ಅಪಘಾತದಲ್ಲಿ ಮೃತಪಟ್ಟ ಪ್ರೇಮಿ: ಮನನೊಂದು ನೇಣಿಗೆ ಶರಣಾದ ಯುವತಿ...!

author img

By

Published : Sep 17, 2021, 4:06 AM IST

girl suicide in chamarajanagara

ಗ್ರಾಮದ ಪೂಜಾ(19) ಮೃತಪಟ್ಟ ದುರ್ದೈವಿ. ‌ಚಾಮರಾಜನಗರ ತಾಲೂಕಿನ ಚಂದುಕಟ್ಟೆಮೋಳೆ ಗ್ರಾಮದ ಮಹೇಶ್(23) ಹಾಗೂ ಪೂಜಾ ಇಬ್ಬರು ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಬುಧವಾರ ರಾತ್ರಿ ಅಪಘಾತದಲ್ಲಿ ಮಹೇಶ್ ಮೃತಪಟ್ಟ‌ ವಿಚಾರ ತಿಳಿದು ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಚಾಮರಾಜನಗರ: ಪ್ರೇಮಿಸುತ್ತಿದ್ದ ಯುವಕ ಅಪಘಾತದಲ್ಲಿ ಮೃತಪಟ್ಟ ವಿಚಾರ ತಿಳಿದು ಯುವತಿ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಬಂಡಿಗೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಪೂಜಾ(19) ಮೃತಪಟ್ಟ ದುರ್ದೈವಿ. ‌ಚಾಮರಾಜನಗರ ತಾಲೂಕಿನ ಚಂದುಕಟ್ಟೆಮೋಳೆ ಗ್ರಾಮದ ಮಹೇಶ್(23) ಹಾಗೂ ಪೂಜಾ ಇಬ್ಬರು ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಬುಧವಾರ ರಾತ್ರಿ ಅಪಘಾತದಲ್ಲಿ ಮಹೇಶ್ ಮೃತಪಟ್ಟ‌ ವಿಚಾರ ತಿಳಿದು ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಯುವತಿ ಆತ್ಮಹತ್ಯೆ ಸುದ್ದಿ ತಿಳಿದು ಗ್ರಾನಸ್ಥರು, ಇವರಿಬ್ಬರ ಸ್ನೇಹಿತರ ಗುಂಪು ಮರುಗುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿ "ರೋಮಿಯೋ-ಜೂಲಿಯೆಟ್" ಗೆ ಹೋಲಿಸಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ‌ಚಾಮರಾಜನಗರ ಪೂರ್ವ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಈ ಸಂಬಂಧ ದೂರು, ಪ್ರಕರಣ ದಾಖಲಾಗಿಲ್ಲ.

ಇದನ್ನು ಓದಿ:ಪೆಟ್ರೋಲ್ ಟ್ಯಾಂಕರ್​​ಗೆ ಬೈಕ್ ಡಿಕ್ಕಿ: ಯುವಕರಿಬ್ಬರ ದುರ್ಮರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.