂದ್ರ ಮಂತ್ರಿಯಾದೆ ಎಂದು ಹೇಳಿಕೆ ನೀಡಿದ್ದರು.‌ ಈ ಹೇಳಿಕೆ ವಿರುದ್ಧ ಸಾಮಾಜಿಕ‌ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ತಮ್ಮ ಹೇಳಿಕೆ ವಿವಾದಾತ್ಮಕ ರೂಪ ಪಡೆಯುತ್ತಿರುವುದನ್ನು ಮನಗಂಡ ಸದಾನಂದ ಗೌಡರು ಟ್ವಿಟರ್ ಮೂಲಕ ಸಮಜಾಯಿಷಿ ನೀಡಿದ್ದಾರೆ.

Intro:Dvs clarificationBody:KN_BNG_03_23_DVSCONTROVERSY_EXPLANATION_SCRIPT_VENKAT_7201951

ಹೆಸರಲ್ಲಿ ಗೌಡ ಇದ್ದ ಕಾರಣ ಸಿಎಂ, ಕೇಂದ್ರ ಮಂತ್ರಿಯಾದೆ ಎಂಬ ವಿವಾದಿತ ಹೇಳಿಕೆಗೆ ಕೇಂದ್ರ ಸಚಿವ ಡಿವಿಎಸ್ ಸ್ಪಷ್ಟನೆ

ಬೆಂಗಳೂರು: ನನ್ನ‌ ಹೆಸರಲ್ಲಿ ಗೌಡ ಇದ್ದ ಕಾರಣ ಸಿಎಂ, ಕೇಂದ್ರ ಮಂತ್ರಿಯಾದೆ ಎಂಬ ತಮ್ಮ ಹೇಳಿಕೆ ವಿವಾದಕ್ಕೊಳಕಾಗುತ್ತಿದ್ದ ಹಾಗೇ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಸ್ಪಷ್ಟೀಕರಣ ನೀಡಿದ್ದಾರೆ.

ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ ಅವರು, ನನ್ನ ಬಿಜೆಪಿ ಪಕ್ಷ , ನನ್ನ ಹೆತ್ತ ತಾಯಿ ಸಮಾನ. ಕುಗ್ರಾಮ ಮಂಡೆಕೋಲಿನಿಂದ ಬಂದ ಈ ಹುಡುಗನಿಗೆ ಪಕ್ಷ ಎಲ್ಲವನ್ನು ಕೊಟ್ಟಿದೆ. ನನ್ನ ಪಕ್ಷ ಒಕ್ಕಲಿಗ ಸಮಾಜಕ್ಕೆ ಉತ್ತಮ ಸ್ಥಾನಮಾನ, ಪ್ರಾತಿನಿಧಿತ್ವವನ್ನು ನನ್ನ ಮೂಲಕ ಕೊಟ್ಟಿದೆ ಅನ್ನುವ ಮಾತನ್ನು ನಾನು ಹೆಮ್ಮೆಯಿಂದ ಕೇಳಿಕೊಂಡದ್ದನ್ನು ಬೇರೆ ರೀತಿ ಅರ್ಥೈಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನಿಂದು ನಿರಂತರ ಚುನಾವಣೆಗಳನ್ನು ಗೆಲ್ಲಲು, ಜಾತ್ಯತೀತವಾಗಿ, ಪಕ್ಷಾತೀತವಾಗಿ ನನ್ನನ್ನು ಜನರು ಆಯ್ಕೆ ಮಾಡಲು ನನ್ನ ಪಕ್ಷ ಮತ್ತು ಮೋದಿಯವರ ನಾಯಕತ್ವವೇ ಕಾರಣ. ಮುಂದೆ ಜನ ನಮ್ಮನ್ನು ಗುರುತಿಸುವುದು, ಗೌರವಿಸುವುದು ಮೋದಿಯವರ ನೇತೃತ್ವದಲ್ಲಿ ನಾವು ಮಾಡುವ ಕೆಲಸದಿಂದ ಎಂದು ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ನಡೆದ ವಿಚಾರ ಸಂಕಿರಣವೊಂದರಲ್ಲಿ ಮಾತನಾಡುತ್ತಾ ಡಿವಿಎಸ್, ನನ್ನ ಹೆಸರಲ್ಲಿ ಗೌಡ ಇದ್ದ ಕಾರಣ ನಾನು ಸಿಎಂ ಆದೆ, ಕೇಂದ್ರ ಮಂತ್ರಿಯಾದೆ ಎಂಬ ಹೇಳಿಕೆ ನೀಡಿದ್ದರು.‌ ಈ ಹೇಳಿಕೆ ವಿರುದ್ಧ ಸಮಾಜಿಕ‌ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ತಮ್ಮ ಹೇಳಿಕೆ ವಿವಾದಾತ್ಮಕ ರೂಪ ಪಡೆಯುತ್ತಿರುವುದನ್ನು ಮನಗಂಡ ಸದಾನಂದ ಗೌಡರು ಟ್ವಿಟರ್ ಮೂಲಕ ಸಮಜಾಯಿಶಿ ನೀಡಿದ್ದಾರೆ.Conclusion:Venkat
ETV Bharat Logo

Copyright © 2024 Ushodaya Enterprises Pvt. Ltd., All Rights Reserved.