ಭಾರತ್​ ಜೋಡೋ ಯಾತ್ರೆ ರಾಜ್ಯ ಪ್ರವೇಶ: ಗುಂಡ್ಲುಪೇಟೆಯಲ್ಲಿ ಖಾಕಿ ಹೈ ಅಲರ್ಟ್

author img

By

Published : Sep 30, 2022, 6:49 AM IST

Updated : Sep 30, 2022, 10:04 AM IST

police alert for bharat jodo yatra

ಇಂದು ಗುಂಡ್ಲುಪೇಟೆ ಮೂಲಕ ರಾಹುಲ್ ಗಾಂಧಿ ನೇತೃತ್ವದ ಭಾರತ್​ ಜೋಡೋ ಯಾತ್ರೆ ರಾಜ್ಯ ಪ್ರವೇಶಿಸಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್​ ಕೈಗೊಳ್ಳಲಾಗಿದೆ.

ಚಾಮರಾಜನಗರ: ರಾಹುಲ್ ಗಾಂಧಿ ನೇತೃತ್ವದ ಭಾರತ್​ ಜೋಡೋ ಯಾತ್ರೆ ಇಂದು ಗುಂಡ್ಲುಪೇಟೆ ಮೂಲಕ ರಾಜ್ಯ ಪ್ರವೇಶಿಸಲಿರುವ ಹಿನ್ನೆಲೆಯಲ್ಲಿ ಖಾಕಿ ಹೈ ಅಲರ್ಟ್ ಆಗಿದ್ದು, ಬಿಗಿ ಪೊಲೀಸ್ ಪಹರೆ ನಿಯೋಜಿಸಲಾಗಿದೆ.

30 ಸಾವಿರಕ್ಕೂ ಹೆಚ್ಚು ಮಂದಿ ರಾಹುಲ್ ಗಾಂಧಿ ಜೊತೆ ಇಂದು ಹೆಜ್ಜೆ ಹಾಕುವ ನಿರೀಕ್ಷೆ ಇದೆ. ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಪೊಲೀಸ್ ಇಲಾಖೆ ಹೆಚ್ಚಿನ ಮುತುವರ್ಜಿ ವಹಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ.

ಭಾರತ್​ ಜೋಡೋ ಯಾತ್ರೆಗೆ ಖಾಕಿ ಅಲರ್ಟ್

ಭಾರತ್​ ಜೋಡೋ ಯಾತ್ರೆಗೆ ಮೂವರು ಎಸ್​ಪಿ, ಎಂಟು ಜನ ಡಿವೈಎಸ್​ಪಿ, 25 ಇನ್ಸ್​ಪೆಕ್ಟರ್, 50 ಜನ ಸಬ್ ಇನ್ಸ್​ಪೆಕ್ಟರ್, ಒಂದು ಸಾವಿರಕ್ಕೂ ಅಧಿಕ ಕಾನ್ಸ್​ಟೇಬಲ್​, ಕೆಎಸ್​ಆರ್​ಪಿ, 10ಕ್ಕೂ ಅಧಿಕ ಡಿಆರ್ ಸಿಬ್ಬಂದಿ ನಿಯೋಜಿಸಲಾಗಿದೆ. ಕಾನೂನುಬಾಹಿರ ಕೃತ್ಯಕ್ಕೆ ಯಾರೇ ಮುಂದಾದರೂ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು. ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ: ವಾಹನ ಸಂಚಾರ ಮಾರ್ಗ ಬದಲಾವಣೆ, ಮದ್ಯ ನಿಷೇಧ

ವೇದಿಕೆ ಮೇಲೆ 240 ಮಂದಿ: ಡಾ.ಬಿ.ಆರ್.ಅಂಬೇಡ್ಕರ್ ಭವನದ ಮುಂಭಾಗ ಬೃಹತ್ ಸಭೆ ನಡೆಯಲಿದ್ದು, ವೇದಿಕೆ ಮೇಲೆ 240 ಮಂದಿ ಆಸೀನರಾಗಲಿದ್ದಾರೆ. ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕುವ ಪಾದಯಾತ್ರಿಗಳು, ರಾಜ್ಯ ಮಟ್ಟದ ನಾಯಕರುಗಳು ವೇದಿಕೆಯಲ್ಲಿ ಇರಲಿದ್ದು ರಾಜ್ಯದ ಎಲ್ಲಾ ನಾಯಕರುಗಳು ಹೆಜ್ಜೆ ಹಾಕಲಿದ್ದಾರೆ ಎಂದರು.

ವೇದಿಕೆ ಕಾರ್ಯಕ್ರಮ ಮುಗಿಯುತ್ತಿದ್ದಂತೆ ನಡಿಗೆ ಆರಂಭಿಸಲಿರುವ ರಾಹುಲ್ ಗಾಂಧಿ, ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿನ ಕೆಬ್ಬೆಕಟ್ಟೆ ಶನೇಶ್ವರ ದೇವಾಲಯದ ಬಳಿ ಸೋಲಿಗರು, ಆಮ್ಲಜನಕ ದುರಂತದಲ್ಲಿ ಮಡಿದ ಸಂತ್ರಸ್ತರ ಜೊತೆ ಸಂವಾದ ನಡೆಸಲಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಸೆ.30 ರಿಂದ 'ಭಾರತ್ ಜೋಡೋ ಪಾದಯಾತ್ರೆ' ಆರಂಭ

Last Updated :Sep 30, 2022, 10:04 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.