ETV Bharat / state

ಚಾಮರಾಜನಗರ: ಸಿಹಿ ತಿಂಡಿ ಎಂದು ಇರುವೆ ಪೌಡರ್ ತಿಂದು ಬಾಲಕ ಸಾವು

author img

By

Published : Mar 3, 2023, 4:26 PM IST

ಕೊಳ್ಳೇಗಾಲ ಗ್ರಾಮಾಂತರ ಠಾಣೆ
ಕೊಳ್ಳೇಗಾಲ ಗ್ರಾಮಾಂತರ ಠಾಣೆ

ಕೊಳ್ಳೇಗಾಲದ ತಾಲೂಕಿನ ಚಿಲಕವಾಡಿ ಗ್ರಾಮದ ಸಮೀಪ ನಡೆದುಹೋಗುತ್ತಿದ್ದ ಮಹಿಳೆಯೊಬ್ಬರ ಸರವನ್ನು ಖದೀಮರು ಬೈಕಿನಲ್ಲಿ ಬಂದು ಅಪಹರಿಸಿರುವ ಘಟನೆ ನಡೆದಿದೆ.

ಚಾಮರಾಜನಗರ: ಇರುವೆಗೆ ಸಿಂಪಡಿಸುವ ಇರುವೆ ನಾಶಕ ತಿಂದು 5 ವರ್ಷದ ಬಾಲಕ ಅಸುನೀಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ‌ ಪುಟ್ಟಿರಮ್ಮನ ದೊಡ್ಡಿ ಎಂಬ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕ್ಯಾತೆಗೌಡ ಎಂಬುವರ 5 ವರ್ಷದ ಮಗ ಶಿವು ಸಾವನ್ನಪ್ಪಿದ ಬಾಲಕ. ಕ್ಯಾತೆಗೌಡ ತಮ್ಮ ಮನೆಯ ಹಿತ್ತಲಿನ ಕಿಟಕಿಯಲ್ಲಿ ಇರುವೆಗೆ ಸಿಂಪಡಿಸುವ ಔಷಧವನ್ನು ತಂದಿಟ್ಟಿದ್ದರು. ಮಗು ಆಟವಾಡುವ ಸಮಯದಲ್ಲಿ ಇರುವೆ ಪುಡಿಯನ್ನು ತಿಂದು ನರಳಾಡುತ್ತಿತ್ತು. ಇದನ್ನು ಗಮನಿಸಿದ ಪೋಷಕರು ತಕ್ಷಣ ಕಾಮಗೆರೆ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ ಆರ್ ಆಸ್ಪತ್ರೆಗೆ ರವಾನಿಸಿದ್ದರು. ಆದರೆ, ಮಗು ಚಿಕಿತ್ಸೆಗೆ ಫಲಿಸದೇ ಗುರುವಾರ ರಾತ್ರಿ ಮೃತಪಟ್ಟಿದೆ. ಈ ಸಂಬಂಧ ಕೊಳ್ಳೇಗಾಲದ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಹಿಳೆ ಸರ ಕಸಿದು ಇಬ್ಬರು ಪರಾರಿ : ಮಹಿಳೆಯೊಬ್ಬರ ಸರ ಕಸಿದು ಬೈಕಿನಲ್ಲಿ ಇಬ್ಬರು ಪರಾರಿಯಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಚಿಲಕವಾಡಿ ಗ್ರಾಮದ ಸಮೀಪ ರಾತ್ರಿ ವೇಳೆ ನಡೆದಿದೆ. ನಿರ್ಮಲ ಎಂಬುವವರು ಸರ ಕಳೆದುಕೊಂಡವರು ಎಂಬುದು ತಿಳಿದು ಬಂದಿದೆ. ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳುವಾಗ ಬೈಕಿನಲ್ಲಿ ಬಂದ ಇಬ್ಬರು ಖದೀಮರು ಸರವನ್ನು ಕಸಿದು ಪರಾರಿಯಾಗಿದ್ದಾರೆ. ಅಂದಾಜು 35 ಗ್ರಾಂನ ಮಾಂಗಲ್ಯ ಸರ ಇದಾಗಿದೆ ಎಂಬುದು ತಿಳಿದು ಬಂದಿದೆ. ಅಗರ ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಅಕ್ರಮ ಅಕ್ಕಿ ಸಾಗಾಟ : ಪ್ಯಾಸೆಂಜರ್ ಆಟೋದಲ್ಲಿ ಅಕ್ರಮವಾಗಿ ಅಕ್ಕಿ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅಕ್ಕಿ ಸಮೇತ ಬಂಧಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಲ್ಲಿ ನಡೆದಿದೆ. ಮೈಸೂರು ನಗರ ಮೂಲದ ನದೀಂ ಪಾಶ, ಆಯೂಬ್ ಬಂಧಿತ ಆರೋಪಿಗಳು. ಬೇಗೂರು ಕಡೆಯಿಂದ ಮೈಸೂರು ಕಡೆಗೆ ಪ್ಯಾಸೆಂಜರ್ ಆಟೋದಲ್ಲಿ ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದಾರೆಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಪ್ಯಾಸೆಂಜರ್ ಆಟೋದಲ್ಲಿ ಸಮಾರು 800 ಕೆಜಿಯಷ್ಟು ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ರೀತಿ ಇನ್ನೊಂದೆಡೆ ಹೆಂಡತಿ ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಬುಧವಾರ ರಾತ್ರಿ ಸಂಭವಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮತ್ತೊಂದು ಕಡೆ ಕೋಣನಕುಂಟೆಯಲ್ಲಿ ವಾಸವಾಗಿದ್ದ ನಾಗೇಂದ್ರ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಂಡ್ತಿ ವಿಜಯಲಕ್ಷ್ಮಿ (28) ಮಕ್ಕಳಾದ ನಿಷಾ (7) ಹಾಗೂ ದೀಕ್ಷಾ (5) ಸಾವನ್ನಪ್ಪಿದ ದುದೈರ್ವಿಗಳು. ಊಟದಲ್ಲಿ ವಿಷ ಹಾಕಿ ಬಳಿಕ ತಾನೂ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ.‌ ಅಷ್ಟೊತ್ತಿಗಾಗಲೇ ಹೆಂಡ್ತಿ ಸಹೋದರ ಬಂದು ಅವರನ್ನು ರಕ್ಷಣೆ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ.

ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಗೇಂದ್ರ ಕ್ಯಾನ್ಸರ್​ನಿಂದ ಬಳಲುತ್ತಿದ್ದ. ಮಾನಸಿಕ‌ ಖಿನ್ನತೆಗೆ ಒಳಗಾಗಿದ್ದ. ಹೀಗಾಗಿ ಸಂಸಾರದ ನೌಕೆ ಮುನ್ನೆಡಸಲು ಕಷ್ಟವಾಗಿತ್ತು‌. ಹೆಂಡ್ತಿ ಕೆಲಸಕ್ಕೆ ಹೋಗಿ ಕುಟುಂಬದ ನಿರ್ವಹಣೆ ನಡೆಸುತ್ತಿದ್ದರು. ಈ ಮಧ್ಯೆ ಇಬ್ಬರ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿದೆ. ಇದರಿಂದ ಮನನೊಂದಿದ್ದ ನಾಗೇಂದ್ರ, ಹೆಂಡ್ತಿ ಮಕ್ಕಳಿಗೆ ಊಟದಲ್ಲಿ ವಿಷ ಬೆರೆಸಿ ತಿನ್ನಿಸಿ ಸಾವಿಗೆ ಕಾರಣನಾಗಿದ್ದಾನೆ. ಕೃತ್ಯವೆಸಗಿದ ಬಳಿಕ ಡೋರ್ ಲಾಕ್ ಮಾಡಿಕೊಂಡು ಚಾಕುವಿನಿಂದ ಕೈ‌ಕುಯ್ದುಕೊಂಡು ಆತ್ಮಹತ್ಯೆಗೆ ಮುಂದಾಗಿದ್ದ. ಅಷ್ಟೊತ್ತಿಗಾಗಲೇ ಹೆಂಡತಿ ಸಹೋದರ ಬಂದು ರಕ್ಷಣೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು: ಹೆಂಡತಿ ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.. ಹೆಂಡತಿ, ಇಬ್ಬರು ಮಕ್ಕಳ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.