ETV Bharat / state

ಮತಾಂತರ ವಿರೋಧಿ ಹೋರಾಟ: ರಾಷ್ಟ್ರಗೀತೆ ಹಾಡಿ ಪರಿಸ್ಥಿತಿ ತಿಳಿಗೊಳಿಸಿದ ಡಿವೈಎಸ್​ಪಿ!

author img

By

Published : Nov 23, 2020, 4:08 PM IST

ಚಾಮರಾಜನಗರದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನಡೆಯುತ್ತಿದ್ದ ಮಾತಿನ ಚಕಮಕಿ ಗಂಭೀರವಾಗುತ್ತಿದ್ದಂತೆ ಡಿವೈಎಸ್​ಪಿ ಪ್ರಿಯದರ್ಶಿನಿ ಸಾಣಿಕೊಪ್ಪ ಪ್ರತಿಭಟನಾಕಾರರಿಂದ ಮೈಕ್ ಕಿತ್ತುಕೊಂಡು ರಾಷ್ಟ್ರಗೀತೆ ಆರಂಭಿಸಿ ಪರಿಸ್ಥಿತಿ ತಿಳಿಗೊಳಿಸಿದರು..

DYS P Priyadarshini Sanikoppa
ಡಿವೈಎಸ್​ಪಿ ಪ್ರಿಯದರ್ಶಿನಿ ಸಾಣಿಕೊಪ್ಪ

ಚಾಮರಾಜನಗರ: ಜಿಲ್ಲೆಯಲ್ಲಿ ಕ್ರೈಸ್ಥ ಮಿಷನರಿಗಳು ಎಗ್ಗಿಲ್ಲದೆ ಮತಾಂತರ ನಡೆಸುತ್ತಿವೆ ಎಂದು ಆರೋಪಿಸಿ ಮತಾಂತರ ವಿರೋಧಿ ಹೋರಾಟ ಸಮಿತಿ, ಹಿಂದೂ ಜಾಗರಣಾ ವೇದಿಕೆ ವತಿಯಿಂದ ನಗರದಲ್ಲಿ ಬೃಹತ್ ಜಾಗೃತಿ ಜಾಥಾ ನಡೆಸಲಾಯಿತು.

ರಾಷ್ಟ್ರಗೀತೆ ಹಾಡಿ ಪರಿಸ್ಥಿತಿ ತಿಳಿಗೊಳಿಸಿದ ಡಿವೈಎಸ್​ಪಿ
ಮಾರಿಗುಡಿ ದೇವಸ್ಥಾನದಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತದ ಮೂಲಕ ಜಿಲ್ಲಾಡಳಿತ ಭವನ ತಲುಪಿ ಮತಾಂತರಿಗಳ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಜಿಲ್ಲಾಡಳಿತ ಭವನದ ಪ್ರವೇಶ ದ್ವಾರದಲ್ಲೇ ಮೈಕ್ ಮೂಲಕ ಘೋಷಣೆ ಕೂಗುವುದನ್ನು ನಿಲ್ಲಿಸುವಂತೆ ಪೊಲೀಸರು ಪ್ರತಿಭಟನಾಕಾರರನ್ನು ಹಾಗೂ ಮೈಕ್ ಕಟ್ಟಿದ್ದ ವಾಹನವನ್ನು ತಡೆಯುತ್ತಿದ್ದಂತೆ ಸಿಬ್ಬಂದಿ ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ‌ ಚಕಮಕಿ ಆರಂಭವಾಯಿತು.
ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನಡೆಯುತ್ತಿದ್ದ ಮಾತಿನ ಚಕಮಕಿ ಗಂಭೀರವಾಗುತ್ತಿದ್ದಂತೆ ಡಿವೈಎಸ್​ಪಿ ಪ್ರಿಯದರ್ಶಿನಿ ಸಾಣಿಕೊಪ್ಪ ಪ್ರತಿಭಟನಾಕಾರರಿಂದ ಮೈಕ್ ಕಿತ್ತುಕೊಂಡು ರಾಷ್ಟ್ರಗೀತೆ ಆರಂಭಿಸಿದರು.
ರಾಷ್ಟ್ರಗೀತೆ ಆರಂಭವಾಗುತ್ತಿದ್ದಂತೆ ಪ್ರತಿಭಟನಾಕಾರರು ತಮ್ಮ ಕೂಗಾಟವನ್ನು ಬಿಟ್ಟು ಡಿವೈಎಸ್​ಪಿ ಅವರೊಂದಿಗೆ ರಾಷ್ಟ್ರಗೀತೆ ಹಾಡಿದರು.ಬಳಿಕ ಪ್ರತಿಭಟನಾಕಾರರು ಜಿಲ್ಲಾಡಳಿತ ಪ್ರವೇಶದ್ವಾರದ ಒಳಗೆ ಪ್ರವೇಶಿಸಿ ರಸ್ತೆ ಬದಿಯಲ್ಲೇ ಕುಳಿತು ಮತಾಂತರಿಗಳು ಹಾಗೂ ಜಿಲ್ಲಾಡಳಿತದ ವಿರುದ್ದ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.