ETV Bharat / state

ಹನೂರಲ್ಲಿ ಹಳ್ಳಕ್ಕೆ ಬಿದ್ದ ಕೆಎಸ್​ಆರ್​ಟಿಸಿ ಬಸ್​ : ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ, ಕೆಲವರ ಸ್ಥಿತಿ ಗಂಭೀರ

author img

By

Published : Mar 14, 2022, 4:49 PM IST

Updated : Mar 14, 2022, 10:15 PM IST

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ‌ ಪಿ.ಜಿ‌. ಪಾಳ್ಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕೆಎಸ್​ಆರ್​ಟಿಸಿ ಬಸ್​​ ಹಳ್ಳಕ್ಕೆ ಬಿದ್ದು ಮೂವರು ಮೃತಪಟ್ಟಿದ್ದಾರೆ.

KSRTC Bus Overturned in Chamarajanagar Hanur
ಹನೂರಲ್ಲಿ ಹಳ್ಳಕ್ಕೆ ಬಿದ್ದ ಕೆಎಸ್​ಆರ್​ಟಿಸಿ ಬಸ್​

ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್​​ಆರ್​ಟಿಸಿ ಬಸ್​ವೊಂದು ಹನೂರು ತಾಲೂಕಿನ ಕುಡುವಾಳೆ ಗ್ರಾಮ ಸಮೀಪದಲ್ಲಿ ಪಲ್ಟಿಯಾಗಿದ್ದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೇರಿದೆ.

ಹನೂರು ತಾಲೂಕಿನ ಮಾಳಿಗನತ್ತ ಗ್ರಾಮದ ಶಿವಮ್ಮ (60) ಸ್ಥಳದಲ್ಲೇ ಮೃತಪಟ್ಟರೆ, ಪಿ.ಜಿ ಪಾಳ್ಯ ಗ್ರಾಮದ ರಮೇಶ್ (30) ಆಸ್ಪತ್ರೆಯಲ್ಲಿ ಹಾಗೂ ತಮಿಳುನಾಡಿನ ಆಸ್ಪತ್ರೆಗೆ ಕರೆದೊಯ್ಯುವಾಗ ಮಾಳಿಗನತ್ತ ಗ್ರಾಮದ ಸಣ್ಣರಾಯಪ್ಪ ಅಸುನೀಗಿದ್ದಾರೆ‌.‌

KSRTC Bus Overturned in Chamarajanagar Hanur
ಹನೂರಲ್ಲಿ ಹಳ್ಳಕ್ಕೆ ಬಿದ್ದ ಕೆಎಸ್​ಆರ್​ಟಿಸಿ ಬಸ್​

ಬಸ್​​​ನಲ್ಲಿ ಪ್ರಯಾಣಿಸುತ್ತಿದ್ದ 95 ಮಂದಿಯಲ್ಲಿ 38 ಮಂದಿಗೆ ಗಾಯವಾಗಿದ್ದು, 7 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ. ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆ ಹಾಗೂ ಹನೂರಿನ ಹೋಲಿಕ್ರಾಸ್ ಮತ್ತು ಜನನಿ ಆಸ್ಪತ್ರೆಗಳಲ್ಲಿ ಗಾಯಗೊಂಡವರು ದಾಖಲಾಗಿದ್ದಾರೆ.

ಹನೂರಲ್ಲಿ ಹಳ್ಳಕ್ಕೆ ಬಿದ್ದ ಕೆಎಸ್​ಆರ್​ಟಿಸಿ ಬಸ್​

ಘಟನೆ ಸಂಬಂಧ ಕೆಎಸ್ಆರ್​​ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್ ಪ್ರತಿಕ್ರಿಯಿಸಿ, ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿರುವುದೇ ಘಟನೆಗೆ ಕಾರಣವಾಗಿದೆ. ಅಪಘಾತದಲ್ಲಿ ಚಾಲಕನಿಗೂ ತೀವ್ರ ಸ್ವರೂಪದ ಗಾಯಗಳಾಗಿದವೆ ಎಂದರು.

ಮೃತರ ಕುಟುಂಬಗಳಿಗೆ ಅಂತಿಮ ಸಂಸ್ಕಾರಕ್ಕೆಂದು ಈಗಾಗಲೇ 25 ಸಾವಿರ ರೂ. ನೀಡಿದ್ದು ಗಾಯಗೊಂಡವರಿಗೆ ಗಾಯದ ಸ್ವರೂಪದ ಆಧಾರದಲ್ಲಿ 5 ಸಾವಿರ ರೂ.ವರೆಗೂ ಪರಿಹಾರ ನೀಡಲಾಗುವುದು. ಈಗ ಆ ಪ್ರಕ್ರಿಯೆಯೂ ನಡೆಯುತ್ತಿದೆ ಎಂದು ಶ್ರೀನಿವಾಸ್ ತಿಳಿಸಿದ್ದಾರೆ.

ಇದನ್ನೂ ಓದಿ: ಪತ್ನಿಯ ಮೇಲಿನ ಪತಿಯ ಹಲ್ಲೆಗೆ ಬಿಗ್ ಟ್ವಿಸ್ಟ್: ಗಂಡನ ಕ್ರೌರ್ಯ ಬಿಚ್ಚಿಟ್ಟ ಅಪೂರ್ವ

Last Updated : Mar 14, 2022, 10:15 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.