ETV Bharat / state

ಕಾಡಲ್ಲಿ ಪ್ರಾಣಾಪಾಯ ಉಂಟಾದರೇ ಬಚಾವ್​​ ಆಗುವುದು ಹೇಗೆ?: ಫಾರೆಸ್ಟ್​ ಸಿಬ್ಬಂದಿಗೆ ವರ್ಕ್ ಶಾಪ್

author img

By

Published : Jun 26, 2022, 4:16 PM IST

Workshop for Forest staff
ಫಾರೆಸ್ಟ್​ ಸಿಬ್ಬಂದಿಗೆ ವರ್ಕ್ ಶಾಪ್

ಕಾಡಿನಲ್ಲಿ ಅಪಾಯ ಉಂಟಾದರೆ ಬದುಕುಳಿಯುವುದು ಹೇಗೆ, ಅರಣ್ಯದಲ್ಲಿ ದಾರಿ ತಪ್ಪಿದರೇ ಏನು ಮಾಡಬೇಕು, ಪ್ರಥಮ ಚಿಕಿತ್ಸೆ ಕೊಡುವುದು ಹೇಗೆ ಎಂಬುದರ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ತಜ್ಞರಾದ ವಿನಯ್ ಶಿರ್ಸಿ ಅವರು ಹೇಳಿಕೊಟ್ಟಿದ್ದಾರೆ.

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಪ್ರಾಕೃತಿಕ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆಯಲ್ಲಿ ತೊಡಗಿರುವ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಕರ್ತವ್ಯದ ವೇಳೆ ಪ್ರಾಣಾಪಾಯ ಸಂಭವಿಸಿದರೆ, ‌ಕಾಡಿನಲ್ಲಿ ಬದುಕುಳಿಯಲು ಏನು ಮಾಡಬೇಕು ಎಂಬುದನ್ನು ಕೆ. ಗುಡಿಯಲ್ಲಿ ತಜ್ಞರು ಹೇಳಿಕೊಟ್ಟಿದ್ದಾರೆ. ‌

ಫಾರೆಸ್ಟ್​ ಸಿಬ್ಬಂದಿಗೆ ವರ್ಕ್ ಶಾಪ್

ಕೆ. ಗುಡಿ ವಲಯದ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಕ್ಷೇತ್ರ ಸಿಬ್ಬಂದಿಗೆ ಸಂಪನ್ಮೂಲ ವ್ಯಕ್ತಿ ವಿನಯ್ ಶಿರ್ಸಿ ವಿಶೇಷ ತರಬೇತಿ ನೀಡಿದ್ದಾರೆ. ಕಳ್ಳಬೇಟೆ ಶಿಬಿರ, ಫಾರೆಸ್ಟ್ ಗಾರ್ಡ್‌ಗಳು, ಡಿಆರ್‌ಎಫ್‌ಒಗಳು ಮತ್ತು ಇತರರಿಗೆ ತಂತ್ರಗಾರಿಕೆಯ ಪಾಠ ಹೇಳಿಕೊಟ್ಟಿದ್ದಾರೆ. ಬೋಧನೆ, ವಿವರಣೆಯ ಜೊತೆಗೆ ಸಮಸ್ಯೆಗಳಿಗೆ ಹೇಗೆ ಪರಿಹಾರ ಕೊಂಡುಕೊಳ್ಳಬೇಕೆಂದು ಪ್ರಾಯೋಗಿಕ ವಿಧಾನದಲ್ಲೂ ವಿವರಿಸಿದ್ದಾರೆ.

ಏನದು ಬದುಕುಳಿಯುವ ತಂತ್ರಗಾರಿಕೆ: ಅರಣ್ಯದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ತಮ್ಮನ್ನು ತಾವು ಹೇಗೆ ಸ್ವಯಂ ರಕ್ಷಣೆ ಮಾಡಿಕೊಳ್ಳಬೇಕೆಂಬ ತಂತ್ರಗಳನ್ನು ಹೇಳಿಕೊಡಲಾಗಿದೆ. ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಕ್ಷೇತ್ರದಲ್ಲಿದ್ದಾಗ ಕಾಡುಪ್ರಾಣಿಗಳು ದಾಳಿ ನಡೆಸುವ ಸಾಧ್ಯತೆಗಳು ಹೆಚ್ಚು. ಇದರಿಂದ ತಪ್ಪಿಸಿಕೊಳ್ಳುವ ಮಾರ್ಗೋಪಾಯಗಳೇನು?, ಒಂದು ವೇಳೆ ಕಾಡು ಪ್ರಾಣಿಗಳ ದಾಳಿಯಿಂದ ಗಾಯಗಳಾದರೆ ಅವರನ್ನು ಹೇಗೆ ರಕ್ಷಣೆ ಮಾಡಬೇಕು. ಬೆಟ್ಟಗುಡ್ಡ ಹತ್ತಿದಾಗ ಉಸಿರಾಟದ ತೊಂದರೆ ಅನುಭವಿಸುವವರು, ತಲೆ ಸುತ್ತುಬಂದು ಬೀಳುವವರು ಮತ್ತು ಇತರ ಸಮಸ್ಯೆಗಳಿರುವವರಿಗೆ ನೀಡಬೇಕಾದ ಪ್ರಥಮ ಚಿಕಿತ್ಸೆ ವಿಧಾನಗಳ ಬಗ್ಗೆ ತಿಳಿಸಿಕೊಡಲಾಗಿದೆ.

