ETV Bharat / state

ಬಾಸ್ ಬಾಸ್ ಸಿದ್ದು ಬಾಸ್, ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಡಿಕೆಶಿ ಮುಂದೆ ಘೋಷಣೆ!!

author img

By

Published : Jan 2, 2022, 4:13 PM IST

Updated : Jan 2, 2022, 4:33 PM IST

ಡಿಕೆಶಿ ದೇವಾಲಯ ಪ್ರದಕ್ಷಿಣೆ ಮಾಡುವಾಗಲೂ ಸಿದ್ದರಾಮಯ್ಯ ಅವರ ಅಭಿಮಾನಿಗಳು ನೃತ್ಯ ಮಾಡಿ ಸಿದ್ದರಾಮಯ್ಯಗೆ ಜೈಕಾರ ಹಾಕಿದ್ದಲ್ಲದೇ, ಮುಂದಿನ ಸಿಎಂ ಎಂದು ಕೂಗಿದರು. ಸಿದ್ದರಾಮಯ್ಯ ಅವರು ಸಿಎಂ ಆಗಬೇಕೆಂದೇ ಪೂಜೆ ಸಲ್ಲಿಸಬೇಕೆಂದು ಅಭಿಮಾನಿಗಳು ಒತ್ತಾಯಿಸಿದ ಘಟನೆಯೂ ನಡೆಯಿತು‌.

chamarajnagara
ಬೆಂಬಲಿಗರ ಘೋಷಣೆ

ಚಾಮರಾಜನಗರ: ಕಾಂಗ್ರೆಸ್​ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬ ಕಿತ್ತಾಟ ಬಗೆಹರಿಯುವುದಿಲ್ಲ ಎಂಬಂತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರ ಬೆಂಬಲಿಗರ 'ಮುಖ್ಯಮಂತ್ರಿ ಘೋಷಣೆ' ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ.

ಇಂದು ಚಾಮರಾಜನಗರದಲ್ಲಿ ಮೇಕೆದಾಟು ಪಾದಯಾತ್ರೆ ಕುರಿತ ಪೂರ್ವಭಾವಿ ಸಭೆಗೆ ಚಾಲನೆ ನೀಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಚಾಮರಾಜೇಶ್ವರನ ದೇವಸ್ಥಾನಕ್ಕೆ ಆಗಮಿಸಿದ್ದ ವೇಳೆ ಸಿದ್ದರಾಮಯ್ಯ ಅವರ ಬೆಂಬಲಿಗರು ಬಾಸ್​ ಬಾಸ್​ ಸಿದ್ದು ಬಾಸ್​.. ಮುಂದಿನ ಸಿಎಂ ಸಿದ್ದರಾಮಯ್ಯ ಅವರಿಗೆ ಜೈ, ಹುಲಿಯಾ ಸಿದ್ದರಾಮಯ್ಯ ಎಂದು ಅವರ ಅಭಿಮಾನಿಗಳು ಜೈಕಾರ ಹಾಕಿದ್ದಾರೆ.

ದೇವಾಲಯ ಹೊರಗೆ ಮತ್ತು ಒಳಗೆ ಸಿದ್ದರಾಮಯ್ಯ ಅಭಿಮಾನಿಗಳು ಕಿಕ್ಕಿರಿದು ಜಮಾಯಿಸಿ ದೇವಾಲಯ ಪ್ರಾಂಗಣದಲ್ಲೇ ಬಾಸ್ ಬಾಸ್ ಸಿದ್ದು ಬಾಸ್, ಮುಂದಿನ ಸಿಎಂ ಸಿದ್ದರಾಮಯ್ಯ ಅವರಿಗೆ ಜೈ, ಹುಲಿಯಾ ಸಿದ್ದರಾಮಯ್ಯ ಎಂದು ಘೋಷಣೆಗಳನ್ನು ಕೂಗಿದರು.

ಡಿಕೆಶಿ ಎದುರೇ ಸಿದ್ದರಾಮಯ್ಯ ಪರ ಬೆಂಬಲಿಗರ ಘೋಷಣೆ

ಡಿಕೆಶಿ ದೇವಾಲಯ ಪ್ರದಕ್ಷಿಣೆ ಮಾಡುವಾಗಲೂ ಸಿದ್ದರಾಮಯ್ಯ ಅವರ ಅಭಿಮಾನಿಗಳು ನೃತ್ಯ ಮಾಡಿ ಸಿದ್ದರಾಮಯ್ಯಗೆ ಜೈಕಾರ ಹಾಕಿದ್ದಲ್ಲದೇ, ಮುಂದಿನ ಸಿಎಂ ಎಂದು ಕೂಗಿದರು. ಸಿದ್ದರಾಮಯ್ಯ ಅವರು ಸಿಎಂ ಆಗಬೇಕೆಂದೇ ಪೂಜೆ ಸಲ್ಲಿಸಬೇಕೆಂದು ಅಭಿಮಾನಿಗಳು ಒತ್ತಾಯಿಸಿದ ಘಟನೆಯೂ ನಡೆಯಿತು‌.

ಒಂದೇ ಕಾರಿನಲ್ಲಿ ಬಂದ ಸಿದ್ದು, ಡಿಕೆಶಿ

ಸಿದ್ದರಾಮಯ್ಯ ಹಾಗೂ ಡಿಕೆಶಿ ಒಂದೇ ಕಾರಿನಲ್ಲಿ ಆಗಮಿಸಿ ಗಮನ ಸೆಳೆದರು. ಹೊರಡುವ ವೇಳೆ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳತ್ತ ಸಿದ್ದು ಕೈ ಬೀಸಿದರು. ಇದಾದ ಬಳಿಕ, ಡಿಕೆಶಿ ಪಕ್ಷದ ಬಾವುಟ ಪಡೆದು ಬೀಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಇಬ್ಬರು ನಾಯಕರಿಗೆ ಸಾಥ್ ಕೊಟ್ಟರು.

ದೇವಸ್ಥಾನ ಭೇಟಿ ಬಳಿಕ ಪ್ರವಾಸಿ ಮಂದಿರದಲ್ಲಿ ಬೈಕ್ ರ್ಯಾಲಿಗೆ ಇಬ್ಬರು ನಾಯಕರು ಚಾಲನೆ ಕೊಟ್ಟರು.

ಇದನ್ನೂ ಓದಿ: ಕೊಳ್ಳೇಗಾಲಕ್ಕೆ ಸಿದ್ದರಾಮಯ್ಯ, ಡಿಕೆಶಿ ಭೇಟಿ: ಸ್ವಾಗತಿಸಲು ಮುಗಿಬಿದ್ದ ಕಾಂಗ್ರೆಸ್ ಕಾರ್ಯಕರ್ತರು

Last Updated : Jan 2, 2022, 4:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.