ETV Bharat / state

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು, ಹೊತ್ತಿ ಉರಿದ ಬೈಕ್

author img

By

Published : Apr 19, 2022, 2:16 PM IST

ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್​​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

Car and bike Accident in Chamarajanagar
ಹೊತ್ತಿ ಉರಿದ ಬೈಕ್

ಚಾಮರಾಜನಗರ: ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್​​ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪದ ಐಟಿಯ ಕಾಲೇಜು ರಸ್ತೆಯಲ್ಲಿ ನಡೆದಿದೆ. ಕೇರಳ ಪ್ರವಾಸಿಗ ಜೇಮ್ಸ್(30) ಮೃತ ವ್ಯಕ್ತಿ.

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಹೊತ್ತಿ ಉರಿದ ಬೈಕ್

ಮೈಸೂರಿನಿಂದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಕಾರು ತೆರಳುತ್ತಿತ್ತು ಎನ್ನಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಪ್ರವಾಸಿಗನ ರಾಯಲ್ ಎನ್​ಫೀಲ್ಡ್ ಬೈಕ್​​ನಲ್ಲಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಬೂದಿಯಾಗಿದೆ. ಈ ಸಂಬಂಧ ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

chamarajanagar
ಜೇಮ್ಸ್- ಮೃತ ಬೈಕ್​​ ಸವಾರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.