ETV Bharat / state

ಗಡಿಜಿಲ್ಲೆಯಲ್ಲಿ ರಚ್ಚೆ ಹಿಡಿದ ಮಳೆ: ಮಲೆಮಹದೇಶ್ವರ ಬೆಟ್ಟದ ಗುಡ್ಡ ಕುಸಿದು ಸಂಚಾರ ತಡೆ!

author img

By

Published : Oct 21, 2019, 10:32 PM IST

ಚಾಮರಾಜನಗರದಲ್ಲಿ ಭಾರಿ ಮಳೆ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಸಾಧಾರಣ ಮಳೆಯಾಗಿದ್ದು, ಯಳಂದೂರು, ಸಂತೇಮರಹಳ್ಳಿ, ಗುಂಡ್ಲುಪೇಟೆಯಲ್ಲಿ ಭಾಗದಲ್ಲಿ ಭಾರೀ ಮಳೆಯಾಗಿದೆ. ಬಂಡೀಪುರ ಅರಣ್ಯ ಪ್ರದೇಶವಂತೂ ಹೊಳೆಯಂತಾಗಿದೆ.

ಚಾಮರಾಜನಗರ : ಬೆಳಗ್ಗೆಯಿಂದಲೇ ಜಿಲ್ಲಾದ್ಯಂತ ಮಳೆಯಾಗುತ್ತಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ.

ಚಾಮರಾಜನಗರ ಜಿಲ್ಲಾಕೇಂದ್ರ, ಕೊಳ್ಳೇಗಾಲದಲ್ಲಿ ಸಾಧಾರಣ ಮಳೆಯಾಗಿರುವುದನ್ನು ಹೊರತುಪಡಿಸಿ ಯಳಂದೂರು, ಸಂತೇಮರಹಳ್ಳಿ, ಗುಂಡ್ಲುಪೇಟೆಯಲ್ಲಿ ಭಾಗದಲ್ಲಿ ಭಾರೀ ಮಳೆಯಾಗಿದೆ. ಇನ್ನು ಬಂಡೀಪುರ ಅರಣ್ಯ ಪ್ರದೇಶವಂತೂ ಹೊಳೆಯಂತಾಗಿದೆ.

ಮಲೆಮಹದೇಶ್ವರ ಬೆಟ್ಟದ ಗುಡ್ಡ ಕುಸಿದು ಸಂಚಾರ ತಡೆ

ಸಂಜೆ 4 ರಿಂದ ಯಾತ್ರಾಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾರೀ ಮಳೆಯಾಗುತ್ತಿತ್ತು, ಮಳೆಯ ನಡುವೆಯೂ ಚಿನ್ನದ ರಥ ಸೇವೆ ನಡೆದಿದೆ ಎಂದು ತಿಳಿದುಬಂದಿದೆ. ಮಲೆಮಹದೇಶ್ವರ ಬೆಟ್ಟದಿಂದ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ ಗುಡ್ಡ ಕುಸಿದು ಸಂಚಾರ ಅಸ್ತವ್ಯಸ್ತವಾಗಿತ್ತು ಎಂದು ತಿಳಿದುಬಂದಿದೆ.

Intro:ಗಡಿಜಿಲ್ಲೆಯಲ್ಲಿ ರಚ್ಚೆ ಹಿಡಿದ ಮಳೆ: ಮಲೆಮಹದೇಶ್ವರ ಬೆಟ್ಟದ ಗುಡ್ಡ ಕುಸಿದು ಸಂಚಾರ ತಡೆ!


ಚಾಮರಾಜನಗರ: ಬೆಳಗ್ಗೆಯಿಂದ ಜಿಲ್ಲಾದ್ಯಂತ ಆಗಾಗ್ಗೆ ವರುಣದೇವ ಅಕ್ಷರಶಃ ವರುಣ ರಚ್ಚೆ ಹಿಡಿದು ಜಿಲ್ಲೆಯ ಜನ ಜೀವನವನ್ನು ಅಸ್ತವ್ಯಸ್ತಗೊಳಿಸಿತು.

Body:ಚಾಮರಾಜನಗರ ಜಿಲ್ಲಾಕೇಂದ್ರ, ಕೊಳ್ಳೇಗಾಲದಲ್ಲಿ ಸಾಧಾರಣ ಮಳೆಯಾಗಿ ಹೊರತುಪಡಿಸಿ ಯಳಂದೂರು, ಸಂತೇಮರಹಳ್ಳಿ, ಗುಂಡ್ಲುಪೇಟೆಯಲ್ಲಿ ಭಾಗದಲ್ಲಿ ಭಾರೀ ಮಳೆಯಾಗಿದ್ದು ಬಂಡೀಪುರ ಅರಣ್ಯ ಪ್ರದೇಶವಂತೂ ಹೊಳೆಯಂತಾಗಿತ್ತು.

ಸಂಜೆ ೪ ರಿಂದ ಯಾತ್ರಾಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾರೀ ಮಳೆಯಾಗುತ್ತಿತ್ತು, ಮಳೆಯ ನಡುವೆಯೂ ಬರೋಬ್ಬರಿ 225 ಕ್ಕೂ ಹೆಚ್ಚು ಚಿನ್ನದ ರಥ ಸೇವೆ ನಡೆದಿದೆ ಎಂದು ತಿಳಿದುಬಂದಿದೆ.

Conclusion:ಮಲೆಮಹದೇಶ್ವರ ಬೆಟ್ಟದಿಂದ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ ಗುಡ್ಡ ಕುಸಿದು ಸಂಚಾರ ಅಸ್ತವ್ಯಸ್ತವಾಗಿದ್ದು ಭಕ್ತಾದಿಗಳು ತೊಂದರೆ ಗೀಡಾಗಿದ್ದು ಒಂದು ಪಾರ್ಶದಲ್ಲಿ ವಾಹನ ಸಂಚರಿಸುತ್ತಿವೆ ಎಂದು ಮೂಲಗಳು ತಿಳಿಸಿವೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.