ETV Bharat / state

ಚಾಮರಾಜನಗರದಲ್ಲಿ ಮಳೆ ಅವಾಂತರ: ಕೋಡಿ ಬಿದ್ದ ಹಲವು ಕೆರೆಗಳು

author img

By

Published : Aug 28, 2022, 10:33 AM IST

Updated : Aug 28, 2022, 12:16 PM IST

Etv Bharatheavy-rain-in-chamarajanagara
Etv Bharatಚಾಮರಾಜನಗರದಲ್ಲಿ ಮಳೆ ಅವಾಂತರ: ಕೋಡಿ ಬಿದ್ದ ಹಲವು ಕೆರೆಗಳು

ಚಾಮರಾಜನಗರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ನಲ್ಲೂರುಮೋಳೆ ಗ್ರಾಮ ಅಕ್ಷರಶಃ ಕೆರೆ ಆಗಿದೆ. ಕೆರೆಯ ನೀರು ಊರಿನ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಜಾನುವಾರು ಕೊಟ್ಟಿಗೆಗಳಿಗೆ ಹಾನಿಯಾಗಿದೆ.

ಚಾಮರಾಜನಗರ: ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಕೆರೆ ಏರಿ ಒಡೆದು ನೂರಾರು ಎಕರೆ ಕೃಷಿ ಪ್ರದೇಶಕ್ಕೆ ನೀರು‌ ನುಗ್ಗಿ ಅವಾಂತರ ಸೃಷ್ಟಿಯಾಗಿರುವ ಘಟನೆ ಯಳಂದೂರು ತಾಲೂಕಿನ‌ ಯರಗಂಬಳ್ಳಿಯಲ್ಲಿ ನಡೆದಿದೆ.

heavy-rain-in-chamarajanagara
ಜಮೀನಿಗೆ ನುಗ್ಗಿದ ನೀರು

ಕಳೆದ 3 ದಿನಗಳಿಂದ ಸುರಿಯುತ್ತಿರುವ ಜೋರು ಮಳೆಯಿಂದ ಯರಗಂಬಳ್ಳಿ ಮತ್ತು ಗಂಗವಾಡಿ ಗ್ರಾಮಕ್ಕೆ ಹೋಗುವ ಮಧ್ಯ ಇರುವ ಹುಳುಗೆರೆ ಕೆರೆ ಭರ್ತಿಯಾಗಿ ಏರಿ ಒಡೆದು ಜಮೀನುಗಳಿಗೆ ನೀರು ನುಗ್ಗಿದೆ. ನೀರಿನ ರಭಸಕ್ಕೆ ನಾಟಿ ಮಾಡಿದ ಭತ್ತ, ರಾಗಿ, ಕಬ್ಬು ಹಾಗೂ ತೆಂಗಿನ ಸಸಿಗಳು ನಾಶವಾಗಿದೆ. ವ್ಯವಸಾಯಕ್ಕೆ ಖರ್ಚು ಮಾಡಿದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ನಂಜನಾಯಕ ಎಂಬುವರು ಸಾಕಿದ್ದ 50ಕ್ಕೂ ಹೆಚ್ಚು ಕುರಿ, ಕೋಳಿಗಳೂ ಕೂಡ ನೀರಿನಲ್ಲಿ ಕೊಚ್ಚಿ ಹೋಗಿವೆ.

ಚಾಮರಾಜನಗರದಲ್ಲಿ ಮಳೆ ಅವಾಂತರ

ಚಾಮರಾಜನಗರ ತಾಲೂಕಿನ ನಲ್ಲೂರುಮೋಳೆ ಗ್ರಾಮ ಅಕ್ಷರಶಃ ಕೆರೆಯಾಗಿದೆ. ಕೆರೆಯ ನೀರು ಊರಿನ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಜಾನುವಾರು ಕೊಟ್ಟಿಗೆಗಳಿಗೆ ಹಾನಿಯಾಗಿದೆ. ಚಾಮರಾಜನಗರ ತಾಲೂಕಿನ ಅಮ್ಮನಪುರ ಕೆರೆ ಬರೋಬ್ಬರಿ 30 ವರ್ಷಗಳ ಬಳಿಕ ತುಂಬಿ‌ ಕೋಡಿ ಬಿದ್ದಿದೆ. ರಸ್ತೆ ಮೇಲೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

heavy-rain-in-chamarajanagara
ಮಳೆ ಅವಾಂತರ

ಯಳಂದೂರು ತಾಲೂಕಿನ ಕಂದಹಳ್ಳಿ, ಗಣಿಗನೂರು, ಯರಿಯೂರು, ಅಂಬಳೆ ಹಾಗೂ ಮದ್ದೂರು ಗ್ರಾಮಗಳ ಸುತ್ತಮುತ್ತಲಿನ ಕೃಷಿ ಭೂಮಿಗಳಲ್ಲಿ ನೀರು ಹರಿಯುತ್ತಿದ್ದು, ಫಸಲು ನಾಶವಾಗುವ ಆತಂಕ ಸೃಷ್ಟಿಸಿದೆ. ಹಲವು ಮನೆಗಳಿಗೂ ನೀರು ನುಗ್ಗಿದೆ. ಭಾರಿ ಪ್ರಮಾಣದಲ್ಲಿ ಜಲಾಶಯಗಳಿಗೆ ನೀರು ಹರಿದು ಬರುತ್ತಿರುವುದರಿಂದ ಸುರಕ್ಷತೆ ದೃಷ್ಟಿಯಿಂದ ಸುವರ್ಣಾವತಿ ಜಲಾಶಯದಿಂದ 1,400 ಕ್ಯುಸೆಕ್‌ ಹಾಗೂ ಚಿಕ್ಕಹೊಳೆ ಜಲಾಶಯದಿಂದ 200 ಕ್ಯುಸೆಕ್‌ ನೀರು ಹೊರ ಬಿಡಲಾಗುತ್ತಿದೆ.‌

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಲೀಲೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Last Updated :Aug 28, 2022, 12:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.