ETV Bharat / state

ಚಾಮರಾಜನಗರದಲ್ಲಿ ಪ್ರತ್ಯೇಕ ಅಪಘಾತ: ಓರ್ವಸಾವು, ನಾಲ್ವರ ಸ್ಥಿತಿ ಗಂಭೀರ

author img

By

Published : Jan 15, 2020, 6:49 PM IST

Accident in chamrajnagar
ಚಾಮರಾಜನಗರದಲ್ಲಿ ಪ್ರತ್ಯೇಕ ಅಪಘಾತ: ಓರ್ವಸಾವು, ನಾಲ್ವರ ಸ್ಥಿತಿ ಗಂಭೀರ

ಪ್ರತ್ಯೇಕ ಅಪಘಾತದಲ್ಲಿ ಓರ್ವ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ: ಪ್ರತ್ಯೇಕ ಅಪಘಾತದಲ್ಲಿ ಓರ್ವ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಗುಂಡ್ಲುಪೇಟೆ ಪಟ್ಟಣದ ಹೊರವಲಯದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಕ್ಯಾಲಿಕೆಟ್ ಮೂಲದ ರಾಧಾಕೃಷ್ಣ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು, ತಮಿಳುನಾಡಿನ ಪ್ರವಾಸಿಗರ ಟೆಂಪೋ ಟ್ರಾವೆಲ್ಲರ್​ನ ಚಕ್ರ ಸಿಡಿದು ಪಲ್ಟಿಯಾದ ಪರಿಣಾಮ 4 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಹೊರವಲಯದ ಮಾದಾಪುರ ಬಳಿ ನಡೆದಿದೆ.

ಗಾಯಾಳುಗಳನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಪ್ರತ್ಯೇಕ ಅಪಘಾತ: ಓರ್ವನ ಸಾವು, ನಾಲ್ವರ ಸ್ಥಿತಿ ಗಂಭೀರ


ಚಾಮರಾಜನಗರ: ಪ್ರತ್ಯೇಕ ಅಪಘಾತದಲ್ಲಿ ಓರ್ವ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

Body:ಗುಂಡ್ಲುಪೇಟೆ ಪಟ್ಟಣದ ಹೊರವಲಯದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ
ಕ್ಯಾಲಿಕೆಟ್ ಮೂಲದ ರಾಧಾಕೃಷ್ಣ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ
ಗುಂಡ್ಲುಪೇಟೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು, ತಮಿಳುನಾಡಿನ ಪ್ರವಾಸಿಗರ ಟೆಂಪೋ ಟ್ರಾವೆಲ್ಲರ್ ನ ಚಕ್ರ ಸಿಡಿದು ಪಲ್ಟಿಯಾದ ಪರಿಣಾಮ 4 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಹೊರವಲಯದ ಮಾದಾಪುರ ಬಳಿ ನಡೆದಿದೆ.

Conclusion:ಸದ್ಯ, ಗಾಯಾಳುಗಳನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು ಸಣ್ಣಪುಟ್ಟ ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.