ಚಾಮರಾಜನಗರ: ಹಸು ಮೇಯಿಸಲು ಹೋಗಿದ್ದ ರೈತನ ಕೊಂದ ಚಿರತೆ

author img

By

Published : Sep 23, 2022, 11:19 AM IST

leopard-kills-a-farmer-in-chamarajanagar

ಹಸು ಮೇಯಿಸಲು ತೆರಳಿದ್ದ ರೈತ ಹಾಗೂ ಕರುವೊಂದರ ಮೇಲೆ ಚಿರತೆ ದಾಳಿಗೈದು ಕೊಂದಿರುವ ಬೆಚ್ಚಿಬೀಳಿಸುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ: ಹಸು ಮೇಯಿಸಲು ತೆರಳಿದ್ದ ರೈತ ಹಾಗೂ ಕರುವೊಂದರ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಹನೂರು ತಾಲೂಕಿನ ಕೆವಿಎಂ ದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಕೆವಿಎಂ ದೊಡ್ಡಿ ಗ್ರಾಮದ ಗೋವಿಂದಯ್ಯ (65) ಮೃತಪಟ್ಟವರು.‌ ಹಸು ಮೇಯಿಸಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಚಿರತೆಯು ರೈತನ ಬಲಗಾಲನ್ನು ತಿಂದು ಪರಾರಿಯಾಗಿದೆ ಎನ್ನಲಾಗುತ್ತಿದೆ. ಸುದ್ದಿ ತಿಳಿಯುತ್ತಿದ್ದಂತೆ ರೈತ ಮುಖಂಡರು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆಯಲ್ಲಿ ಮಹಿಳೆಯನ್ನು ಬಲಿ ಪಡೆದು ಆತಂಕ ಮೂಡಿಸಿದ್ದ ಚಿರತೆ ಸೆರೆ - ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.