ETV Bharat / state

ಚಾಮರಾಜನಗರದಲ್ಲಿ ಅಕ್ರಮ ಚಟುವಟಿಕೆ ನಡೆಸಲು ಬಿಡಲ್ಲ: ನೂತನ ಎಸ್​ಪಿ ಟಿ.ಪಿ.ಶಿವಕುಮಾರ್

author img

By

Published : Jan 30, 2022, 7:50 AM IST

ಎಸ್​ಪಿ ಟಿ.ಪಿ.ಶಿವಕುಮಾರ್
ಎಸ್​ಪಿ ಟಿ.ಪಿ.ಶಿವಕುಮಾರ್

ಕಾನೂನುಗಳನ್ನು ಮೀರಿ ಅಕ್ರಮ ಚಟುವಟಿಕೆ ನಡೆಸುವವರನ್ನು ಮಟ್ಟ ಹಾಕುತ್ತೇನೆ. ಚಾಮರಾಜನಗರ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಬೇಕು. ಜನಸ್ನೇಹಿ ಪೊಲೀಸರಾಗಿ ಕರ್ತವ್ಯ ನಿರ್ವಹಿಸಲಾಗುವುದು ಎಂದು ನೂತನ ಎಸ್​ಪಿ ಟಿ.ಪಿ.ಶಿವಕುಮಾರ್ ಹೇಳಿದರು.

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವ ಬಹುದಿನದ ಆಸೆ ಈಡೇರಿದೆ. ಅಧಿಕಾರಿ ವರ್ಗವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸುತ್ತೇನೆ ಎಂದು ನೂತನ ಎಸ್​ಪಿ ಟಿ.ಪಿ.ಶಿವಕುಮಾರ್ ಹೇಳಿದರು.

ಅಧಿಕಾರ ವಹಿಸಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನುಗಳನ್ನು ಮೀರಿ ಅಕ್ರಮ ಚಟುವಟಿಕೆಗಳನ್ನು ನಡೆಸುವವರನ್ನು ಮಟ್ಟ ಹಾಕಲಿದ್ದು, ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಬೇಕು. ಜನಸ್ನೇಹಿ ಪೊಲೀಸರಾಗಿ ಕರ್ತವ್ಯ ನಿರ್ವಹಿಸಲಾಗುತ್ತದೆ. ಅಧಿಕಾರಿ ವರ್ಗವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸುವುದಾಗಿ ಭರವಸೆ ನೀಡಿದರು.

ಅಧಿಕಾರ ವಹಿಸಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್​ಪಿ ಟಿ.ಪಿ.ಶಿವಕುಮಾರ್

ಜಿಲ್ಲೆಯ ಬಗ್ಗೆ ಮಾತನಾಡಿದ ಅವರು, ನಾನು ತಿ.ನರಸಿಪುರ ತಾಲ್ಲೂಕಿನವನು. ಹಾಗಾಗಿ, ಈ ಜಿಲ್ಲೆಯ ಬಗ್ಗೆ ಚೆನ್ನಾಗಿ ತಿಳಿದಿದೆ. ಜಿಲ್ಲೆಯ ಬಗ್ಗೆ ಅಪಾರ ಪ್ರೀತಿ ಇದೆ. ಇಲ್ಲಿನ ಜನರು ಸುಸಂಸ್ಕೃತರು, ಸರಳ ಜೀವಿಗಳು. ನನ್ನ ಹಲವು ಸ್ನೇಹಿತರು, ಪರಿಚಯಸ್ಥರು ಇಲ್ಲಿದ್ದಾರೆ. ಚಿಕ್ಕಂದಿನಿಂದಲೇ ಈ ಜಿಲ್ಲೆಯನ್ನು ಕಂಡಿದ್ದೇನೆ. ಎಲ್ಲಾ ಭಾಗಗಳು ಗೊತ್ತಿದೆ. ಹಿಂದುಳಿದವರು, ದೀನ ದಲಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಚಾಮರಾಜನಗರದಲ್ಲಿ ಅಪಘಾತ ಪ್ರಕರಣಗಳನ್ನು ಕಡಿಮೆಗೊಳಿಸುವ ಪ್ರಯತ್ನ ಮಾಡಲಾಗುವುದು. ಟ್ರಾಫಿಕ್ ನಿಯಮಗಳು ಕುರಿತು ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.

ಶಿವಕುಮಾರ್ ಅವರು 2012ರ ಬ್ಯಾಚ್​ನ ಐಪಿಎಸ್ ಅಧಿಕಾರಿಯಾಗಿದ್ದು ಹಾವೇರಿ, ಬಾಗಲಕೋಟೆ, ಹಾಸನ, ಶಿವಮೊಗ್ಗದಲ್ಲಿ ಡಿವೈಎಸ್​ಪಿ, ಮಂಗಳೂರಿನಲ್ಲಿ ಎಎಸ್​ಪಿ, ಬೆಳಗಾವಿಯಲ್ಲಿ ಡಿಸಿಪಿ, ಮೈಸೂರಿನಲ್ಲಿ ಎಸ್​ಪಿ, ಬೆಂಗಳೂರಲ್ಲಿ ಟ್ರಾಫಿಕ್ ಡಿಸಿಪಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎಸ್​ಪಿ ಆಗಿ ಕಾರ್ಯ ನಿರ್ವಹಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.