ETV Bharat / state

ಚಾಮರಾಜನಗರ: ಆಕಸ್ಮಿಕ ಬೆಂಕಿ ಅವಘಡಕ್ಕೆ 40 ಕುರಿಗಳು ಭಸ್ಮ, ರೈತ ಕಂಗಾಲು!

author img

By

Published : Jul 2, 2022, 1:22 PM IST

sheep burnt due to accidental fire incident in Chamarajanagar, Chamarajanagar crime news, Chamarajanagara sheep died news, Chamarajanagar news, ಚಾಮರಾಜನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ ಸುಟ್ಟು ಕರಕಲಾದ ಕುರಿಗಳು, ಚಾಮರಾಜನಗರ ಕ್ರೈಂ ನ್ಯೂಸ್, ಚಾಮರಾಜನಗರ ಕುರಿ ಸಾವು ಸುದ್ದಿ, ಚಾಮರಾಜನಗರ ಸುದ್ದಿ,
ಆಕಸ್ಮಿಕ ಬೆಂಕಿ ಅವಘಡಕ್ಕೆ 40 ಕುರಿಗಳು ಭಸ್ಮ

ಚಾಮರಾಜನಗರ: ಆಕಸ್ಮಿಕ ಬೆಂಕಿ ಅವಘಡಕ್ಕೆ 40 ಕುರಿಗಳು ಸುಟ್ಟು ಭಸ್ಮವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ಸಂಭವಿಸಿದೆ.

ಚಾಮರಾಜನಗರ: ಆಕಸ್ಮಿಕವಾಗಿ ಬೆಂಕಿ ತಗುಲಿ 40 ಕ್ಕೂ ಹೆಚ್ಚು ಕುರಿಗಳು ಸುಟ್ಟು ಭಸ್ಮವಾಗಿರುವ ಘಟನೆ ಕೋಡಿಉಗನೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಮಹಾದೇವ ಎಂಬವರ ಕುರಿದೊಡ್ಡಿಗೆ ಆಕಸ್ಮಿಕ ಬೆಂಕಿ ತಗುಲಿ ಈ ಘಟನೆ ಸಂಭವಿಸಿದೆ. ಈ ಘಟನೆ ಚಾಮರಾಜನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಓದಿ: ಕುರಿ ಮೈತೊಳೆಯಲು ಹೋದವ ನೀರುಪಾಲು.. ಮೃತದೇಹ ಹೊರತೆಗೆದ ಪಿಎಸ್​ಐ

ಇವರ ಕುರಿದೊಡ್ಡಿಯಲ್ಲಿ 40 ಕ್ಕೂ ಹೆಚ್ಚು ಕುರಿಗಳಿದ್ದವು. ಬೆಂಕಿ ಬಿದ್ದ ಕೂಡಲೇ ನೋಡನೋಡುತ್ತಿದ್ದಂತೆ ಎಲ್ಲ ಕುರಿಗಳು ಸುಟ್ಟು ಕರಕಲವಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು, ಬೆಂಕಿ ಅವಘಡ ಉಂಟಾಗುತ್ತಿದ್ದಂತೆ ಎಚ್ಚೆತ್ತ ಮಹಾದೇವ ಹಾಗೂ ನೆರೆಹೊರೆಯವರು ಅಗ್ನಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.