ETV Bharat / state

ರಾಷ್ಟ್ರಪತಿ ಪ್ರವಾಸ: ಬಿಳಿಗಿರಿರಂಗನ ಬೆಟ್ಟಕ್ಕೆ 2 ದಿನ ನಿರ್ಬಂಧ, ವಾಯುಸೇನೆಯಿಂದ ಭದ್ರತೆ ಪರಿಶೀಲನೆ

author img

By

Published : Oct 5, 2021, 6:22 PM IST

security alert
ವಾಯುಸೇನೆಯಿಂದ ಭದ್ರತೆ ಪರಿಶೀಲನೆ

ಚಾಮರಾಜನಗರ ಜಿಲ್ಲೆಗೆ ರಾಷ್ಟ್ರಪತಿ ಭೇಟಿ ಹಿನ್ನೆಲೆ ಅ.6 ಮತ್ತು 7 ರಂದು ಬಿಳಿಗಿರಿರಂಗನಬೆಟ್ಟಕ್ಕೆ ಸಾರ್ವಜನಿಕರು, ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಡಿಸಿ ಆದೇಶ ಹೊರಡಿಸಿದ್ದಾರೆ.

ಚಾಮರಾಜನಗರ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಿಲ್ಲಾ ಪ್ರವಾಸ ಹಿನ್ನಲೆ ರಾಷ್ಟ್ರಪತಿ ಅಂಗರಕ್ಷಕರು ಜಿಲ್ಲೆಗೆ ಆಗಮಿಸಿ ಕಟ್ಟೆಚ್ಚರ ವಹಿಸಿದ್ದಾರೆ. ಅಲ್ಲದೇ, ಪೊಲೀಸರಿಗೂ ಕೆಲ ಸೂಚನೆಗಳನ್ನು ಕೊಟ್ಟಿದ್ದಾರೆ.

ಅಂಗರಕ್ಷಕರು(PBG) ಇಂದು ವಾಯುಸೇನೆ ಹೆಲಿಕಾಪ್ಟರ್ ಮೂಲಕ ಚಾಮರಾಜನಗರ ಮತ್ತು ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಿ ಮೂರು - ನಾಲ್ಕು ಬಾರಿ ಹಾರಾಟ ನಡೆಸಿದ್ದಾರೆ.

president-ramnath-kovind-tour-planning-to-biligiriranganabetta
ವಾಯುಸೇನೆಯಿಂದ ಭದ್ರತೆ ಪರಿಶೀಲನೆ

ಈಗಾಗಲೇ ಚಾಮರಾಜನಗರ ಮೆಡಿಕಲ್ ಕಾಲೇಜು ಮತ್ತು ಬಿಳಿಗಿರಿರಂಗನ ಬೆಟ್ಟ ಸಮೀಪ ನಿರ್ಮಾಣವಾಗಿರುವ ಹೆಲಿಪ್ಯಾಡ್​ಗಳನ್ನು ಪರಿಶೀಲಿಸಿದ್ದಾರೆ. ರಸ್ತೆ ಮಾರ್ಗದಲ್ಲೂ ಸೈನಿಕರು ಟ್ರಯಲ್ ನಡೆಸಿದ್ದಾರೆ. ಬಿಳಿಗಿರಿರಂಗನಬೆಟ್ಟ ದೇವಾಲಯಕ್ಕೆ ರಾಷ್ಟ್ರಪತಿಗಳ ಖಾಸಗಿ ಭೇಟಿಯಾಗಿರುವುದರಿಂದ ಪತ್ರಕರ್ತರ ಪ್ರವೇಶಕ್ಕೆ ಅಂದು ನಿರ್ಬಂಧ ಹೇರಲಾಗಿದೆ.

ಎರಡು ದಿನ ಸಾರ್ವಜನಿಕರಿಗೆ ನಿರ್ಬಂಧ: ಚಾಮರಾಜನಗರ ಜಿಲ್ಲೆಗೆ ರಾಷ್ಟ್ರಪತಿ ಭೇಟಿ ಹಿನ್ನಲೆ ಅ.6 ಮತ್ತು 7 ರಂದು ಬಿಳಿಗಿರಿರಂಗನಬೆಟ್ಟಕ್ಕೆ ಸಾರ್ವಜನಿಕರು, ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಡಿಸಿ ಆದೇಶಿಸಿದ್ದಾರೆ.

ಅ. 7 ರಂದು ವಡ್ಡಗೆರೆ ಹೆಲಿಪ್ಯಾಡ್, ಬಿಳಿಗಿರಿರಂಗನ ಬೆಟ್ಟ, ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜು ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. 15 ಕಿ.ಮೀ ವ್ಯಾಪ್ತಿಯಲ್ಲಿ ಮಾನವರಹಿತ ಏರ್ ಕ್ರಾಫ್ಟ್ ಬಳಕೆ, ಏರ್ ಬಲೂನ್​ಗಳ ಹಾರಾಟ, ಬ್ಯಾನರ್ ಬಂಟಿಂಗ್ಸ್ ಅಳವಡಿಕೆಗೆ ನಿಷೇಧ ಹೇರಲಾಗಿದೆ.

ಓದಿ: ಸಾರಿಗೆ ನೌಕರರ ವೇತನ ವಿಳಂಬ: ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ ಹೆಚ್​​ಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.