ETV Bharat / state

ಬೈಕ್​ಗಳ ನಡುವೆ ಡಿಕ್ಕಿ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ

author img

By

Published : Oct 29, 2019, 2:21 AM IST

ಕಾಮಗೆರೆ ಗ್ರಾಮದ ಸಚಿನ್ ಮೃತಪಟ್ಟ ದುರ್ದೈವಿ. ಈತನ ಬೈಕ್‍ನ ಹಿಂಬದಿಯಲ್ಲಿ ಕುಳಿತಿದ್ದ ಸ್ನೇಹಿತ ವಿಕಾಸ್ ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ಮತ್ತೊಂದು ಬೈಕ್ ಸವಾರ ಮಂಡ್ಯ ಜಿಲ್ಲೆಯ ಚಿರನಹಳ್ಳಿಯ ಗ್ರಾಮದ ತೇಜು ಮತ್ತು ಆತನ ಸ್ನೇಹಿತನ ಸ್ಥಿತಿಯೂ ಗಂಭೀರವಾಗಿದೆ.

ಬೈಕ್​ಗಳ ನಡುವೆ ಡಿಕ್ಕಿ

ಚಾಮರಾಜನಗರ: ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಮಂಗಲ ಗ್ರಾಮ ಸಮೀಪದ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ರಸ್ತೆಯಲ್ಲಿ ಸಂಭವಿಸಿದೆ.

ಕಾಮಗೆರೆ ಗ್ರಾಮದ ಸಚಿನ್ ಮೃತಪಟ್ಟ ದುರ್ದೈವಿ. ಈತನ ಬೈಕ್‍ನ ಹಿಂಬದಿಯಲ್ಲಿ ಕುಳಿತಿದ್ದ ಸ್ನೇಹಿತ ವವಿಕಾಸ್ ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ಮತ್ತೊಂದು ಬೈಕ್ ಸವಾರ ಮಂಡ್ಯ ಜಿಲ್ಲೆಯ ಚಿರನಹಳ್ಳಿಯ ಗ್ರಾಮದ ತೇಜು ಮತ್ತು ಆತನ ಸ್ನೇಹಿತನ ಸ್ಥಿತಿಯೂ ಗಂಭೀರವಾಗಿದೆ.

ತೇಜು ಮತ್ತು ಆತನ ಸ್ನೇಹಿತ ದೀಪಾವಳಿ ಹಬ್ಬದ ಪ್ರಯುಕ್ತ ಮಂಡ್ಯದಿಂದ ಮಲೆಮಹದೇಶ್ವರ ಬೆಟ್ಟಕ್ಕೆ ವಿಶೇಷ ಪೂಜೆ ಸಲ್ಲಿಸಿ ವಾಪಸ್ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.‌ ಹನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಎರಡು ಬೈಕ್ ಮುಖಾಮುಖಿ: ಓರ್ವನ ಸಾವು, ಮೂವರ ಸ್ಥಿತಿ ಗಂಭೀರ


ಚಾಮರಾಜನಗರ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ
ಕೊಳ್ಳೇಗಾಲ ತಾಲ್ಲೂಕಿನ ಮಂಗಲ ಗ್ರಾಮ ಸಮೀಪದ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ರಸ್ತೆಯಲ್ಲಿ ನಡೆದಿದೆ.

Body:ಕಾಮಗೆರೆ ಗ್ರಾಮದ ಸಚಿನ್ ಮೃತಪಟ್ಟ ದುರ್ದೈವಿ. ಈತನ ಬೈಕ್‍ನ ಹಿಂಬದಿಯಲ್ಲಿ ಕುಳಿತಿದ್ದ ಸ್ನೆಹಿತ ವಿಕಾಸ್ ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ಮತ್ತೊಂದು ಬೈಕ್ ಸವಾರ ಮಂಡ್ಯ ಜಿಲ್ಲೆಯ ಚಿರನಹಳ್ಳಿಯ ಗ್ರಾಮದ ತೇಜು ಮತ್ತು ಆತನ ಸ್ನೇಹಿತನ ಸ್ಥಿತಿಯೂ ಗಂಭೀರವಾಗಿದೆ.

ತೇಜು ಮತ್ತು ಆತನ ಸ್ನೇಹಿತ ದೀಪಾವಳಿ ಹಬ್ಬದ ಪ್ರಯುಕ್ತ ಮಂಡ್ಯದಿಂದ ಮಲೈಮಹದೇಶ್ವರ ಬೆಟ್ಟಕ್ಕೆ ವಿಶೇಷ ಪೂಜೆ ಸಲ್ಲಿಸಿ ವಾಪಸ್ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.‌

Conclusion:ಹನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.