Training by Forest Department staff specialist Vinay Shirsey
ಫಾರೆಸ್ಟ್​ ಸಿಬ್ಬಂದಿಗೆ ವರ್ಕ್ ಶಾಪ್

ಸರ್ವೆ ಮ್ಯಾಪ್ ಇಟ್ಟುಕೊಳ್ಳುವುದು ಉತ್ತಮ:​ ಫಾರೆಸ್ಟ್ ಗಾರ್ಡ್‌ಗಳು ಕೆಲವೊಮ್ಮೆ ಒಬ್ಬರೇ ಕಾಡಿನಲ್ಲಿ ಕೆಲಸ ಮಾಡುತ್ತಿರುತ್ತಾರೆ. ಈ ವೇಳೆಯಲ್ಲಿ ದಾರಿ ತಪ್ಪಿದರೆ ಮುಂದೆ ಅನುಸರಿಸಬೇಕಾದ ವಿಧಾನಗಳನ್ನು ವಿವರಿಸಲಾಗಿದೆ. ನೆಟ್‌ವರ್ಕ್ ಇರುವ ಕಡೆಗಳಲ್ಲಿ ದಾರಿ ತಪ್ಪಿದರೆ ಮೊಬೈಲ್‌ನಲ್ಲಿ ಲೊಕೇಷನ್ ಹಾಕಿಕೊಂಡು ತಲುಪಬೇಕಾದ ಜಾಗಕ್ಕೆ ಬಂದು ಸೇರಬಹುದು. ಆದರೆ ಕಾಡಿನಲ್ಲಿ ನೆಟ್‌ವರ್ಕ್ ಇರುವುದಿಲ್ಲ. ಮೊಬೈಲ್ ಬಳಕೆ ಮಾಡಲು ಸಾಧ್ಯವಾಗಲ್ಲ. ಈ ಪರಿಸ್ಥಿತಿ ಎದುರಾಗುವುದನ್ನು ಮೊದಲೇ ಮನಗಂಡು ಸಿಬ್ಬಂದಿ ಬಳಿ ಸದಾ ಸರ್ವೆ ಮ್ಯಾಪ್ ಇಟ್ಟುಕೊಂಡಿರಬೇಕು. ಅದನ್ನು ಅನುಸರಿಸಿ ಹತ್ತಿರದಲ್ಲೇ ಇರುವ ಅರಣ್ಯ ಇಲಾಖೆಯ ಶಿಬಿರ ತಲುಪಬೇಕು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ರೌಡಿಗಳ ಪರೇಡ್ ನಡೆಸಿ, ಎಚ್ಚರಿಕೆ ನೀಡಿದ ವಿಜಯಪುರ ಎಸ್​ಪಿ

ಗ್ರಾಮೀಣ ಪ್ರದೇಶದ ಜನರಂತೆಯೇ ಅರಣ್ಯ ಇಲಾಖೆಯ ಸಿಬ್ಬಂದಿಯೂ ವನ್ಯಜೀವಿಗಳ ದಾಳಿಗೆ ಒಳಗಾಗುತ್ತಾರೆ. ಬಲಿಯಾದರೆ ಅವರನ್ನು ನಂಬಿರುವ ಕುಟುಂಬಕ್ಕೆ ನಷ್ಟ ಭರಿಸಲು ಸಾಧ್ಯವಿಲ್ಲ. ಹೀಗೆ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವವರಿಗೆ ಬದುಕುಳಿಯುವ ತಂತ್ರಗಳನ್ನು ಕಲಿಸುವ ಅಗತ್ಯತೆ ಮತ್ತು ಅನಿವಾರ್ಯತೆ ಇದೆ. ಹಾಗಾಗಿ ಕಾರ್ಯಾಗಾರ ಅವರಿಗೆ ನೆರವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.